26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೆ.27: ವೇಣೂರು ಬಜಿರೆಯಲ್ಲಿ ‘ಹಿಂದೂ ರಾಷ್ಟ್ರ’ ಸ್ಥಾಪನೆಗಾಗಿ ಜಾಗೃತಿ ಸಭೆ

ಬೆಳ್ತಂಗಡಿ : ಪ್ರಸ್ತುತ ಹಿಂದೂ ಧರ್ಮದ ಮೇಲಾಗುತ್ತಿರುವ ಆಘಾತಗಳನ್ನು ತಡೆಯಲು ಮತ್ತು ಹಿಂದೂಗಳನ್ನು ಸಂಘಟಿಸಲು ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ‘ಹಿಂದೂ ರಾಷ್ಟ್ರ ಜಾಗೃತಿ ಸಭೆ’ ಯನ್ನು ಆಯೋಜಿಸಲಾಗಿದೆ. ಈ ಸಭೆಯು ಬತ್ತಾರು ಬಜಿರೆಯ ಶ್ರೀ ವಿಶ್ವೇಶ್ವರ ಭಜನಾ ಮಂದಿರದ ವಠಾರದಲ್ಲಿ ಫೆ. 27, ರಂದು ಬೆಳಿಗ್ಗೆ 10:00 ಗಂಟೆಗೆ ಜರುಗಲಿದೆ.

ಕೇವಲ 65 ಲಕ್ಷ ಜನಸಂಖ್ಯೆ ಇರುವ ಇಸ್ರೇಲ್ ‘ಯಹೂದಿ ರಾಷ್ಟ್ರ’ವಾಗಲು ಸಾಧ್ಯವಿರುವಾಗ, 100 ಕೋಟಿ ಹಿಂದೂಗಳಿರುವ ಭಾರತವನ್ನು ಆದರ್ಶ ‘ಹಿಂದೂ ರಾಷ್ಟ್ರ’ ಎಂದು ಘೋಷಿಸಲು ಪ್ರತಿಯೊಬ್ಬ ಹಿಂದೂವೂ ಜಾಗೃತಗೊಳ್ಳಬೇಕಾದ ಅನಿವಾರ್ಯತೆ ಇದೆ ಎಂದು ಸಮಿತಿಯು ಈ ಮೂಲಕ ಕರೆ ನೀಡಿದೆ.

ದೇಶದಲ್ಲಿ ಹೆಚ್ಚುತ್ತಿರುವ ಗೋಹತ್ಯೆ, ಮತಾಂತರ, ಲವ್ ಜಿಹಾದ್ ಮತ್ತು ವಕ್ಸ್ ಕಾನೂನಿನಿಂದ ದೇವಸ್ಥಾನ ಹಾಗೂ ಹಿಂದೂಗಳ ಭೂಮಿಗೆ ಉಂಟಾಗುತ್ತಿರುವ ಆಪತ್ತುಗಳ ವಿರುದ್ಧ ಈ ಸಭೆಯಲ್ಲಿ ಧ್ವನಿ ಎತ್ತಲಾಗುವುದು. ಹಿಂದೂಗಳಿಗೆ ನ್ಯಾಯ ಸಿಗಲು ಮತ್ತು ದೇವಸ್ಥಾನಗಳ ಸಂಪತ್ತು ಹಿಂದೂ ಧರ್ಮ ಕಾರ್ಯಕ್ಕೆ ಬಳಕೆಯಾಗಲು ‘ಹಿಂದೂ ರಾಷ್ಟ್ರ’ವೇ ಏಕೈಕ ಪರ್ಯಾಯವಾಗಿದೆ. ಸ್ವಾತಂತ್ರ್ಯ ಪೂರ್ವದ ಹಿಂದೂ ರಾಷ್ಟ್ರವನ್ನು ಪುನಃ ಸ್ಥಾಪಿಸುವ ದಿಶೆಯಲ್ಲಿ, ಪ್ರತಿಯೊಬ್ಬ ಧರ್ಮಾಭಿಮಾನಿ ಹಿಂದೂಗಳು ಈ ಸಭೆಯಲ್ಲಿ ಉಪಸ್ಥಿತರಿರುವಂತೆ ತಿಳಿಸಲಾಗಿದೆ.

Related posts

ಕುತ್ಲೂರು ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಧನಲಕ್ಷ್ಮೀ ಪೂಜೆ, ಗೋ ಪೂಜೆ, ವಾಹನ ಪೂಜೆ ,ಆಯುಧ ಪೂಜೆ ಹಾಗೂ ಹೆಣ್ಣು ಕರು ದಾನ ಕಾರ್ಯಕ್ರಮ

Suddi Udaya

ಬೆಳ್ತಂಗಡಿಯಲ್ಲಿ ಶ್ರೀ ಪಾರಿಜಾತ ರಿಯಲ್ ಎಸ್ಟೇಟ್ ಶುಭಾರಂಭ

Suddi Udaya

ವಾಣಿ ಕಾಲೇಜಿನ ಎನ್ಎಸ್ಎಸ್ ವಿದ್ಯಾರ್ಥಿಗಳಿಂದ ನೇಜಿ ನಾಟಿ

Suddi Udaya

ಬಳಂಜ: ಬಿಲ್ಲವ ಸಂಘದಲ್ಲಿ ಮರಿಯಾಲಡೊಂಜಿ ಐತಾರ ವಿಶೇಷ ಕಾರ್ಯಕ್ರಮ: ಆಟಿಯ ವಿವಿಧ ತಿಂಡಿ ತಿನಸುಗಳ ಪ್ರದರ್ಶನ,ವಿವಿಧ ಮನೋರಂಜನಾ ಕಾರ್ಯಕ್ರಮ

Suddi Udaya

ಮಾಲಾಡಿ ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಸಪ್ತಾಹ

Suddi Udaya

ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ಗರ್ಡಾಡಿ ಮಿತ್ತೊಟ್ಟು – ಪಾರ ರಸ್ತೆಯ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ

Suddi Udaya
error: Content is protected !!