23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಚಿಂತನಾ ದಿನಾಚರಣೆ

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಧರ್ಮಸ್ಥಳದಲ್ಲಿ ಸ್ಕೌಟ್ ಗೈಡ್ಸ್, ಕಬ್ ಬುಲ್ ಬುಲ್ ಹಾಗೂ ಬನ್ನೀಸ್ ಜೊತೆಯಾಗಿ ವಿಶ್ವ ಚಿಂತನಾ ದಿನಾಚರಣೆಯನ್ನು ಆಚರಿಸಲಾಯಿತು.

ವಿಶ್ವ ಚಿಂತನ ದಿನಾಚರಣೆಯ ಪ್ರಯುಕ್ತ ಮಾನವ ಸರಪಳಿಯನ್ನು ಆಯೋಜಿಸಲಾಯಿತು. ಸ್ಕೌಟ್ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡು ಬಳಿಕ ಸ್ಕೌಟ್ ಗೈಡ್, ಕಬ್ ಬುಲ್ ಬುಲ್ ಬನ್ನಿ ಇದರ ಪ್ರತಿಜ್ಞೆಯೊಂದಿಗೆ ಮುಂದುವರಿದು ಬೇಡನ್ ಪವೆಲ್ ಅವರ ಭಾವಚಿತ್ರಕ್ಕೆ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಮೊದಲುಗೊಂಡು ನಂತರ ಎಲ್ಲಾ ದಳನಾಯಕರುಗಳು ವಿದ್ಯಾರ್ಥಿಗಳು ಪುಷ್ಪ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಆ ದಿನದ ಮಹತ್ವದ ಕುರಿತಾಗಿ ಸ್ಕೌಟ್ ವಿದ್ಯಾರ್ಥಿ ಅರುಷ್ ಪಿ ಜೋಶಿ ದಿನದ ಚಿಂತನ ನಡೆಸಿಕೊಟ್ಟರು. ಈ ಕಾರ್ಯಕ್ರಮವನ್ನು ಗೈಡ್ ವಿದ್ಯಾರ್ಥಿನಿ ಕುಮಾರಿ ವೈಭವಿ ನಡೆಸಿಕೊಟ್ಟರು. ಬುಲ್ ಬುಲ್ ವಿದ್ಯಾರ್ಥಿನಿ ಕುಮಾರಿ ಶ್ರೇಯಸಿ ವಂದಿಸಿದರು. ಈ ಸಂದರ್ಭದಲ್ಲಿ ಎಲ್ಲಾ ಸ್ಕೌಟ್ ಮಾಸ್ಟರ್ ಗಳು ಕಬ್ ಮಾಸ್ಟರ್ ಗಳು ಗೈಡ್ ಹಾಗೂ ಬುಲ್ ಬುಲ್ ಲೀಡರ್ ಗಳು ಉಪಸ್ಥಿತರಿದ್ದರು.

Related posts

ಪಾರೆಂಕಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ, ಮಹಿಳಾ – ಯುವ ಬಿಲ್ಲವ ವೇದಿಕೆ ವತಿಯಿಂದ ಗುರುಪೂಜೆ, ಸಾಧಕರಿಗೆ ಸನ್ಮಾನ – ಸಾಂಸ್ಕೃತಿಕ ಝೇಂಕಾರ

Suddi Udaya

ಕನ್ಯಾಡಿ ಶ್ರೀ ರಾಮ ಕ್ಷೇತ್ರದ ನೂತನ ಟ್ರಸ್ಟಿಯಾಗಿ ಬಿ ಪೀತಾಂಬರ ಹೆರಾಜೆ

Suddi Udaya

ರಾಜಕೇಸರಿ ಸೇವಾ ಟ್ರಸ್ಟ್‌ನ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಅಂಬೇಡ್ಕರ್ ಸೇವರತ್ನ ಅಂತರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ

Suddi Udaya

ಬಂಟರ ಯಾನೆ ನಾಡವರ ಮಾತೃ ಸಂಘದಿಂದ ಆರ್ಥಿಕ ಸಹಾಯ ಧನ ವಿತರಣೆ

Suddi Udaya

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಸ್ಟಾನ (ರಿ) ಪ್ರಾಯೋಜಿತ ಬಟ್ಟೆಯ ಕಸೂತಿ ಆರಿ ಕೌಶಲ್ಯ ಸ್ವ ಉದ್ಯೋಗ ತರಬೇತಿಯ ಸಮಾರೋಪ ಕಾರ್ಯಕ್ರಮ

Suddi Udaya

ಕಣ್ತಪ್ಪಿನಿಂದ ಇನ್ನೊಬ್ಬರ ಖಾತೆಗೆ ಹಣ ವರ್ಗಾವಣೆ: ಮರುಪಾವತಿಸಲು ನಿರಾಕರಣೆ ; ದೂರು ದಾಖಲು

Suddi Udaya
error: Content is protected !!