September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಚಿಂತನಾ ದಿನಾಚರಣೆ

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಧರ್ಮಸ್ಥಳದಲ್ಲಿ ಸ್ಕೌಟ್ ಗೈಡ್ಸ್, ಕಬ್ ಬುಲ್ ಬುಲ್ ಹಾಗೂ ಬನ್ನೀಸ್ ಜೊತೆಯಾಗಿ ವಿಶ್ವ ಚಿಂತನಾ ದಿನಾಚರಣೆಯನ್ನು ಆಚರಿಸಲಾಯಿತು.

ವಿಶ್ವ ಚಿಂತನ ದಿನಾಚರಣೆಯ ಪ್ರಯುಕ್ತ ಮಾನವ ಸರಪಳಿಯನ್ನು ಆಯೋಜಿಸಲಾಯಿತು. ಸ್ಕೌಟ್ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡು ಬಳಿಕ ಸ್ಕೌಟ್ ಗೈಡ್, ಕಬ್ ಬುಲ್ ಬುಲ್ ಬನ್ನಿ ಇದರ ಪ್ರತಿಜ್ಞೆಯೊಂದಿಗೆ ಮುಂದುವರಿದು ಬೇಡನ್ ಪವೆಲ್ ಅವರ ಭಾವಚಿತ್ರಕ್ಕೆ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಮೊದಲುಗೊಂಡು ನಂತರ ಎಲ್ಲಾ ದಳನಾಯಕರುಗಳು ವಿದ್ಯಾರ್ಥಿಗಳು ಪುಷ್ಪ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಆ ದಿನದ ಮಹತ್ವದ ಕುರಿತಾಗಿ ಸ್ಕೌಟ್ ವಿದ್ಯಾರ್ಥಿ ಅರುಷ್ ಪಿ ಜೋಶಿ ದಿನದ ಚಿಂತನ ನಡೆಸಿಕೊಟ್ಟರು. ಈ ಕಾರ್ಯಕ್ರಮವನ್ನು ಗೈಡ್ ವಿದ್ಯಾರ್ಥಿನಿ ಕುಮಾರಿ ವೈಭವಿ ನಡೆಸಿಕೊಟ್ಟರು. ಬುಲ್ ಬುಲ್ ವಿದ್ಯಾರ್ಥಿನಿ ಕುಮಾರಿ ಶ್ರೇಯಸಿ ವಂದಿಸಿದರು. ಈ ಸಂದರ್ಭದಲ್ಲಿ ಎಲ್ಲಾ ಸ್ಕೌಟ್ ಮಾಸ್ಟರ್ ಗಳು ಕಬ್ ಮಾಸ್ಟರ್ ಗಳು ಗೈಡ್ ಹಾಗೂ ಬುಲ್ ಬುಲ್ ಲೀಡರ್ ಗಳು ಉಪಸ್ಥಿತರಿದ್ದರು.

Related posts

ಉಜಿರೆ: ಎಸ್.ಡಿ.ಎಂ ಯಕ್ಷಗಾನ ಕಲಾಕೇಂದ್ರದ ವಿದ್ಯಾರ್ಥಿಗಳಿಂದ ಸೈಂಧವ ವಧೆ ತಾಳಮದ್ದಳೆ

Suddi Udaya

ಎಸ್‌ಎಂವೈಎಂ ಸೆಂಟ್ ಅಲ್ಫೋನ್ಸ ಚರ್ಚ್ ವತಿಯಿಂದ ಸ್ವಚ್ಛತಾ ಅಭಿಯಾನ

Suddi Udaya

ಗುರುವಾಯನಕೆರೆ: ಶ್ರೀಮತಿ ಶಾಂತಾ ಪ್ರಭು ನಿಧನ

Suddi Udaya

ಇಚ್ಚೂರು ಶ್ರೀ ಬಾಲಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆಯ ಸಂದರ್ಭ ಸುರೇಶ ಪುತ್ತೂರಾಯರಿಗೆ ಸನ್ಮಾನ

Suddi Udaya

ಬಂದಾರು: ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನ ಬ್ರಹ್ಮಕಲಶೋತ್ಸವದ ಪ್ರಯುಕ್ತ ಚಪ್ಪರ ಮುಹೂರ್ತ

Suddi Udaya

ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಕವನ ವಾಚನ ಸ್ಪರ್ಧೆ: ಪೆರ್ಲ-ಬೈಪಾಡಿ ಸ.ಪ್ರೌ.ಶಾಲೆಯ ವಿದ್ಯಾರ್ಥಿನಿ ಕು|ನಿತ್ಯಶ್ರೀ ಖಂಡಿಗ 3 ನೇ ಸಮಾಧಾನಕರ ಪ್ರಶಸ್ತಿ

Suddi Udaya
error: Content is protected !!