ಬೆಳ್ತಂಗಡಿ : ಪ್ರಸ್ತುತ ಹಿಂದೂ ಧರ್ಮದ ಮೇಲಾಗುತ್ತಿರುವ ಆಘಾತಗಳನ್ನು ತಡೆಯಲು ಮತ್ತು ಹಿಂದೂಗಳನ್ನು ಸಂಘಟಿಸಲು ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ‘ಹಿಂದೂ ರಾಷ್ಟ್ರ ಜಾಗೃತಿ ಸಭೆ’ ಯನ್ನು ಆಯೋಜಿಸಲಾಗಿದೆ. ಈ ಸಭೆಯು ಬತ್ತಾರು ಬಜಿರೆಯ ಶ್ರೀ ವಿಶ್ವೇಶ್ವರ ಭಜನಾ ಮಂದಿರದ ವಠಾರದಲ್ಲಿ ಫೆ. 27, ರಂದು ಬೆಳಿಗ್ಗೆ 10:00 ಗಂಟೆಗೆ ಜರುಗಲಿದೆ.
ಕೇವಲ 65 ಲಕ್ಷ ಜನಸಂಖ್ಯೆ ಇರುವ ಇಸ್ರೇಲ್ ‘ಯಹೂದಿ ರಾಷ್ಟ್ರ’ವಾಗಲು ಸಾಧ್ಯವಿರುವಾಗ, 100 ಕೋಟಿ ಹಿಂದೂಗಳಿರುವ ಭಾರತವನ್ನು ಆದರ್ಶ ‘ಹಿಂದೂ ರಾಷ್ಟ್ರ’ ಎಂದು ಘೋಷಿಸಲು ಪ್ರತಿಯೊಬ್ಬ ಹಿಂದೂವೂ ಜಾಗೃತಗೊಳ್ಳಬೇಕಾದ ಅನಿವಾರ್ಯತೆ ಇದೆ ಎಂದು ಸಮಿತಿಯು ಈ ಮೂಲಕ ಕರೆ ನೀಡಿದೆ.
ದೇಶದಲ್ಲಿ ಹೆಚ್ಚುತ್ತಿರುವ ಗೋಹತ್ಯೆ, ಮತಾಂತರ, ಲವ್ ಜಿಹಾದ್ ಮತ್ತು ವಕ್ಸ್ ಕಾನೂನಿನಿಂದ ದೇವಸ್ಥಾನ ಹಾಗೂ ಹಿಂದೂಗಳ ಭೂಮಿಗೆ ಉಂಟಾಗುತ್ತಿರುವ ಆಪತ್ತುಗಳ ವಿರುದ್ಧ ಈ ಸಭೆಯಲ್ಲಿ ಧ್ವನಿ ಎತ್ತಲಾಗುವುದು. ಹಿಂದೂಗಳಿಗೆ ನ್ಯಾಯ ಸಿಗಲು ಮತ್ತು ದೇವಸ್ಥಾನಗಳ ಸಂಪತ್ತು ಹಿಂದೂ ಧರ್ಮ ಕಾರ್ಯಕ್ಕೆ ಬಳಕೆಯಾಗಲು ‘ಹಿಂದೂ ರಾಷ್ಟ್ರ’ವೇ ಏಕೈಕ ಪರ್ಯಾಯವಾಗಿದೆ. ಸ್ವಾತಂತ್ರ್ಯ ಪೂರ್ವದ ಹಿಂದೂ ರಾಷ್ಟ್ರವನ್ನು ಪುನಃ ಸ್ಥಾಪಿಸುವ ದಿಶೆಯಲ್ಲಿ, ಪ್ರತಿಯೊಬ್ಬ ಧರ್ಮಾಭಿಮಾನಿ ಹಿಂದೂಗಳು ಈ ಸಭೆಯಲ್ಲಿ ಉಪಸ್ಥಿತರಿರುವಂತೆ ತಿಳಿಸಲಾಗಿದೆ.











