30.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಭಿನಂದನೆಗ್ರಾಮಾಂತರ ಸುದ್ದಿಬೆಳ್ತಂಗಡಿ

ಸಹಕಾರಿ ಕ್ಷೇತ್ರದ ಧುರೀಣರಿಗೆ ಬೆಳ್ತಂಗಡಿ ಸಿಎ ಬ್ಯಾಂಕ್‌ನ ಹಾರ್ದಿಕ ಶುಭಾಶಯ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ರಾಜೇಂದ್ರ ಕುಮಾರ್ ಅವರ 77ನೇ ಜನ್ಮದಿನಾಚರಣೆ ಅಂಗವಾಗಿ ಮಂಗಳೂರಿನ ಡಿಸಿಸಿ ಬ್ಯಾಂಕ್ ಮುಖ್ಯ ಕಚೇರಿಯಲ್ಲಿ ಆತ್ಮೀಯ ಸಮಾರಂಭ ಜರುಗಿತು.

ಸಹಕಾರಿ ಕ್ಷೇತ್ರದ ಅಭಿವೃದ್ಧಿಗೆ ಅಪಾರ ಸೇವೆ ಸಲ್ಲಿಸಿರುವ ಡಾ. ರಾಜೇಂದ್ರ ಕುಮಾರ್ ಅವರ ದೂರದೃಷ್ಟಿಯ ನಾಯಕತ್ವವನ್ನು ಈ ಸಂದರ್ಭದಲ್ಲಿ ಗಣ್ಯರು ಕೊಂಡಾಡಿದರು. ಬ್ಯಾಂಕಿನ ಪ್ರಗತಿ, ಸದಸ್ಯರ ವಿಶ್ವಾಸ ಹಾಗೂ ಗ್ರಾಮೀಣ ಆರ್ಥಿಕ ಬಲವರ್ಧನೆಗೆ ಅವರ ಮಾರ್ಗದರ್ಶನ ಮಹತ್ವದ ಪಾತ್ರ ವಹಿಸಿದೆ ಎಂದು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಸಿಎ ಬ್ಯಾಂಕಿನ ನಿರ್ದೇಶಕ ಶ್ರೀನಾಥ್ ಕೆ.ಎಂ ಹಾಗೂ ಬೆಳ್ತಂಗಡಿ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸಾದ್ ಜೈನ್ ಕಾರ್ಯಕ್ರಮದಲ್ಲಿ ಭಾಗವಹಿಸಿ, ಹಾರ್ದಿಕ ಶುಭಾಶಯಗಳನ್ನು ಅರ್ಪಿಸಿದರು. ಅವರ ಸೇವೆ ಇನ್ನೂ ದೀರ್ಘ ಕಾಲ ಮುಂದುವರಿದು ಸಹಕಾರಿ ಕ್ಷೇತ್ರ ಮತ್ತಷ್ಟು ಉತ್ತುಂಗಕ್ಕೇರಲಿ ಎಂದು ಹಾರೈಸಿದರು.

Related posts

ಉಜಿರೆ: ನಿಲ್ಲಿಸಿ ಹೋಗಿದ್ದ ಟಿಟಿ ವಾಹನ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿಗಾಹುತಿ

Suddi Udaya

ಅಪಘಾತದಲ್ಲಿ ನಿಧನರಾದ ನಾವೂರು ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿ ಶಾಝಿನ್ ರವರಿಗೆ ಶ್ರದ್ಧಾಂಜಲಿ

Suddi Udaya

ನೆರಿಯ: ಹಿರಿಯ ದೈವ ನರ್ತಕ ತನಿಯಪ್ಪ ನಲಿಕೆ ನಿಧನ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಮುಂಬೈನ ಡೊಂಬಿವಿಲಿನಲ್ಲಿ ನಡೆದ ಶಾರದೋತ್ಸವ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಭಕ್ತಿಹೆಜ್ಜೆ ಬಳಗದ ಭಜನಾ ಮಂಡಳಿಯ ಭಜಕರಿಂದ ಭಜನಾ ಸೇವೆ

Suddi Udaya

ಉಜಿರೆ ಟಿಬಿ. ಕ್ರಾಸ್ ಬಳಿ ಕಾರು ಪಲ್ಟಿ: ಚಾಲಕ ಪ್ರಾಣಪಾಯದಿಂದ ಪಾರು

Suddi Udaya
error: Content is protected !!