July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ನೆರಿಯ ಹಾಲು ಉತ್ಪಾದಕರ ಸಹಕಾರಿ ಸಂಘದ ಚುನಾವಣೆ: ಅಧ್ಯಕ್ಷರಾಗಿ ಸರಸ್ವತಿ ಎ., ಉಪಾಧ್ಯಕ್ಷರಾಗಿ ಸಜಿತ

ನೆರಿಯ: ಫೆ.22ರಂದು ನಿಗದಿಯಾಗಿದ್ದ ಸಾಮಾನ್ಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಮಹಿಳಾ ಮೀಸಲು ಸ್ಥಾನಕ್ಕೆ ಮೀಸಲಾಗಿದ್ದ ಸ್ಥಾನದಿಂದ ನೆರಿಯ ಹಾಲು ಉತ್ಪಾದಕರ ಸಹಕಾರಿ ಸಂಘ ಆಡಳಿತ ಮಂಡಳಿಗೆ ಮುಂದಿನ ಐದು ವರ್ಷ ಅವಧಿಯ ನಿರ್ದೇಶಕರ ಸ್ಥಾನದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆ ನಡೆದಿದೆ.

ತಾರನಾಥ ಎಂ, ಬಾಲಕೃಷ್ಣ ಗೌಡ, ವಿಮಲಾ, ಲೀಲಾಧರ ಎ.ಎಸ್, ಶೋಭಾ ಪಿ.ಎಸ್ ಮನೋರಮಾ ಹಾಗೂ ಸೇವಾ ಭಾರತಿಯಿಂದ ಸರಸ್ವತಿ ಎ, ಸಜಿತ ಲೋಕೇಶ್ ಎ.ಸಿ ನಾಗೇಶ್ ಲೋಕೇಶ್ ಕೆ ಸಂಧ್ಯಾ ಸುಂದರ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದು ಸೇವಾ ಭಾರತೀಯ ಬೆಂಬಲಿತ ಅಭ್ಯರ್ಥಿಯಾದ ಸರಸ್ವತಿ ಎ ಅಧ್ಯಕ್ಷರಾಗಿ ಸಜಿತಾ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಚುನಾವಣೆಯಲ್ಲಿ ರಿಟನಿಂಗ್ ಅಧಿಕಾರಿಯಾಗಿ ಪ್ರತಿಮಾ, ಹಾಲು ಉತ್ಪಾದಕ ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ಬಿಎಂ ಶರೀಫ್ ಸಿಬ್ಬಂದಿಗಳು ಸಹಕರಿಸಿದರು. ಈ ಸಂದರ್ಭದಲ್ಲಿ ಭಾರತೀಯ ಜನತಾ ಪಾರ್ಟಿಯ ಉಜಿರೆ ಶಕ್ತಿ ಕೇಂದ್ರದ ಅಧ್ಯಕ್ಷರಾದ ಯಶವಂತ ಗೌಡ, ನೆರಿಯ ಶಕ್ತಿ ಕೇಂದ್ರದ ಅಧ್ಯಕ್ಷರಾದ ವಿಶ್ವನಾಥ್ ಗೌಡ ಮಾಜಿ ಗ್ರಾಮ ಪಂಚಾಯತ್ ಸದಸ್ಯ ಸಚಿನ್ ಕೆಎಸ್ ರಾಮಕೃಷ್ಣ ಗೌಡ ಸಂಜೀವ ಗೌಡ ಉಪಸ್ಥಿತರಿದ್ದರು.

Related posts

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ

Suddi Udaya

ಬಳಂಜ ಶಾಲಾ ಕ್ರೀಡಾಂಗಣ ನವೀಕರಣ, ಎಲ್.ಕೆ.ಜಿ, ಯು.ಕೆ.ಜಿ, ರಂಗ ಮಂದಿರ ನಿರ್ಮಾಣ, ಶಾಲಾ ಕೊಠಡಿ ನವೀಕರಣ ಕಾಮಗಾರಿಗೆ ಶಿಲಾನ್ಯಾಸ

Suddi Udaya

ಕುತ್ಲೂರು ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಹಸಿರು ಇಂಧನ ಕಾರ್ಯಕ್ರಮದಡಿ ಗ್ರೀನ್ ವೇ ಕುಕ್ಕುಸ್ಟವ್ ವಿತರಣೆ

Suddi Udaya

ಬೆಳ್ತಂಗಡಿ ಸ.ಪ.ಪೂ. ಕಾಲೇಜು ವಿದ್ಯಾರ್ಥಿ ಮಂತ್ರಿ ಮಂಡಲದ ಪ್ರತಿಜ್ಞಾ ವಿಧಿ ಸ್ವೀಕಾರ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya

ಮಗನಿಂದ ತಂದೆಯ ಕೊಲೆ ಯತ್ನ ಆರೋಪಿ ಮಗನನ್ನು ಬಂಧಿಸಿದ ಪೊಲೀಸರು

Suddi Udaya

ಪಟ್ರಮೆ ಬಸ್ ನಿಲ್ದಾಣದ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಂಚೆ ಕಛೇರಿ ಶ್ರೀ ವಿಷ್ಣು ಕಾಂಪ್ಲೆಕ್ಸ್‌ನ ಕಟ್ಟಡಕ್ಕೆ ಸ್ಥಳಾಂತರ

Suddi Udaya
error: Content is protected !!