25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಅನುಗ್ರಹದಲ್ಲಿ ಯು.ಕೆ.ಜಿ ಮಕ್ಕಳ ಪದವಿ ಪ್ರದಾನ ಸಮಾರಂಭ

ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಯು.ಕೆ.ಜಿ ಮಕ್ಕಳ ಪದವಿ ಪ್ರದಾನ ಸಮಾರಂಭವು ಶಾಲಾ ಸಂಚಾಲಕರಾದ ವಂ| ಫಾ| ಅಬೆಲ್ ಲೋಬೊರವರ ಆಧ್ಯಕ್ಷತೆಯಲ್ಲಿ ಶಾಲಾ ಸಭಾಭವನದಲ್ಲಿ ನಡೆಯಿತು. ಯಲ್.ಕೆ.ಜಿ ಪುಟಾಣಿಗಳ ಪ್ರಾರ್ಥನಾ ನೃತ್ಯದ ನಂತರ ಯು.ಕೆ.ಜಿ. ಪುಟಾಣಿಗಳು ತಮ್ಮ ಮುಗ್ಧ ಮಾತಿನ ಮೂಲಕ ಅತಿಥಿಗಳನ್ನು ಸ್ವಾಗತಿಸಿದರು.

ಮುಂದಕ್ಕೆ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಸಂಚಾಲಕರಾದ ವಂ| ಫಾ| ಅಬೆಲ್ ಲೋಬೊರವರು ಬಹುಮಾನ ವಿತರಿಸಿದರು. ಮುಖ್ಯ ಅತಿಥಿಗಳಾದ ಅನುಗ್ರಹ ವಿದ್ಯಾ ಸಂಸ್ಥೆಯ ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿಯಾದ ಶ್ರೀಮತಿ ಮೋನಿಕಾ ನಿಲೋಫರ್ ಡಿ’ಸೋಜ ರವರು ಮಕ್ಕಳಿಗೆ ಪದವಿ ಪ್ರದಾನ ಮಾಡಿ ಮಕ್ಕಳಿಗೆ ಶುಭ ಹಾರೈಸಿದರು. ಮಕ್ಕಳಿಗೆ ಶುಭ ಹಾರೈಸುತ್ತಾ ಪದವಿ ಪ್ರದಾನ ಗೀತೆಯನ್ನು ಹಾಡಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ವಂ!ಫಾ! ಡಾ! ವಿಜಯ್ ಲೋಬೊ ಅವರಿಗೆ ಡಾಕ್ಟರೇಟ್ ಪದವಿ ಲಭಿಸಿರುವ ಪ್ರಯುಕ್ತ ಶಾಲಾ ವತಿಯಿಂದ ಅಭಿನಂದನಾ ಸನ್ಮಾನ ನಡೆಸಲಾಯಿತು. ಸಮಾರಂಭದ ಆಧ್ಯಕ್ಷರಾದ ವಂ! ಫಾ! ಅಬೆಲ್ ಲೋಬೊರವರು ಆಧ್ಯಕ್ಷೀಯ ಭಾಷಣ ಮಾಡುತ್ತಾ ಕಾರ್ಯಕ್ರಮಕ್ಕೆ ಮೆಚ್ಚುಗೆಯನ್ನು ವ್ಯಕ್ತಪಡಿಸಿ ಮಕ್ಕಳಿಗೆ ಶುಭ ಕೋರಿದರು.

ವಿದ್ಯಾರ್ಥಿ ಶಾಶ್ವತ್ ರಾವ್ ನಿರೂಪಿಸಿದ ಕಾರ್ಯಕ್ರಮದ ನಂತರ ಪುಟಾಣಿ ಮಕ್ಕಳಿಂದ ವೈವಿದ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿದವು. ವೇದಿಕೆಯಲ್ಲಿ ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷ ಪ್ರವೀಣ್ ವಿಜಯ್ ಡಿ’ಸೋಜ, ಕಾರ್ಯದರ್ಶಿ ಮರ್ಲಿನ್ ಡಿ’ಸೋಜ ಹಾಗೂ ಪೋಷಕ ಪ್ರತಿನಿಧಿಯಾದ ಅಶ್ಮಿತಾ ಹಾಜರಿದ್ದರು. ಪೂರ್ವ ಪ್ರಾಥಮಿಕ ಸಹಶಿಕ್ಷಕಿ ಗ್ರೇಸಿ ಸಲ್ಡಾನ್ಹ, ಶ್ರೀಮತಿ ವಿನ್ನಿ ಮರಿಯ, ಅಕ್ಷತಾ, ಪ್ರಣೀತಾ ಪೆರಾವೊ ಹಾಗೂ ಗೀತಾ ಕಾರ್ಯಕ್ರಮಕ್ಕೆ ಸಹಕರಿಸಿದರು.

Related posts

ಅಸಂಘಟಿತ ಕಾರ್ಮಿಕ ನಗರ ಸಮಿತಿ & ಗ್ರಾಮೀಣ ಸಮಿತಿಯ ವತಿಯಿಂದ ಪದಾಧಿಕಾರಿಗಳ & ಕಾರ್ಯಕರ್ತರ ಸಮಲೋಚನೆ ಸಭೆ

Suddi Udaya

ಧರ್ಮಸ್ಥಳ ವಲಯದ ಭಜನಾ ಮಂಡಳಿಯ ಪರಿಷತ್ ನ ಸಭೆ

Suddi Udaya

ಉಜಿರೆ: ಅನುಗ್ರಹ ಆಂ.ಮಾ. ಪ್ರೌಢಶಾಲೆಯಲ್ಲಿ ಮಾದಕ ವಸ್ತುಗಳ ಸೇವನೆ ಹಾಗೂ ದುಷ್ಪರಿಣಾಮಗಳ ಮಾಹಿತಿ ಕಾರ್ಯಾಗಾರ

Suddi Udaya

ಮಾ 11: ಶ್ರೀ ಜನಾರ್ದನ ದೇವರ ಬ್ರಹ್ಮಕಲಶೋತ್ಸವ ದಿನ ಉಜಿರೆಯಲ್ಲಿ ನಡೆಯಲಿದೆ ಐತಿಹಾಸಿಕ ಶೋಭಾಯಾತ್ರೆ “ಧರ್ಮಯಾನ”

Suddi Udaya

ಮೈಸೂರಿನಲ್ಲಿ ಬಾಲಕಿಯರ ವಿಭಾಗದ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟ: ಜಿದ್ದಾಜಿದ್ದಿನ ಪಂದ್ಯಾವಳಿಯಲ್ಲಿ ಸತತ 9ನೇ ಬಾರಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಬಂದಾರು ಶಾಲೆ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ರವರಿಗೆ ಐಐಬಿ ಬೆಸ್ಟ್ ಬುಸಿನೆಸ್ ಲೀಡರ್‌ಶಿಪ್ ಅವಾರ್ಡ್ -2023 ಪ್ರಶಸ್ತಿ

Suddi Udaya
error: Content is protected !!