25.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಬಿಸಿಲಿನ ಬೇಗೆಗೆ ತಂಪೆರೆದ ವರುಣ

ಬೆಳ್ತಂಗಡಿ: ತಾಲೂಕಿನಲ್ಲಿ ಬಿಸಿಲ ಧಗೆ ಹೆಚ್ಚಾಗಿದ್ದು, ಜನರು ಪರಿತಪಿಸುತ್ತಿರುವ ನಡುವೆ ತಾಲೂಕಿನ ನಾನಾ ಕಡೆಗಳಲ್ಲಿ ಫೆ.೨೫ರಂದು ಮಳೆಯಾಗುವ ಮೂಲಕ ಇಳೆಗೆ ತಂಪೆರೆದಿದೆ. ಬಹುತೇಕ ಕಡೆಗಳಲ್ಲಿ ಮಧ್ಯಾಹ್ನದ ವೇಳೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿ ಸಿಡಿಲು,ಗಾಳಿಯೊಂದಿಗೆ ಸಾಧಾರಣದಿಂದ ಉತ್ತಮ ಮಳೆ ಸುರಿದಿದೆ. ಬೆಳಿಗ್ಗೆಯಿಂದ ಬಿಸಿಲಿನೊಂದಿಗೆ ಕೊಂಚ ಮೋಡ ಕವಿದ ವಾತಾವರಣವಿತ್ತು. ಹಠಾತ್ ಸುರಿದ ಈ ಮಳೆಯಿಂದಾಗಿ ವಾತಾವರಣದಲ್ಲಿ ಕೊಂಚ ತಂಪಿನ ಅನುಭವವಾಗಿದೆ.

ಬೆಳ್ತಂಗಡಿ ಪಟ್ಟಣ, ಚಾರ್ಮಾಡಿ ಘಾಟಿ ಸಹಿತ ಅಳದಂಗಡಿ, ತಣ್ಣೀರುಪಂತ, ಮುಂಡಾಜೆ,ಬ0ದಾರು, ಮೊಗ್ರು, ಉರುವಾಲು, ಕಣಿಯೂರು, ಮಚ್ಚಿನ, ಕಳಿಯ, ನ್ಯಾಯತರ್ಪು, ಸವಣಾಲು, ಹುಣ್ಸೆಕಟ್ಟೆ, ಮಡಂತ್ಯಾರು, ಕೊಕ್ಕಡ, ನಾವೂರು, ಬೆಳಾಲು, ತೆಕ್ಕಾರು, ಇಳಂತಿಲ, ಕಲ್ಮಂಜ ಸಹಿತ ನಾನಾ ಕಡೆಗಳಲ್ಲಿ ಮಳೆಯಾಗಿದೆ. ವಿಪರೀತ ಸೆಕೆಯಿಂದ ಕಂಗಾಲಾಗಿದ್ದ ಮಂದಿಗೆ ಈ ಬೇಸಿಗೆ ಮಳೆ ಕೊಂಚ ಸಮಾಧಾನ ತಂದಿದೆ.

ಫೆ.21ರಂದು ತಾಲೂಕಿನ ಕೆಲವು ಕಡೆಗಳಲ್ಲಿ ಮೊದಲ ಮಳೆಯಾಗಿತ್ತು. ಬಳಿಕ ಹೆಚ್ಚಿನ ಭಾಗದಲ್ಲಿ ಬುಧವಾರ ಎರಡನೇ ಬೇಸಿಗೆ ಮಳೆಯಾಗಿದೆ. ಪುಂಜಾಲಕಟ್ಟೆ-ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು ತಾಲೂಕಿನ ನಗರದ ಪ್ರದೇಶಗಳಲ್ಲಿ ಹೆದ್ದಾರಿ ಕಾಮಗಾರಿಯಿಂದ ಕೆಲವೊಂದು ಕಡೆಗಳಲ್ಲಿ ಅಂಗಡಿಗಳ ಮುಂಭಾಗದವರೆಗೆ ಮಳೆ ನೀರು ಬಂದಿತ್ತು. ಮಳೆ ಹೆಚ್ಚು ಸುರಿಯುತ್ತಿದ್ದರೆ ಮಳೆ ನೀರು ಅಂಗಡಿಯೊಳಗೆ ಹೋಗುತ್ತಿತ್ತು.ಇನ್ನು ಕೆಲವು ಕಡೆಗಳಲ್ಲಿ ಹನಿ ಮಳೆ ಸುರಿದಿದೆ. ಹಲವೆಡೆ ಅಂಗಳದಲ್ಲಿ ಒಣಗಲು ಹಾಕಿದ್ದ ಅಡಕೆ ಮಳೆಗೆ ಒದ್ದೆಯಾಗಿದೆ. ತಾಲೂಕಿನ ಹಲವು ಕಡೆಗಳಲ್ಲಿ ಬ್ರಹ್ಮಕಲಶೋತ್ಸವ, ಜಾತ್ರೆ, ನೇಮೋತ್ಸವ ಶುಭ ಸಮಾರಂಭಗಳು ಜರಗಲಿದ್ದು ಇದರ ಪೂರ್ವ ತಯಾರಿಗೆ ಮಳೆ ಅಡ್ಡಿ ನೀಡಿದೆ. ಗ್ರಾಮೀಣ ಭಾಗಗಳಲ್ಲಿ ವಿದ್ಯುತ್ ಪೂರೈಕೆ ಹಾಗೂ ಅಂತರ್ಜಾಲ ವ್ಯವಸ್ಥೆಯಲ್ಲಿ ವ್ಯತ್ಯಯ ಉಂಟಾಗಿದೆ.

Related posts

ಮಂಡ್ಯ ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿ ಅಭಿನಂದನ್ ಹರೀಶ್ ಕುಮಾರ್ ನೇತೃತ್ವದಲ್ಲಿ ಕಾರ್ಯಕಾರಿಣಿ ಸಭೆ

Suddi Udaya

ಸೂಳಬೆಟ್ಟು ಬರಯ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಧ್ವಜ ಸ್ತಂಭ ಪ್ರತಿಷ್ಠೆ

Suddi Udaya

ಉಜಿರೆ : ಹಳೆಪೇಟೆ ಬಳಿ ಸಂಚರಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ: ಬೈಕ್ ಸವಾರ ಪ್ರಾಣಾಪಾಯದಿಂದ ಪಾರು

Suddi Udaya

ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದ ಅಂಬ್ಯುಲೆನ್ಸ್ ಗೆ ಟಯರ್ ಅಳವಡಿಕೆ: ಸುದ್ದಿ ಉದಯ ವರದಿ ಫಲಶ್ರುತಿ

Suddi Udaya

ನೆರಿಯ: ರಸ್ತೆ ರಿಪೇರಿ ಮಾಡಿ ಮಾದರಿಯಾದ ಅಧ್ಯಾಪಕ ತಮ್ಮಯ್ಯ

Suddi Udaya

ಬೆಳಾಲು : ವಿಶ್ವಕರ್ಮ ಸಂಘದ ಪೂರ್ವಭಾವಿ ಸಭೆ ಹಾಗೂ ನೂತನ ಸಮಿತಿ ರಚನೆ

Suddi Udaya
error: Content is protected !!