July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರಿಪಳ್ಳದಲ್ಲಿ ಬ್ಯಾನರ್ ಹರಿದು ವಿಕೃತಿ ಮೆರೆದ ಕಿಡಿಗೇಡಿಗಳು

ಗುರಿಪಳ್ಳ: ಉಜಿರೆ ಗುರಿಪಳ್ಳ ಇಂದಬೆಟ್ಟು ರಸ್ತೆಯ ಅಂಬಡಬೆಟ್ಟು ಸೇತುವೆ ಶಿಥಿಲಾವಸ್ಥೆಗೆ ತಲುಪಿದ್ದು ಈ ಬಗ್ಗೆ ಊರವರ ಮನವಿಯಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರವರ ವಿಶೇಷ ಮುತುವರ್ಜಿಯಿಂದ ಕರ್ನಾಟಕ ಸರಕಾರದ ಲೋಕೋಪಯೋಗಿ ಇಲಾಖೆ ಸಚಿವರಾದ ಸತೀಶ್ ಜಾರಕಿಹೊಳಿ ಇವರು ಇಲಾಖೆಯ ವತಿಯಿಂದ ರೂ. 2.5ಕೋಟಿ ಅನುದಾನ ಬಿಡುಗಡೆಗೊಳಿಸಿರುತ್ತಾರೆ.

ಈ ಬಗ್ಗೆ ಕಳೆದ ಎರಡು ವರ್ಷಗಳಿಂದ ಸರಕಾರದ ಜೊತೆ ನಿರಂತರವಾಗಿ ಸಂಪರ್ಕ ಸಾದಿಸಿ ಲೋಕೋಪಯೋಗಿ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿ ಅನುದಾನ ಬಿಡುಗಡೆಗೊಳಿಸುವಲ್ಲಿ ಮಹತ್ತರ ಪಾತ್ರವಹಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರವರಿಗೆ ಹಾಗೂ ಕರ್ನಾಟಕ ಸರಕಾರಕ್ಕೆ ಅಭಿನಂದನೆ ಸಲ್ಲಿಸಿ ಊರವರು ಹಾಕಿರುವ ಬ್ಯಾನರ್ ಅನ್ನು ಯಾರೋ ಕಿಡಿಗೇಡಿಗಳು ನಿನ್ನೆ ರಾತ್ರಿ ಹರಿದು ಹಾಕಿ ವಿಕೃತಿ ಮೆರೆದಿರುತ್ತಾರೆ ಸಮಾಜದ ಶಾಂತಿ ಕದಡುವ ಉದ್ದೇಶದಿಂದ ಇಂತಹ ವಿಕೃತ ಮನಸ್ಸಿನ ದುಷ್ಟ ಶಕ್ತಿಗಳ ಈ ಕೃತ್ಯ ಖಂಡನಾರ್ಹ ಈ ಬಗ್ಗೆ ಊರವರ ಪರವಾಗಿ ಪೊಲೀಸ್ ಇಲಾಖೆಗೆ ದೂರು ದಾಖಲಿಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಲಾಗುವುದೆಂದು ಸೇತುವೆ ನಿರ್ಮಾಣಕ್ಕೆ ಶ್ರಮವಹಿಸಿದ ಸ್ಥಳೀಯರು ಅಭಿಪ್ರಾಯ ವ್ಯಕ್ತ ಪಡಿಸಿರುತ್ತಾರೆ.

Related posts

ಎಸ್.ಡಿ.ಎಂ ಸ್ವಾಯತ್ತ ಕಾಲೇಜು : ವಿದ್ಯಾರ್ಥಿಗಳಿಂದ ಪ್ರಾಯೋಗಿಕ ‘ಮಾದರಿ ಸಂಸತ್ತು 2025 -26’

Suddi Udaya

ನಾಳೆ (ಎ.30) ನಾರಾವಿ ಉಪ ವಲಯಾರಣ್ಯಾಧಿಕಾರಿ ಕುಶಾಲಪ್ಪ ಗೌಡರವರಿಗೆ ಸೇವಾ ನಿವೃತ್ತಿ

Suddi Udaya

ಬಳಂಜ ಶಾಲಾ ಅಮೃತ ಮಹೋತ್ಸವ ಸಮಿತಿಯಿಂದ ಮೆಸ್ಕಾಂ ಅಧ್ಯಕ್ಷ ಕೆ‌.ಹರೀಶ್ ಕುಮಾರ್ ಭೇಟಿ

Suddi Udaya

ಸಂತ ತೆರೇಸಾ ಸಂಯುಕ್ತ ಪ.ಪೂ. ಕಾಲೇಜಿನಲ್ಲಿ ಶಾಲಾ ಮಂತ್ರಿ ಮಂಡಲದ ಉದ್ಘಾಟನಾ ಸಮಾರಂಭ

Suddi Udaya

ಕೆ. ವಸಂತ ಬಂಗೇರ ನಿಧನಕ್ಕೆ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಹಾಗೂ ಬಿಷಪ್ ಲಾರೆನ್ಸ್ ಮುಕ್ಕುಯಿ ರವರಿಂದ ಅಂತಿಮ ನಮನ

Suddi Udaya

ಧರ್ಮಸ್ಥಳದಲ್ಲಿ ರಾಜ್ಯಾದ್ಯಂತ ಶುದ್ಧಗಂಗಾ ಘಟಕಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರೇರಕರಿಗೆ ಮಾರ್ಗದರ್ಶನ

Suddi Udaya
error: Content is protected !!