37.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಬಿಸಿಲಿನ ಬೇಗೆಗೆ ತಂಪೆರೆದ ವರುಣ

ಬೆಳ್ತಂಗಡಿ: ತಾಲೂಕಿನಲ್ಲಿ ಬಿಸಿಲ ಧಗೆ ಹೆಚ್ಚಾಗಿದ್ದು, ಜನರು ಪರಿತಪಿಸುತ್ತಿರುವ ನಡುವೆ ತಾಲೂಕಿನ ನಾನಾ ಕಡೆಗಳಲ್ಲಿ ಫೆ.೨೫ರಂದು ಮಳೆಯಾಗುವ ಮೂಲಕ ಇಳೆಗೆ ತಂಪೆರೆದಿದೆ. ಬಹುತೇಕ ಕಡೆಗಳಲ್ಲಿ ಮಧ್ಯಾಹ್ನದ ವೇಳೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿ ಸಿಡಿಲು,ಗಾಳಿಯೊಂದಿಗೆ ಸಾಧಾರಣದಿಂದ ಉತ್ತಮ ಮಳೆ ಸುರಿದಿದೆ. ಬೆಳಿಗ್ಗೆಯಿಂದ ಬಿಸಿಲಿನೊಂದಿಗೆ ಕೊಂಚ ಮೋಡ ಕವಿದ ವಾತಾವರಣವಿತ್ತು. ಹಠಾತ್ ಸುರಿದ ಈ ಮಳೆಯಿಂದಾಗಿ ವಾತಾವರಣದಲ್ಲಿ ಕೊಂಚ ತಂಪಿನ ಅನುಭವವಾಗಿದೆ.

ಬೆಳ್ತಂಗಡಿ ಪಟ್ಟಣ, ಚಾರ್ಮಾಡಿ ಘಾಟಿ ಸಹಿತ ಅಳದಂಗಡಿ, ತಣ್ಣೀರುಪಂತ, ಮುಂಡಾಜೆ,ಬ0ದಾರು, ಮೊಗ್ರು, ಉರುವಾಲು, ಕಣಿಯೂರು, ಮಚ್ಚಿನ, ಕಳಿಯ, ನ್ಯಾಯತರ್ಪು, ಸವಣಾಲು, ಹುಣ್ಸೆಕಟ್ಟೆ, ಮಡಂತ್ಯಾರು, ಕೊಕ್ಕಡ, ನಾವೂರು, ಬೆಳಾಲು, ತೆಕ್ಕಾರು, ಇಳಂತಿಲ, ಕಲ್ಮಂಜ ಸಹಿತ ನಾನಾ ಕಡೆಗಳಲ್ಲಿ ಮಳೆಯಾಗಿದೆ. ವಿಪರೀತ ಸೆಕೆಯಿಂದ ಕಂಗಾಲಾಗಿದ್ದ ಮಂದಿಗೆ ಈ ಬೇಸಿಗೆ ಮಳೆ ಕೊಂಚ ಸಮಾಧಾನ ತಂದಿದೆ.

ಫೆ.21ರಂದು ತಾಲೂಕಿನ ಕೆಲವು ಕಡೆಗಳಲ್ಲಿ ಮೊದಲ ಮಳೆಯಾಗಿತ್ತು. ಬಳಿಕ ಹೆಚ್ಚಿನ ಭಾಗದಲ್ಲಿ ಬುಧವಾರ ಎರಡನೇ ಬೇಸಿಗೆ ಮಳೆಯಾಗಿದೆ. ಪುಂಜಾಲಕಟ್ಟೆ-ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು ತಾಲೂಕಿನ ನಗರದ ಪ್ರದೇಶಗಳಲ್ಲಿ ಹೆದ್ದಾರಿ ಕಾಮಗಾರಿಯಿಂದ ಕೆಲವೊಂದು ಕಡೆಗಳಲ್ಲಿ ಅಂಗಡಿಗಳ ಮುಂಭಾಗದವರೆಗೆ ಮಳೆ ನೀರು ಬಂದಿತ್ತು. ಮಳೆ ಹೆಚ್ಚು ಸುರಿಯುತ್ತಿದ್ದರೆ ಮಳೆ ನೀರು ಅಂಗಡಿಯೊಳಗೆ ಹೋಗುತ್ತಿತ್ತು.ಇನ್ನು ಕೆಲವು ಕಡೆಗಳಲ್ಲಿ ಹನಿ ಮಳೆ ಸುರಿದಿದೆ. ಹಲವೆಡೆ ಅಂಗಳದಲ್ಲಿ ಒಣಗಲು ಹಾಕಿದ್ದ ಅಡಕೆ ಮಳೆಗೆ ಒದ್ದೆಯಾಗಿದೆ. ತಾಲೂಕಿನ ಹಲವು ಕಡೆಗಳಲ್ಲಿ ಬ್ರಹ್ಮಕಲಶೋತ್ಸವ, ಜಾತ್ರೆ, ನೇಮೋತ್ಸವ ಶುಭ ಸಮಾರಂಭಗಳು ಜರಗಲಿದ್ದು ಇದರ ಪೂರ್ವ ತಯಾರಿಗೆ ಮಳೆ ಅಡ್ಡಿ ನೀಡಿದೆ. ಗ್ರಾಮೀಣ ಭಾಗಗಳಲ್ಲಿ ವಿದ್ಯುತ್ ಪೂರೈಕೆ ಹಾಗೂ ಅಂತರ್ಜಾಲ ವ್ಯವಸ್ಥೆಯಲ್ಲಿ ವ್ಯತ್ಯಯ ಉಂಟಾಗಿದೆ.

Related posts

ನಿಡ್ಲೆ ಸಿಡಿಲು ಬಡಿದು ಹಾನಿಗೊಳಗಾದ ರಾಜೇಂದ್ರ ಗೌಡ ರವರ ಮನೆಗೆ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನಿಂದ ಭೇಟಿ

Suddi Udaya

ನಿಡ್ಲೆ: ನಿವೃತ್ತ ಶಿಕ್ಷಕ ರಾಮಣ್ಣ ಪೂಜಾರಿ ನಿಧನ

Suddi Udaya

ಕಂಡವರ ಮನದಲ್ಲಿ ಶ್ರೀ ವಿಶ್ವೇಶತೀರ್ಥರು.ಟಿ ನಾರಾಯಣ ಭಟ್ ರಾಮ ಕುಂಜ ಇವರ ಕೃತಿ ಬಿಡುಗಡೆ.

Suddi Udaya

ವಾಣಿ ಪ.ಪೂ. ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಪುತ್ತೂರು ಅಕ್ಷಯ ಕಾಲೇಜಿನ ಅಟರ್ನಸ್- 2024 ಫೆಸ್ಟ್ ನಲ್ಲಿ ವಾಣಿ ಪದವಿಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

Suddi Udaya
error: Content is protected !!