25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಚಿಂತನಾ ದಿನಾಚರಣೆ

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಧರ್ಮಸ್ಥಳದಲ್ಲಿ ಸ್ಕೌಟ್ ಗೈಡ್ಸ್, ಕಬ್ ಬುಲ್ ಬುಲ್ ಹಾಗೂ ಬನ್ನೀಸ್ ಜೊತೆಯಾಗಿ ವಿಶ್ವ ಚಿಂತನಾ ದಿನಾಚರಣೆಯನ್ನು ಆಚರಿಸಲಾಯಿತು.

ವಿಶ್ವ ಚಿಂತನ ದಿನಾಚರಣೆಯ ಪ್ರಯುಕ್ತ ಮಾನವ ಸರಪಳಿಯನ್ನು ಆಯೋಜಿಸಲಾಯಿತು. ಸ್ಕೌಟ್ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡು ಬಳಿಕ ಸ್ಕೌಟ್ ಗೈಡ್, ಕಬ್ ಬುಲ್ ಬುಲ್ ಬನ್ನಿ ಇದರ ಪ್ರತಿಜ್ಞೆಯೊಂದಿಗೆ ಮುಂದುವರಿದು ಬೇಡನ್ ಪವೆಲ್ ಅವರ ಭಾವಚಿತ್ರಕ್ಕೆ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಮೊದಲುಗೊಂಡು ನಂತರ ಎಲ್ಲಾ ದಳನಾಯಕರುಗಳು ವಿದ್ಯಾರ್ಥಿಗಳು ಪುಷ್ಪ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಆ ದಿನದ ಮಹತ್ವದ ಕುರಿತಾಗಿ ಸ್ಕೌಟ್ ವಿದ್ಯಾರ್ಥಿ ಅರುಷ್ ಪಿ ಜೋಶಿ ದಿನದ ಚಿಂತನ ನಡೆಸಿಕೊಟ್ಟರು. ಈ ಕಾರ್ಯಕ್ರಮವನ್ನು ಗೈಡ್ ವಿದ್ಯಾರ್ಥಿನಿ ಕುಮಾರಿ ವೈಭವಿ ನಡೆಸಿಕೊಟ್ಟರು. ಬುಲ್ ಬುಲ್ ವಿದ್ಯಾರ್ಥಿನಿ ಕುಮಾರಿ ಶ್ರೇಯಸಿ ವಂದಿಸಿದರು. ಈ ಸಂದರ್ಭದಲ್ಲಿ ಎಲ್ಲಾ ಸ್ಕೌಟ್ ಮಾಸ್ಟರ್ ಗಳು ಕಬ್ ಮಾಸ್ಟರ್ ಗಳು ಗೈಡ್ ಹಾಗೂ ಬುಲ್ ಬುಲ್ ಲೀಡರ್ ಗಳು ಉಪಸ್ಥಿತರಿದ್ದರು.

Related posts

ಮೇಲಂತಬೆಟ್ಟು ಗ್ರಾ.ಪಂ. ವ್ಯಾಪ್ತಿಯ ಅರ್ಹ ಫಲಾನುಭವಿಗಳಿಗೆ ಉಜ್ವಲ ಗ್ಯಾಸ್ ವಿತರಣೆ

Suddi Udaya

ನಾವೂರು ಸ. ಹಿ. ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ ಮತ್ತು ಜಾಗೃತಿ ಕಾರ್ಯಕ್ರಮ

Suddi Udaya

ಕಳೆಂಜ: ಕಾಯರ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಳೆಗಾಗಿ ಸಾಮೂಹಿಕ ಪ್ರಾರ್ಥನೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ತ್ರೋಬಾಲ್ ಪಂದ್ಯಾಟ

Suddi Udaya

ಕೊಕ್ಕಡ ಗ್ರಾ.ಪಂ. ನಲ್ಲಿ ಉದ್ಯೋಗಕಾತರಿ ಯೋಜನೆಯಡಿ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಐದನೇ ವರ್ಷದ ದೀಪಾವಳಿ ದೋಸೆ ಹಬ್ಬ

Suddi Udaya
error: Content is protected !!