July 23, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ರೆಡ್ ಕ್ರಾಸ್ ತಂಡ ಕಳೆಂಜ ರಾಮಣ್ಣ ಗೌಡರ ಮನೆಗೆ ಭೇಟಿ

ಬೆಳ್ತಂಗಡಿ: ವಿವಿಧ ಕಾರಣಕ್ಕಾಗಿ ಹಾಸಿಗೆ ಹಿಡಿದಿರುವ ರೋಗಿಗಳನ್ನು ಭೇಟಿ ನೀಡಿ, ಅವರಿಗೆ ಆತ್ಮ ಸ್ಥೈರ್ಯ ಕೊಡುವ, ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿಯುವ ಕೆಲಸವನ್ನು ಬೆಳ್ತಂಗಡಿ ರೆಡ್ ಕ್ರಾಸ್ ಸೊಸೈಟಿಯ ತಂಡ ಹಲವಾರು ವರ್ಷಗಳಿಂದ ಸತತವಾಗಿ ನಡೆಸಿಕೊಂಡು ಬರುತ್ತಿದ್ದು, ಇಂದು ಕಳೆಂಜ ಗ್ರಾಮದ ರಾಮಣ್ಣ ಗೌಡರ ಮನೆಗೆ ಭೇಟಿ ನೀಡಿತು.

ಕಳೆಂಜ ಗ್ರಾಮದ ರಾಮಣ್ಣ ಗೌಡ ಸುಮಾರು 26 ವರ್ಷಗಳ ಹಿಂದೆ ಕೃಷಿ ಮರದಿಂದ ಬಿದ್ದು ಬೆನ್ನುಹುರಿಗೆ ಗಾಯವಾಗಿ ಎದ್ದು ನಡೆಯಲಾರದ ಸ್ಥಿತಯಲ್ಲಿದ್ದು, ಬೆಳ್ತಂಗಡಿ ರೆಡ್ ಕ್ರಾಸ್ ಘಟಕದ ಅಧ್ಯಕ್ಷರಾದ ಹರಿದಾಸ್ ಎಸ್.ಎಮ್ ರವರ ತಂಡ ಅವರನ್ನು ಭೇಟಿ ಮಾಡಿ ಸಾಂತ್ವಾನ ಹೇಳಿದರು.

ಈ ಸಂದರ್ಭದಲ್ಲಿ ರೆಡ್ ಕ್ರಾಸ್ ಸೊಸೈಟಿ ಬೆಳ್ತಂಗಡಿ ಘಟಕದ ಅಧ್ಯಕ್ಷ ಹರಿದಾಸ್ ಎಸ್.ಎಂ, ನಿರ್ದೇಶಕರಾದ ಸುಕನ್ಯಾ ಹೆಚ್, ಸುಜೀತ್ ರಾವ್ ಉಜಿರೆ ಉಪಸ್ಥಿತರಿದ್ದರು.

Related posts

ಸಂಬೋಳ್ಯದ ಮೃತ ಬಾಲಕ ಸುಮಂತ್ ಮನೆಗೆ ಸಂಸದ ಬ್ರಿಜೇಶ್ ಚೌಟ ಭೇಟಿ

Suddi Udaya

ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಮಹಿಳಾ ಬಿಲ್ಲವ ವೇದಿಕೆ ಮತ್ತು ಯುವ ಬಿಲ್ಲವ ವೇದಿಕೆ ಕುವೆಟ್ಟು ಓಡಿಲ್ನಾಳ ಗ್ರಾಮ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮ ಕುಂಭಾಭಿಷೇಕ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಭೇಟಿ

Suddi Udaya

ಇಳಂತಿಲ : ಅಣಬೆ ಕೃಷಿ ತರಬೇತಿ

Suddi Udaya

ಎ.18 : ಎಸ್.ಡಿ.ಪಿ.ಐ ಅಭ್ಯರ್ಥಿ ಅಕ್ಬರ್ ನಾಮಪತ್ರ ಸಲ್ಲಿಕೆ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ನಲ್ಲಿ ಸಂಭ್ರಮದ ಮೊಂತಿ ಹಬ್ಬ (ತೆನೆ ಹಬ್ಬ)

Suddi Udaya
error: Content is protected !!