July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೆ.27: ವೇಣೂರು ಬಜಿರೆಯಲ್ಲಿ ‘ಹಿಂದೂ ರಾಷ್ಟ್ರ’ ಸ್ಥಾಪನೆಗಾಗಿ ಜಾಗೃತಿ ಸಭೆ

ಬೆಳ್ತಂಗಡಿ : ಪ್ರಸ್ತುತ ಹಿಂದೂ ಧರ್ಮದ ಮೇಲಾಗುತ್ತಿರುವ ಆಘಾತಗಳನ್ನು ತಡೆಯಲು ಮತ್ತು ಹಿಂದೂಗಳನ್ನು ಸಂಘಟಿಸಲು ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ‘ಹಿಂದೂ ರಾಷ್ಟ್ರ ಜಾಗೃತಿ ಸಭೆ’ ಯನ್ನು ಆಯೋಜಿಸಲಾಗಿದೆ. ಈ ಸಭೆಯು ಬತ್ತಾರು ಬಜಿರೆಯ ಶ್ರೀ ವಿಶ್ವೇಶ್ವರ ಭಜನಾ ಮಂದಿರದ ವಠಾರದಲ್ಲಿ ಫೆ. 27, ರಂದು ಬೆಳಿಗ್ಗೆ 10:00 ಗಂಟೆಗೆ ಜರುಗಲಿದೆ.

ಕೇವಲ 65 ಲಕ್ಷ ಜನಸಂಖ್ಯೆ ಇರುವ ಇಸ್ರೇಲ್ ‘ಯಹೂದಿ ರಾಷ್ಟ್ರ’ವಾಗಲು ಸಾಧ್ಯವಿರುವಾಗ, 100 ಕೋಟಿ ಹಿಂದೂಗಳಿರುವ ಭಾರತವನ್ನು ಆದರ್ಶ ‘ಹಿಂದೂ ರಾಷ್ಟ್ರ’ ಎಂದು ಘೋಷಿಸಲು ಪ್ರತಿಯೊಬ್ಬ ಹಿಂದೂವೂ ಜಾಗೃತಗೊಳ್ಳಬೇಕಾದ ಅನಿವಾರ್ಯತೆ ಇದೆ ಎಂದು ಸಮಿತಿಯು ಈ ಮೂಲಕ ಕರೆ ನೀಡಿದೆ.

ದೇಶದಲ್ಲಿ ಹೆಚ್ಚುತ್ತಿರುವ ಗೋಹತ್ಯೆ, ಮತಾಂತರ, ಲವ್ ಜಿಹಾದ್ ಮತ್ತು ವಕ್ಸ್ ಕಾನೂನಿನಿಂದ ದೇವಸ್ಥಾನ ಹಾಗೂ ಹಿಂದೂಗಳ ಭೂಮಿಗೆ ಉಂಟಾಗುತ್ತಿರುವ ಆಪತ್ತುಗಳ ವಿರುದ್ಧ ಈ ಸಭೆಯಲ್ಲಿ ಧ್ವನಿ ಎತ್ತಲಾಗುವುದು. ಹಿಂದೂಗಳಿಗೆ ನ್ಯಾಯ ಸಿಗಲು ಮತ್ತು ದೇವಸ್ಥಾನಗಳ ಸಂಪತ್ತು ಹಿಂದೂ ಧರ್ಮ ಕಾರ್ಯಕ್ಕೆ ಬಳಕೆಯಾಗಲು ‘ಹಿಂದೂ ರಾಷ್ಟ್ರ’ವೇ ಏಕೈಕ ಪರ್ಯಾಯವಾಗಿದೆ. ಸ್ವಾತಂತ್ರ್ಯ ಪೂರ್ವದ ಹಿಂದೂ ರಾಷ್ಟ್ರವನ್ನು ಪುನಃ ಸ್ಥಾಪಿಸುವ ದಿಶೆಯಲ್ಲಿ, ಪ್ರತಿಯೊಬ್ಬ ಧರ್ಮಾಭಿಮಾನಿ ಹಿಂದೂಗಳು ಈ ಸಭೆಯಲ್ಲಿ ಉಪಸ್ಥಿತರಿರುವಂತೆ ತಿಳಿಸಲಾಗಿದೆ.

Related posts

ಪಿಲ್ಯ: ಆರೋಗ್ಯ ಕ್ಷೇಮ ಕೇಂದ್ರದ ಉದ್ಘಾಟನೆ

Suddi Udaya

ಅಂಡಿಂಜೆಯಲ್ಲಿ ಭಟ್ಸ್ ಮೆಡಿಕಲ್ ಶುಭಾರಂಭ

Suddi Udaya

ಉಜಿರೆ ಟಿ.ಬಿ ಕ್ರಾಸ್ ಬಳಿ ಚರಂಡಿಗೆ ಉರುಳಿದ ಪಿಕಪ್

Suddi Udaya

ಪುಂಜಾಲಕಟ್ಟೆ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ವಾರ್ಷಿಕ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬದ್ಯಾರು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ಆದಿಚುಂಚನಗಿರಿ ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿರವರನ್ನುಭೇಟಿ ಮಾಡಿದ ಕಿರಣ್ ಚಂದ್ರ ಪುಷ್ಪಗಿರಿ

Suddi Udaya
error: Content is protected !!