ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೆ.27: ವೇಣೂರು ಬಜಿರೆಯಲ್ಲಿ ‘ಹಿಂದೂ ರಾಷ್ಟ್ರ’ ಸ್ಥಾಪನೆಗಾಗಿ ಜಾಗೃತಿ ಸಭೆ

ಬೆಳ್ತಂಗಡಿ : ಪ್ರಸ್ತುತ ಹಿಂದೂ ಧರ್ಮದ ಮೇಲಾಗುತ್ತಿರುವ ಆಘಾತಗಳನ್ನು ತಡೆಯಲು ಮತ್ತು ಹಿಂದೂಗಳನ್ನು ಸಂಘಟಿಸಲು ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ‘ಹಿಂದೂ ರಾಷ್ಟ್ರ ಜಾಗೃತಿ ಸಭೆ’ ಯನ್ನು ಆಯೋಜಿಸಲಾಗಿದೆ. ಈ ಸಭೆಯು ಬತ್ತಾರು ಬಜಿರೆಯ ಶ್ರೀ ವಿಶ್ವೇಶ್ವರ ಭಜನಾ ಮಂದಿರದ ವಠಾರದಲ್ಲಿ ಫೆ. 27, ರಂದು ಬೆಳಿಗ್ಗೆ 10:00 ಗಂಟೆಗೆ ಜರುಗಲಿದೆ.

ಕೇವಲ 65 ಲಕ್ಷ ಜನಸಂಖ್ಯೆ ಇರುವ ಇಸ್ರೇಲ್ ‘ಯಹೂದಿ ರಾಷ್ಟ್ರ’ವಾಗಲು ಸಾಧ್ಯವಿರುವಾಗ, 100 ಕೋಟಿ ಹಿಂದೂಗಳಿರುವ ಭಾರತವನ್ನು ಆದರ್ಶ ‘ಹಿಂದೂ ರಾಷ್ಟ್ರ’ ಎಂದು ಘೋಷಿಸಲು ಪ್ರತಿಯೊಬ್ಬ ಹಿಂದೂವೂ ಜಾಗೃತಗೊಳ್ಳಬೇಕಾದ ಅನಿವಾರ್ಯತೆ ಇದೆ ಎಂದು ಸಮಿತಿಯು ಈ ಮೂಲಕ ಕರೆ ನೀಡಿದೆ.

ದೇಶದಲ್ಲಿ ಹೆಚ್ಚುತ್ತಿರುವ ಗೋಹತ್ಯೆ, ಮತಾಂತರ, ಲವ್ ಜಿಹಾದ್ ಮತ್ತು ವಕ್ಸ್ ಕಾನೂನಿನಿಂದ ದೇವಸ್ಥಾನ ಹಾಗೂ ಹಿಂದೂಗಳ ಭೂಮಿಗೆ ಉಂಟಾಗುತ್ತಿರುವ ಆಪತ್ತುಗಳ ವಿರುದ್ಧ ಈ ಸಭೆಯಲ್ಲಿ ಧ್ವನಿ ಎತ್ತಲಾಗುವುದು. ಹಿಂದೂಗಳಿಗೆ ನ್ಯಾಯ ಸಿಗಲು ಮತ್ತು ದೇವಸ್ಥಾನಗಳ ಸಂಪತ್ತು ಹಿಂದೂ ಧರ್ಮ ಕಾರ್ಯಕ್ಕೆ ಬಳಕೆಯಾಗಲು ‘ಹಿಂದೂ ರಾಷ್ಟ್ರ’ವೇ ಏಕೈಕ ಪರ್ಯಾಯವಾಗಿದೆ. ಸ್ವಾತಂತ್ರ್ಯ ಪೂರ್ವದ ಹಿಂದೂ ರಾಷ್ಟ್ರವನ್ನು ಪುನಃ ಸ್ಥಾಪಿಸುವ ದಿಶೆಯಲ್ಲಿ, ಪ್ರತಿಯೊಬ್ಬ ಧರ್ಮಾಭಿಮಾನಿ ಹಿಂದೂಗಳು ಈ ಸಭೆಯಲ್ಲಿ ಉಪಸ್ಥಿತರಿರುವಂತೆ ತಿಳಿಸಲಾಗಿದೆ.

Related posts

ಎಸ್.ಡಿ.ಎಮ್.ಪದವಿ ಪೂರ್ವ ಕಾಲೇಜಿನಲ್ಲಿ ʼಎಮ್ಯುಲೇಶನ್‌ʼ ಕಾರ್ಯಕ್ರಮ

Suddi Udaya

ಬಂದಾರು : ಮೈರೋಳ್ತಡ್ಕ ಶಾಲಾ ಅಮೃತ ಮಹೋತ್ಸವ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಎ.8-17: ಶ್ರೀ ಕ್ಷೇತ್ರ ಓಡೀಲುಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಜಾತ್ರೋತ್ಸವ

Suddi Udaya

ನಾಪತ್ತೆಯಾಗಿದ್ದ ತೋಟತ್ತಾಡಿ ಯುವಕನ ಮೃತದೇಹ ಅಣಿಯೂರು ನದಿಯಲ್ಲಿ ಪತ್ತೆ

Suddi Udaya

ನಾವೂರು ಯುನೈಟೆಡ್ ಸ್ಪೋರ್ಟ್ಸ್ ಹಾಗೂ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾಗಿ ಮಹಮ್ಮದ್ ಅರ್ಷದ್

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ವತಿಯಿಂದ ಭಾರತೀಯ ಸೇನೆಗೆ ನೇಮಕಗೊಂಡಿರುವ ಮನೋಹರ್ ಪೂಜಾರಿಯವರಿಗೆ ಗೌರವಾರ್ಪಣೆ

Suddi Udaya
error: Content is protected !!