September 6, 2026
ವರದಿ

ಶಾಸಕರ ಕಾರ್ಮಿಕ ಪರ ಬದ್ಧತೆ – ಬಿಎಮ್‌ಎಸ್ ಸ್ವಾಗತ; ಅನಿಲ್ ಕುಮಾರ್ ಯು

ಬೆಳ್ತಂಗಡಿ: ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ವಿವಿಧ ಸಮಸ್ಯೆಗಳ ಕುರಿತು ನಿನ್ನೆ ಬೆಳ್ತಂಗಡಿ ಪ್ರವಾಸಿ ಮಂದಿರದಲ್ಲಿ ನಡೆದ ಕುಂದುಕೊರತೆ ಸಭೆಯಲ್ಲಿ, ಕ್ಷೇತ್ರದ ಶಾಸಕರಾದ ಹರೀಶ್ ಪೂಂಜ ಅವರು ಕಾರ್ಮಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದನೆ ನೀಡಿದ್ದು ಗಮನಾರ್ಹವಾಗಿದೆ.ಸಭೆಯಲ್ಲಿ ಕೆಲವೊಂದು ಕಾರ್ಮಿಕರ ಸಮಸ್ಯೆಗಳು ಸ್ಥಳದಲ್ಲಿಯೇ ಬಗೆಹರಿಸಲ್ಪಟ್ಟಿದ್ದು, ಬಾಕಿ ಇರುವ ಪ್ರಕರಣಗಳ ಕುರಿತು ಮೇಲಾಧಿಕಾರಿಗಳ ಮಟ್ಟದಲ್ಲಿ ವಿಶೇಷ ಸಭೆ ನಡೆಸಿ, ಬಿಎಮ್‌ಎಸ್ ಪ್ರಮುಖರನ್ನು ಸೇರಿಸಿಕೊಂಡು ಅವರ ಸಮ್ಮುಖದಲ್ಲೇ ಸಮಗ್ರ ಪರಿಹಾರ ಒದಗಿಸುವುದಾಗಿ ಶಾಸಕರು ಭರವಸೆ ನೀಡಿದರು.

ಇದಕ್ಕಾಗಿ ಅಗತ್ಯವಿರುವ ಎಲ್ಲಾ ವ್ಯವಸ್ಥೆಗಳನ್ನು ಸ್ವತಃ ಮಾಡುವುದಾಗಿ ಅವರು ತಿಳಿಸಿರುವುದು ಕಾರ್ಮಿಕರಲ್ಲಿ ಹೊಸ ವಿಶ್ವಾಸವನ್ನು ಮೂಡಿಸಿದೆ.ಈ ಬಗ್ಗೆ ಪ್ರತಿಕ್ರಿಯಿಸಿದ ಬಿಎಮ್‌ಎಸ್ ಜಿಲ್ಲಾ ಅಧ್ಯಕ್ಷ ಅನಿಲ್ ಕುಮಾರ್ ಯು ಅವರು, ನಮ್ಮ ಶಾಸಕರು ಕಾರ್ಮಿಕರ ಪರ ತಮ್ಮ ಬದ್ಧತೆಯನ್ನು ಸ್ಪಷ್ಟವಾಗಿ ತೋರಿಸಿದ್ದಾರೆ. ಬಿಎಮ್‌ಎಸ್ ಸದಾ ಶಾಸಕರೊಂದಿಗೆ ಕೈಜೋಡಿಸಿ ಕಾರ್ಮಿಕರ ಹಿತಾಸಕ್ತಿಗೆ ಕೆಲಸ ಮಾಡುತ್ತದೆ. ನಮ್ಮ ಶಾಸಕರೂ ಕಾರ್ಮಿಕರ ಪರ ಸದಾ ನಿಲ್ಲಬೇಕು ಎಂಬುದು ನಮ್ಮ ಮನದಾಳದ ನಿರೀಕ್ಷೆ, ಎಂದು ತಿಳಿಸಿದ್ದಾರೆ. ಸಭೆಯ ಈ ಬೆಳವಣಿಗೆ ಬೆಳ್ತಂಗಡಿ ತಾಲೂಕಿನ ಕಾರ್ಮಿಕರಿಗೆ ಆಶಾಭಾವನೆಯ ಸಂದೇಶ ನೀಡಿದೆ.

Related posts

ಬ್ರೈನ್ ಹ್ಯಾಮರೇಜ್ ನಿಂದ ಬಳಲುತ್ತಿರುವ ಸುಳ್ಯದ ಸಂಧ್ಯಾ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಶಿಬಾಜೆ ಗ್ರಾ.ಪಂ. ನ ಪ್ರಭಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಸೀತಾರಾಮ ಎಸ್ ಅಧಿಕಾರ ಸ್ವೀಕಾರ

Suddi Udaya

ಕಾವಳಕಟ್ಟೆ ವಲಯ ಬಂಟರ ಸಂಘದ ವತಿಯಿಂದ ಆಟಿದ ಕೂಟ

Suddi Udaya

ಮರ ಕಟ್ಟಿಂಗ್ ನಡೆಸುತ್ತಿದ್ದಾಗ ಆಕಸ್ಮಿಕವಾಗಿ ಮೆಷಿನ್ ತಗುಲಿ ಸಾವ್ಯದ ವ್ಯಕ್ತಿ ಪ್ರಶಾಂತ್ ಪೂಜಾರಿ ಸಾವು

Suddi Udaya

ಬಂಗಾಡಿ-ಕೊಲ್ಲಿ ಒಂದು ವಾರದಿಂದ 3 ಫೇಸ್ ವಿದ್ಯುತ್ ಇಲ್ಲದೆ ಕೃಷಿಕರಿಗೆ ಸಂಕಷ್ಟ: ಕೂಡಲೇ ಕ್ರಮ ಕೈಗೊಳ್ಳುವಂತೆ ತಾ.ಪಂ ಮಾಜಿ ಅಧ್ಯಕ್ಷ ಮುಕುಂದ ಸುವರ್ಣ ಆಗ್ರಹ

Suddi Udaya

ಕರ್ನಾಟಕ ಮುಸ್ಲಿಮ್ ಜಮಾಅತ್ ಗುರುವಾಯನಕೆರೆ ಸರ್ಕಲ್ ವಾರ್ಷಿಕ ಮಹಾಸಭೆ

Suddi Udaya
error: Content is protected !!