July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೆ.27: ವೇಣೂರು ಬಜಿರೆಯಲ್ಲಿ ‘ಹಿಂದೂ ರಾಷ್ಟ್ರ’ ಸ್ಥಾಪನೆಗಾಗಿ ಜಾಗೃತಿ ಸಭೆ

ಬೆಳ್ತಂಗಡಿ : ಪ್ರಸ್ತುತ ಹಿಂದೂ ಧರ್ಮದ ಮೇಲಾಗುತ್ತಿರುವ ಆಘಾತಗಳನ್ನು ತಡೆಯಲು ಮತ್ತು ಹಿಂದೂಗಳನ್ನು ಸಂಘಟಿಸಲು ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ‘ಹಿಂದೂ ರಾಷ್ಟ್ರ ಜಾಗೃತಿ ಸಭೆ’ ಯನ್ನು ಆಯೋಜಿಸಲಾಗಿದೆ. ಈ ಸಭೆಯು ಬತ್ತಾರು ಬಜಿರೆಯ ಶ್ರೀ ವಿಶ್ವೇಶ್ವರ ಭಜನಾ ಮಂದಿರದ ವಠಾರದಲ್ಲಿ ಫೆ. 27, ರಂದು ಬೆಳಿಗ್ಗೆ 10:00 ಗಂಟೆಗೆ ಜರುಗಲಿದೆ.

ಕೇವಲ 65 ಲಕ್ಷ ಜನಸಂಖ್ಯೆ ಇರುವ ಇಸ್ರೇಲ್ ‘ಯಹೂದಿ ರಾಷ್ಟ್ರ’ವಾಗಲು ಸಾಧ್ಯವಿರುವಾಗ, 100 ಕೋಟಿ ಹಿಂದೂಗಳಿರುವ ಭಾರತವನ್ನು ಆದರ್ಶ ‘ಹಿಂದೂ ರಾಷ್ಟ್ರ’ ಎಂದು ಘೋಷಿಸಲು ಪ್ರತಿಯೊಬ್ಬ ಹಿಂದೂವೂ ಜಾಗೃತಗೊಳ್ಳಬೇಕಾದ ಅನಿವಾರ್ಯತೆ ಇದೆ ಎಂದು ಸಮಿತಿಯು ಈ ಮೂಲಕ ಕರೆ ನೀಡಿದೆ.

ದೇಶದಲ್ಲಿ ಹೆಚ್ಚುತ್ತಿರುವ ಗೋಹತ್ಯೆ, ಮತಾಂತರ, ಲವ್ ಜಿಹಾದ್ ಮತ್ತು ವಕ್ಸ್ ಕಾನೂನಿನಿಂದ ದೇವಸ್ಥಾನ ಹಾಗೂ ಹಿಂದೂಗಳ ಭೂಮಿಗೆ ಉಂಟಾಗುತ್ತಿರುವ ಆಪತ್ತುಗಳ ವಿರುದ್ಧ ಈ ಸಭೆಯಲ್ಲಿ ಧ್ವನಿ ಎತ್ತಲಾಗುವುದು. ಹಿಂದೂಗಳಿಗೆ ನ್ಯಾಯ ಸಿಗಲು ಮತ್ತು ದೇವಸ್ಥಾನಗಳ ಸಂಪತ್ತು ಹಿಂದೂ ಧರ್ಮ ಕಾರ್ಯಕ್ಕೆ ಬಳಕೆಯಾಗಲು ‘ಹಿಂದೂ ರಾಷ್ಟ್ರ’ವೇ ಏಕೈಕ ಪರ್ಯಾಯವಾಗಿದೆ. ಸ್ವಾತಂತ್ರ್ಯ ಪೂರ್ವದ ಹಿಂದೂ ರಾಷ್ಟ್ರವನ್ನು ಪುನಃ ಸ್ಥಾಪಿಸುವ ದಿಶೆಯಲ್ಲಿ, ಪ್ರತಿಯೊಬ್ಬ ಧರ್ಮಾಭಿಮಾನಿ ಹಿಂದೂಗಳು ಈ ಸಭೆಯಲ್ಲಿ ಉಪಸ್ಥಿತರಿರುವಂತೆ ತಿಳಿಸಲಾಗಿದೆ.

Related posts

ಸಿಇಟಿ ಯಲ್ಲಿ ಎಕ್ಸೆಲ್ ವಿದ್ಯಾರ್ಥಿಗಳ ಅಮೋಘ ಸಾಧನೆ, ಜೆಇಇ, ಎನ್ ಡಿ ಎ, ನಾಟಾ ಸೇರಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿಯೂ ಅತ್ಯುತ್ತಮ ಸಾಧನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಸ್ಸಾಂ ರಾಜ್ಯದ ಸಂಸದ ಕಾಮಾಖ್ಯ ಪ್ರಸಾದ ತಾಸಾ ಭೇಟಿ

Suddi Udaya

ಮುಗೇರಡ್ಕ ನೆಕ್ಕರಾಜೆ ನಿವಾಸಿ ವಿಶ್ವನಾಥ್ ಗೌಡ ನಿಧನ

Suddi Udaya

ಎಸ್.ಡಿ.ಎಂ. ಕಾಲೇಜಿನಲ್ಲಿ ರೋವರ್ಸ್ & ರೇಂಜರ್ಸ್ ಸಂಬಂಧಿತ ‘ವಸ್ತುಪ್ರದರ್ಶನ’ ಹಾಗೂ ‘ಅಂತರ್ ತರಗತಿ ಸ್ಪರ್ಧೆ’ ಪ್ರಮುಕ’ 23

Suddi Udaya

ಕಡಬ ಐಐಸಿಟಿ ಮೊಂಟೆಸ್ಸರಿ ತರಬೇತಿ ಸಂಸ್ಥೆಗೆ ಶೇ.100 ಫಲಿತಾಂಶ: 11 ವಿದ್ಯಾರ್ಥಿನಿಯರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ: ಪ್ರತಿಯೊಬ್ಬರು ಶಿಕ್ಷಕಿಯರಾಗಿ ನೇಮಕ

Suddi Udaya

ಪುಂಜಾಲಕಟ್ಟೆ- ಬಿಸಿ ರೋಡ್ ಮಾದರಿಯಲ್ಲಿ ರಸ್ತೆ ವಿಸ್ತರಣೆ ಮಾಡುವಂತೆ ಬೆಳ್ತಂಗಡಿ ವರ್ತಕರ ಸಂಘದ ಅಧ್ಯಕ್ಷ ರೊನಾಲ್ಡೊ ಲೋಬೋ ಮನವಿ

Suddi Udaya
error: Content is protected !!