July 23, 2026
ವರದಿ

ಶಾಸಕರ ಕಾರ್ಮಿಕ ಪರ ಬದ್ಧತೆ – ಬಿಎಮ್‌ಎಸ್ ಸ್ವಾಗತ; ಅನಿಲ್ ಕುಮಾರ್ ಯು

ಬೆಳ್ತಂಗಡಿ: ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ವಿವಿಧ ಸಮಸ್ಯೆಗಳ ಕುರಿತು ನಿನ್ನೆ ಬೆಳ್ತಂಗಡಿ ಪ್ರವಾಸಿ ಮಂದಿರದಲ್ಲಿ ನಡೆದ ಕುಂದುಕೊರತೆ ಸಭೆಯಲ್ಲಿ, ಕ್ಷೇತ್ರದ ಶಾಸಕರಾದ ಹರೀಶ್ ಪೂಂಜ ಅವರು ಕಾರ್ಮಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದನೆ ನೀಡಿದ್ದು ಗಮನಾರ್ಹವಾಗಿದೆ.ಸಭೆಯಲ್ಲಿ ಕೆಲವೊಂದು ಕಾರ್ಮಿಕರ ಸಮಸ್ಯೆಗಳು ಸ್ಥಳದಲ್ಲಿಯೇ ಬಗೆಹರಿಸಲ್ಪಟ್ಟಿದ್ದು, ಬಾಕಿ ಇರುವ ಪ್ರಕರಣಗಳ ಕುರಿತು ಮೇಲಾಧಿಕಾರಿಗಳ ಮಟ್ಟದಲ್ಲಿ ವಿಶೇಷ ಸಭೆ ನಡೆಸಿ, ಬಿಎಮ್‌ಎಸ್ ಪ್ರಮುಖರನ್ನು ಸೇರಿಸಿಕೊಂಡು ಅವರ ಸಮ್ಮುಖದಲ್ಲೇ ಸಮಗ್ರ ಪರಿಹಾರ ಒದಗಿಸುವುದಾಗಿ ಶಾಸಕರು ಭರವಸೆ ನೀಡಿದರು.

ಇದಕ್ಕಾಗಿ ಅಗತ್ಯವಿರುವ ಎಲ್ಲಾ ವ್ಯವಸ್ಥೆಗಳನ್ನು ಸ್ವತಃ ಮಾಡುವುದಾಗಿ ಅವರು ತಿಳಿಸಿರುವುದು ಕಾರ್ಮಿಕರಲ್ಲಿ ಹೊಸ ವಿಶ್ವಾಸವನ್ನು ಮೂಡಿಸಿದೆ.ಈ ಬಗ್ಗೆ ಪ್ರತಿಕ್ರಿಯಿಸಿದ ಬಿಎಮ್‌ಎಸ್ ಜಿಲ್ಲಾ ಅಧ್ಯಕ್ಷ ಅನಿಲ್ ಕುಮಾರ್ ಯು ಅವರು, ನಮ್ಮ ಶಾಸಕರು ಕಾರ್ಮಿಕರ ಪರ ತಮ್ಮ ಬದ್ಧತೆಯನ್ನು ಸ್ಪಷ್ಟವಾಗಿ ತೋರಿಸಿದ್ದಾರೆ. ಬಿಎಮ್‌ಎಸ್ ಸದಾ ಶಾಸಕರೊಂದಿಗೆ ಕೈಜೋಡಿಸಿ ಕಾರ್ಮಿಕರ ಹಿತಾಸಕ್ತಿಗೆ ಕೆಲಸ ಮಾಡುತ್ತದೆ. ನಮ್ಮ ಶಾಸಕರೂ ಕಾರ್ಮಿಕರ ಪರ ಸದಾ ನಿಲ್ಲಬೇಕು ಎಂಬುದು ನಮ್ಮ ಮನದಾಳದ ನಿರೀಕ್ಷೆ, ಎಂದು ತಿಳಿಸಿದ್ದಾರೆ. ಸಭೆಯ ಈ ಬೆಳವಣಿಗೆ ಬೆಳ್ತಂಗಡಿ ತಾಲೂಕಿನ ಕಾರ್ಮಿಕರಿಗೆ ಆಶಾಭಾವನೆಯ ಸಂದೇಶ ನೀಡಿದೆ.

Related posts

ಸುಲ್ಕೇರಿ ಶ್ರೀರಾಮ ಅ.ಖಾ.ಹಿ.ಪ್ರಾ. ಶಾಲೆಗೆ ಬೆಂಗಳೂರು ಎಸ್ಕವ ಪ್ರೈ.ಲಿ ವತಿಯಿಂದ ಸಿಸಿ ಕ್ಯಾಮರಾ ಹಾಗೂ ಜನರೇಟರ್ ಕೊಡುಗೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆ

Suddi Udaya

ಇಲಾಖಾ ಅಧಿಕಾರಿಗಳು ಗೈರಾದ ಹಿನ್ನಲೆ ಕೊಕ್ಕಡ ಗ್ರಾ.ಪಂ ತ್ರೈಮಾಸಿಕ ಕೆ.ಡಿ.ಪಿ ಸಭೆ ರದ್ದು

Suddi Udaya

ಇಂದಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕ್ಷಯ ಮುಕ್ತ ಭಾರತ ಅಭಿಯಾನದಡಿಯಲ್ಲಿ ನಿಕ್ಷಯ್ ಶಿಬಿರ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ಐಸಿವೈಎಮ್ ಘಟಕದ ಕ್ರಿಸ್ಮಸ್ ಟ್ಯಾಬ್ಲೊ

Suddi Udaya

ಕೊಯ್ಯೂರುನಲ್ಲಿ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬ: 5 ದಿನವಾದರೂ ದುರಸ್ತಿಯಾಗದ ವಿದ್ಯುತ್ ಕಂಬ

Suddi Udaya
error: Content is protected !!