September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಜನಾರ್ದನ ಸ್ವಾಮಿಯ ಬ್ರಹ್ಮಕಲಶೋತ್ಸವ: ಮಾ.2ರಂದು ಹೊರೆಕಾಣಿಕೆಯಲ್ಲಿ ಲಾಯಿಲದಿಂದ “ಒಂದು ಸಾವಿರ” ತೆಂಗಿನಕಾಯಿ, ಸಮರ್ಪಣೆ; ಬಿ.ಕೆ ಧನಂಜಯ್ ರಾವ್

ಉಜಿರೆ ಶ್ರೀ ಜನಾರ್ಧನ ಸ್ವಾಮಿಯ. ಬ್ರಹ್ಮಕಲಶೋತ್ಸವ ಮಾರ್ಚ್ 3ರಿಂದ ಮಾರ್ಚ್ 11ರವರೆಗೆ ಭಕ್ತಿ ಸಡಗರ ಸಂಭ್ರಮ ವಿಜೃಂಭಣೆಯಿಂದ ನಡೆಯಲಿದ್ದು, ವಿಜಯ ಗೋಪುರ ಲೋಕಾರ್ಪಣೆ, ನೂತನ ಬ್ರಹ್ಮರಥ ಮತ್ತು ಪುಷ್ಪರಥ ಸಮರ್ಪಣೆಯ ಮಹಾ ವೈಭವ ನಡೆಯಲಿದ್ದು, ಮಾ.,2ರಂದು ಪೂಜ್ಯ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಂತೆ ಲಾಯಿಲ ಗ್ರಾಮದ ಗಣ್ಯರು,ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಒಕ್ಕೂಟದ ಸದಸ್ಯರು ಹಾಗೂ ಊರವರ ಸಂಪೂರ್ಣವಾದ ಸಾಕಾರದೊಂದಿಗೆ 1000 ತೆಂಗಿನಕಾಯಿ, ಅಕ್ಕಿ, ತರಕಾರಿಗಳು, ಬಾಳೆಗೊನೆ, ಸೀಯಾಳ, ಬೆಲ್ಲ, ಸಕ್ಕರೆ, ವೀಳ್ಯದೆಲೆ, ಮಾವಿನ ಮಿಡಿ ,ಹಲಸಿನಕಾಯಿಯನ್ನು ಹೊರೆಕಾಣಿಕೆಯಲ್ಲಿ ಭಕ್ತರೊಂದಿಗೆ ಸೇರಿಕೊಂಡು ಲಾಯಿಲದಿಂದ ಉಜಿರೆಯವರೆಗೆ ಭಕ್ತರ ಒಂದುಗೂಡುವಿಕೆಯಲ್ಲಿ ಕೊರೆಕಾಣಿಕೆ ಸಾಗಿ ಬರಲಿದೆ ಎಂದು ಬೆಳ್ತಂಗಡಿ ತಾಲೂಕಿನ ಹಿರಿಯ ವಕೀಲರಾದ ಬಿ ಕೆ ಧನಂಜಯ್ ರಾವ್ ರವರು ತಿಳಿಸಿದರು.

ಈ ಸಂದರ್ಭ ಲಾಯಿಲ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಗಿರೀಶ್ ಡೋಂಗ್ರೆ, ಪಿಲಿಪಂಜರ ದೈವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಸುರೇಶ್ ಬರಮೇಲು , ಲಾಯಿಲ ಗ್ರಾಮ ಪಂಚಾಯಿತ ಮಾಜಿ ಉಪಾಧ್ಯಕ್ಷ ಗಣೇಶ್ ಆರ್, ಮಾಜಿ ತಾಲೂಕು ಪಂಚಾಯತ್ ಸದಸ್ಯ ಸುಧಾಕರ ಬಿ.ಎಲ್. , ಲಾಯಿಲ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಆಶಾ ಸಲ್ದಾನ, ಗಣೇಶೋತ್ಸವ ಸಮಿತಿ ಅಧ್ಯಕ್ಷ ರಮೇಶ್ ಆರ್, ಲಾಯಿಲ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಸದಸ್ಯ ಗುರು ಅಜೆಕಲ್, ಪಿಲಿಪಂಜರ ದೈವಸ್ಥಾನ ವ್ಯವಸ್ಥಾಪನ ಸಮಿತಿ ಸದಸ್ಯ ಅನಿಲ್ ಕಾಶಿಬೆಟ್ಟು, ಮೇಲ್ವಿಚಾರಕರಾದ ರಾಮ್ ಕುಮಾರ್ ಮತ್ತು ಸುಶಾಂತ್, ಸೇವಾಪ್ರತಿನಿಧಿ ಗೀತಾ, ಗ್ರಾಮಸ್ಥರು ಮತ್ತು ಒಕ್ಕೂಟದ ಸದಸ್ಯರು ಉಪಸ್ಥಿತರಿದ್ದರು.

Related posts

ಪದ್ಮನಾಭ ಮಾಣಿಂಜ ನಿಧನಕ್ಕೆ ಕನ್ಯಾಡಿ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಸಂತಾಪ

Suddi Udaya

ಉಜಿರೆ ಶ್ರೀ ಧ. ಮಂ. ಪದವಿಪೂರ್ವ ಕಾಲೇಜಿನಲ್ಲಿ ಜಿಲ್ಲಾ ಪ.ಪೂ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರ ಕಾರ್ಯಾಗಾರದ ಸಮಾರೋಪ

Suddi Udaya

ಮಲವಂತಿಗೆ : ಕೃಷಿಕನನ್ನು ಒಕ್ಕೆಲಬ್ಬಿಸಿ ಕೃಷಿಯನ್ನು ಸಂಪೂರ್ಣ ನಾಶ ಪಡಿಸಿದ ಅರಣ್ಯ ಇಲಾಖೆ

Suddi Udaya

ವಾಟ್ಸಾಪ್ ಸ್ಟೇಟಸ್ ಹಾಕಿದ ವಿಚಾರದಲ್ಲಿ ಜಾತಿ ನಿಂದನೆ, ಹಲ್ಲೆ ಆರೋಪ: ಆರೋಪಿಗಳಿಬ್ಬರಿಗೆ ನ್ಯಾಯಾಂಗ ಬಂಧನ

Suddi Udaya

ಬೆಳ್ತಂಗಡಿಯ ನೂತನ ಬಸ್ ನಿಲ್ದಾಣ ಕಾಮಗಾರಿಗೆ ಭೂಮಿಪೂಜೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಲಾಯಿಲ: ಬೆರ್ಕೆ ರಸ್ತೆಯಲ್ಲಿ ಕಸ ಎಸೆದವರಿಂದಲೇ ವಿಲೇವಾರಿ ಮಾಡಿ ದಂಡ ವಿಧಿಸಿದ ಲಾಯಿಲ ಗ್ರಾ.ಪಂ.

Suddi Udaya
error: Content is protected !!