23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಬಿಸಿಲಿನ ಬೇಗೆಗೆ ತಂಪೆರೆದ ವರುಣ

ಬೆಳ್ತಂಗಡಿ: ತಾಲೂಕಿನಲ್ಲಿ ಬಿಸಿಲ ಧಗೆ ಹೆಚ್ಚಾಗಿದ್ದು, ಜನರು ಪರಿತಪಿಸುತ್ತಿರುವ ನಡುವೆ ತಾಲೂಕಿನ ನಾನಾ ಕಡೆಗಳಲ್ಲಿ ಫೆ.೨೫ರಂದು ಮಳೆಯಾಗುವ ಮೂಲಕ ಇಳೆಗೆ ತಂಪೆರೆದಿದೆ. ಬಹುತೇಕ ಕಡೆಗಳಲ್ಲಿ ಮಧ್ಯಾಹ್ನದ ವೇಳೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿ ಸಿಡಿಲು,ಗಾಳಿಯೊಂದಿಗೆ ಸಾಧಾರಣದಿಂದ ಉತ್ತಮ ಮಳೆ ಸುರಿದಿದೆ. ಬೆಳಿಗ್ಗೆಯಿಂದ ಬಿಸಿಲಿನೊಂದಿಗೆ ಕೊಂಚ ಮೋಡ ಕವಿದ ವಾತಾವರಣವಿತ್ತು. ಹಠಾತ್ ಸುರಿದ ಈ ಮಳೆಯಿಂದಾಗಿ ವಾತಾವರಣದಲ್ಲಿ ಕೊಂಚ ತಂಪಿನ ಅನುಭವವಾಗಿದೆ.

ಬೆಳ್ತಂಗಡಿ ಪಟ್ಟಣ, ಚಾರ್ಮಾಡಿ ಘಾಟಿ ಸಹಿತ ಅಳದಂಗಡಿ, ತಣ್ಣೀರುಪಂತ, ಮುಂಡಾಜೆ,ಬ0ದಾರು, ಮೊಗ್ರು, ಉರುವಾಲು, ಕಣಿಯೂರು, ಮಚ್ಚಿನ, ಕಳಿಯ, ನ್ಯಾಯತರ್ಪು, ಸವಣಾಲು, ಹುಣ್ಸೆಕಟ್ಟೆ, ಮಡಂತ್ಯಾರು, ಕೊಕ್ಕಡ, ನಾವೂರು, ಬೆಳಾಲು, ತೆಕ್ಕಾರು, ಇಳಂತಿಲ, ಕಲ್ಮಂಜ ಸಹಿತ ನಾನಾ ಕಡೆಗಳಲ್ಲಿ ಮಳೆಯಾಗಿದೆ. ವಿಪರೀತ ಸೆಕೆಯಿಂದ ಕಂಗಾಲಾಗಿದ್ದ ಮಂದಿಗೆ ಈ ಬೇಸಿಗೆ ಮಳೆ ಕೊಂಚ ಸಮಾಧಾನ ತಂದಿದೆ.

ಫೆ.21ರಂದು ತಾಲೂಕಿನ ಕೆಲವು ಕಡೆಗಳಲ್ಲಿ ಮೊದಲ ಮಳೆಯಾಗಿತ್ತು. ಬಳಿಕ ಹೆಚ್ಚಿನ ಭಾಗದಲ್ಲಿ ಬುಧವಾರ ಎರಡನೇ ಬೇಸಿಗೆ ಮಳೆಯಾಗಿದೆ. ಪುಂಜಾಲಕಟ್ಟೆ-ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು ತಾಲೂಕಿನ ನಗರದ ಪ್ರದೇಶಗಳಲ್ಲಿ ಹೆದ್ದಾರಿ ಕಾಮಗಾರಿಯಿಂದ ಕೆಲವೊಂದು ಕಡೆಗಳಲ್ಲಿ ಅಂಗಡಿಗಳ ಮುಂಭಾಗದವರೆಗೆ ಮಳೆ ನೀರು ಬಂದಿತ್ತು. ಮಳೆ ಹೆಚ್ಚು ಸುರಿಯುತ್ತಿದ್ದರೆ ಮಳೆ ನೀರು ಅಂಗಡಿಯೊಳಗೆ ಹೋಗುತ್ತಿತ್ತು.ಇನ್ನು ಕೆಲವು ಕಡೆಗಳಲ್ಲಿ ಹನಿ ಮಳೆ ಸುರಿದಿದೆ. ಹಲವೆಡೆ ಅಂಗಳದಲ್ಲಿ ಒಣಗಲು ಹಾಕಿದ್ದ ಅಡಕೆ ಮಳೆಗೆ ಒದ್ದೆಯಾಗಿದೆ. ತಾಲೂಕಿನ ಹಲವು ಕಡೆಗಳಲ್ಲಿ ಬ್ರಹ್ಮಕಲಶೋತ್ಸವ, ಜಾತ್ರೆ, ನೇಮೋತ್ಸವ ಶುಭ ಸಮಾರಂಭಗಳು ಜರಗಲಿದ್ದು ಇದರ ಪೂರ್ವ ತಯಾರಿಗೆ ಮಳೆ ಅಡ್ಡಿ ನೀಡಿದೆ. ಗ್ರಾಮೀಣ ಭಾಗಗಳಲ್ಲಿ ವಿದ್ಯುತ್ ಪೂರೈಕೆ ಹಾಗೂ ಅಂತರ್ಜಾಲ ವ್ಯವಸ್ಥೆಯಲ್ಲಿ ವ್ಯತ್ಯಯ ಉಂಟಾಗಿದೆ.

Related posts

ಹರೀಶ್ ಎನ್. ನಾಳ ಹೃದಯಾಘಾತದಿಂದ ನಿಧನ

Suddi Udaya

ನಾವೂರು ಜಯಂತಿ ಸಾಂತಿಪಲ್ಕೆ ನಿಧನ

Suddi Udaya

ಉಜಿರೆ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ಸೇವಾ ಟ್ರಸ್ಟ್ ಎರ್ನೋಡಿ ಇದರ ಸಾಮಾನ್ಯ ಸಭೆ

Suddi Udaya

ಸುಲ್ಕೇರಿ ಅಂಗನವಾಡಿಯ ಹಳೆ ವಿದ್ಯಾರ್ಥಿನಿಯ ಪೋಷಕರಿಂದ ಸಾವಯವ ತರಕಾರಿ ಗಿಡಗಳ ಹಸ್ತಾಂತರ

Suddi Udaya

ಇಡೀ ರಾಜ್ಯದಲ್ಲಿ ಹಗರಣಗಳ ಸರಮಾಲೆ ಮುಂದುವರಿಯುತಿದ್ದು ಅದರೊಂದಿಗೆ ವಕ್ಫ್ ಭೂಸ್ವಾದೀನದ ಮೂಲಕ ಹಿಂದೂ ಸಮಾಜಕ್ಕೆ ಅನ್ಯಾಯ ವೆಸಗುತ್ತಿದೆ: ಕಿಶೋರ್ ಕುಮಾರ್

Suddi Udaya

ಉಜಿರೆ: ಎಸ್.ಡಿ.ಎಮ್ ಕಾಲೇಜಿನಲ್ಲಿ ವಿಶ್ವ ದೂರಸಂಪರ್ಕ ದಿನ: ವಿಶೇಷ ಉಪನ್ಯಾಸ

Suddi Udaya
error: Content is protected !!