25.5 C
ಪುತ್ತೂರು, ಬೆಳ್ತಂಗಡಿ
April 24, 2026
ವರದಿ

ಶಾಸಕರ ಕಾರ್ಮಿಕ ಪರ ಬದ್ಧತೆ – ಬಿಎಮ್‌ಎಸ್ ಸ್ವಾಗತ; ಅನಿಲ್ ಕುಮಾರ್ ಯು

ಬೆಳ್ತಂಗಡಿ: ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ವಿವಿಧ ಸಮಸ್ಯೆಗಳ ಕುರಿತು ನಿನ್ನೆ ಬೆಳ್ತಂಗಡಿ ಪ್ರವಾಸಿ ಮಂದಿರದಲ್ಲಿ ನಡೆದ ಕುಂದುಕೊರತೆ ಸಭೆಯಲ್ಲಿ, ಕ್ಷೇತ್ರದ ಶಾಸಕರಾದ ಹರೀಶ್ ಪೂಂಜ ಅವರು ಕಾರ್ಮಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದನೆ ನೀಡಿದ್ದು ಗಮನಾರ್ಹವಾಗಿದೆ.ಸಭೆಯಲ್ಲಿ ಕೆಲವೊಂದು ಕಾರ್ಮಿಕರ ಸಮಸ್ಯೆಗಳು ಸ್ಥಳದಲ್ಲಿಯೇ ಬಗೆಹರಿಸಲ್ಪಟ್ಟಿದ್ದು, ಬಾಕಿ ಇರುವ ಪ್ರಕರಣಗಳ ಕುರಿತು ಮೇಲಾಧಿಕಾರಿಗಳ ಮಟ್ಟದಲ್ಲಿ ವಿಶೇಷ ಸಭೆ ನಡೆಸಿ, ಬಿಎಮ್‌ಎಸ್ ಪ್ರಮುಖರನ್ನು ಸೇರಿಸಿಕೊಂಡು ಅವರ ಸಮ್ಮುಖದಲ್ಲೇ ಸಮಗ್ರ ಪರಿಹಾರ ಒದಗಿಸುವುದಾಗಿ ಶಾಸಕರು ಭರವಸೆ ನೀಡಿದರು.

ಇದಕ್ಕಾಗಿ ಅಗತ್ಯವಿರುವ ಎಲ್ಲಾ ವ್ಯವಸ್ಥೆಗಳನ್ನು ಸ್ವತಃ ಮಾಡುವುದಾಗಿ ಅವರು ತಿಳಿಸಿರುವುದು ಕಾರ್ಮಿಕರಲ್ಲಿ ಹೊಸ ವಿಶ್ವಾಸವನ್ನು ಮೂಡಿಸಿದೆ.ಈ ಬಗ್ಗೆ ಪ್ರತಿಕ್ರಿಯಿಸಿದ ಬಿಎಮ್‌ಎಸ್ ಜಿಲ್ಲಾ ಅಧ್ಯಕ್ಷ ಅನಿಲ್ ಕುಮಾರ್ ಯು ಅವರು, ನಮ್ಮ ಶಾಸಕರು ಕಾರ್ಮಿಕರ ಪರ ತಮ್ಮ ಬದ್ಧತೆಯನ್ನು ಸ್ಪಷ್ಟವಾಗಿ ತೋರಿಸಿದ್ದಾರೆ. ಬಿಎಮ್‌ಎಸ್ ಸದಾ ಶಾಸಕರೊಂದಿಗೆ ಕೈಜೋಡಿಸಿ ಕಾರ್ಮಿಕರ ಹಿತಾಸಕ್ತಿಗೆ ಕೆಲಸ ಮಾಡುತ್ತದೆ. ನಮ್ಮ ಶಾಸಕರೂ ಕಾರ್ಮಿಕರ ಪರ ಸದಾ ನಿಲ್ಲಬೇಕು ಎಂಬುದು ನಮ್ಮ ಮನದಾಳದ ನಿರೀಕ್ಷೆ, ಎಂದು ತಿಳಿಸಿದ್ದಾರೆ. ಸಭೆಯ ಈ ಬೆಳವಣಿಗೆ ಬೆಳ್ತಂಗಡಿ ತಾಲೂಕಿನ ಕಾರ್ಮಿಕರಿಗೆ ಆಶಾಭಾವನೆಯ ಸಂದೇಶ ನೀಡಿದೆ.

Related posts

ಕಣಿಯೂರು ನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಡಿ.6-8 ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದ ನೂತನ ರಾಜಗೋಪುರ, ಶ್ರೀ ದುರ್ಗಾಗಣೇಶ ಸಭಾಭವನ ಲೋಕಾರ್ಪಣೆ

Suddi Udaya

ಕರಾಯ ಶ್ರೀಮಹಾಲಿಂಗೇಶ್ವರ ದೇವಳದ ಬ್ರಹ್ಮಕಲಶೋತ್ಸವದ ಕಾರ್ಯಾಲಯ ಕಛೇರಿ ಉದ್ಘಾಟನೆ

Suddi Udaya

ಬೆಂಗಳೂರಿನ ಕೆಮ್ ಟ್ರೆಂಡ್ ಕೆಮಿಕಲ್ಸ್ ಕಂಪನಿಯಿಂದ ಸೇವಾಭಾರತಿ ಸಂಸ್ಥೆಗೆ ಉಪಕರಣಗಳ ಹಸ್ತಾಂತರ

Suddi Udaya

ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾದ ಲಾಯಿಲ ಚಂದ್ರಿಕಾ ರಿಗೆ ಶಾಸಕ ಹರೀಶ್ ಪೂಂಜರಿಂದ ಸನ್ಮಾನ

Suddi Udaya

ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ, ಅಧಿಕಾರದ ಗದ್ದುಗೆಗೇರಿದ ಬಿಜೆಪಿ: ನೂತನ ಅಧ್ಯಕ್ಷ ಜೋಯೇಲ್ ಮೆಂಡೋನ್ಸಾ,ಉಪಾಧ್ಯಕ್ಷ ಕಾಂತಪ್ಪ ಗೌಡ ಹಾಗೂ ನಿರ್ದೇಶಕರನ್ನು ಅಭಿನಂದಿಸಿದ ಬಿಜೆಪಿ ಕಾರ್ಯಕರ್ತರು

Suddi Udaya
error: Content is protected !!