September 6, 2026
ಅಭಿನಂದನೆಗ್ರಾಮಾಂತರ ಸುದ್ದಿಬೆಳ್ತಂಗಡಿ

ಸಹಕಾರಿ ಕ್ಷೇತ್ರದ ಧುರೀಣರಿಗೆ ಬೆಳ್ತಂಗಡಿ ಸಿಎ ಬ್ಯಾಂಕ್‌ನ ಹಾರ್ದಿಕ ಶುಭಾಶಯ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ರಾಜೇಂದ್ರ ಕುಮಾರ್ ಅವರ 77ನೇ ಜನ್ಮದಿನಾಚರಣೆ ಅಂಗವಾಗಿ ಮಂಗಳೂರಿನ ಡಿಸಿಸಿ ಬ್ಯಾಂಕ್ ಮುಖ್ಯ ಕಚೇರಿಯಲ್ಲಿ ಆತ್ಮೀಯ ಸಮಾರಂಭ ಜರುಗಿತು.

ಸಹಕಾರಿ ಕ್ಷೇತ್ರದ ಅಭಿವೃದ್ಧಿಗೆ ಅಪಾರ ಸೇವೆ ಸಲ್ಲಿಸಿರುವ ಡಾ. ರಾಜೇಂದ್ರ ಕುಮಾರ್ ಅವರ ದೂರದೃಷ್ಟಿಯ ನಾಯಕತ್ವವನ್ನು ಈ ಸಂದರ್ಭದಲ್ಲಿ ಗಣ್ಯರು ಕೊಂಡಾಡಿದರು. ಬ್ಯಾಂಕಿನ ಪ್ರಗತಿ, ಸದಸ್ಯರ ವಿಶ್ವಾಸ ಹಾಗೂ ಗ್ರಾಮೀಣ ಆರ್ಥಿಕ ಬಲವರ್ಧನೆಗೆ ಅವರ ಮಾರ್ಗದರ್ಶನ ಮಹತ್ವದ ಪಾತ್ರ ವಹಿಸಿದೆ ಎಂದು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಸಿಎ ಬ್ಯಾಂಕಿನ ನಿರ್ದೇಶಕ ಶ್ರೀನಾಥ್ ಕೆ.ಎಂ ಹಾಗೂ ಬೆಳ್ತಂಗಡಿ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸಾದ್ ಜೈನ್ ಕಾರ್ಯಕ್ರಮದಲ್ಲಿ ಭಾಗವಹಿಸಿ, ಹಾರ್ದಿಕ ಶುಭಾಶಯಗಳನ್ನು ಅರ್ಪಿಸಿದರು. ಅವರ ಸೇವೆ ಇನ್ನೂ ದೀರ್ಘ ಕಾಲ ಮುಂದುವರಿದು ಸಹಕಾರಿ ಕ್ಷೇತ್ರ ಮತ್ತಷ್ಟು ಉತ್ತುಂಗಕ್ಕೇರಲಿ ಎಂದು ಹಾರೈಸಿದರು.

Related posts

ರೂ. 2.00 ಕೋಟಿ ಅನುದಾನದಲ್ಲಿ ಬೆಳ್ತಂಗಡಿ ನಗರದ ಕೆ.ಇ.ಬಿ ರಸ್ತೆ- ರೆಂಕೆದಗುತ್ತು-ಮಲ್ಲೊಟ್ಟು ಸಂಪರ್ಕಿಸುವ ರಸ್ತೆಯ ಅಗಲೀಕರಣ ಡಾಂಬರೀಕರಣ ಮತ್ತು ಒಳಚರಂಡಿ ನಿರ್ಮಾಣಕ್ಕೆ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಶಿಲಾನ್ಯಾಸ, ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಸೇನೆಗೆ ಆಯ್ಕೆಯಾದ ರಂಜಿತ್ ಪೂಜಾರಿಯವರಿಗೆ ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯಿಂದ ಸನ್ಮಾನ

Suddi Udaya

ಸಹನಾ ಶ್ರೀ ಫೌಂಡೇಶನ್ ವತಿಯಿಂದ ಬಂಗಾಡಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಕ್ರೀಡಾ ಸಮವಸ್ತ್ರ ವಿತರಣೆ

Suddi Udaya

ಬೆಳ್ತಂಗಡಿ : ವೃತ್ತ ನಿರೀಕ್ಷಕರಾಗಿ ರವಿ ಬಿ.ಎಸ್ ನೇಮಕ

Suddi Udaya

ಕಾಶಿಪಟ್ಣ ಕೇಳ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಯತೀಶ್ ಕೇದಿಗೆ

Suddi Udaya

ಕೋಲ್ಕತಾ ವೈದ್ಯ ವಿದ್ಯಾರ್ಥಿನಿ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ ಖಂಡಿಸಿ: ಬೆಳ್ತಂಗಡಿ ತಾಲೂಕಿನಲ್ಲಿ ತುರ್ತು ಸೇವೆ ಹೊರತುಪಡಿಸಿ ಹೊರರೋಗಿ ವಿಭಾಗ ಹಾಗೂ ಇತರ ವೈದ್ಯಕೀಯ ಸೇವೆಗಳು ಸ್ಥಗಿತ

Suddi Udaya
error: Content is protected !!