July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರಿಪಳ್ಳದಲ್ಲಿ ಬ್ಯಾನರ್ ಹರಿದು ವಿಕೃತಿ ಮೆರೆದ ಕಿಡಿಗೇಡಿಗಳು

ಗುರಿಪಳ್ಳ: ಉಜಿರೆ ಗುರಿಪಳ್ಳ ಇಂದಬೆಟ್ಟು ರಸ್ತೆಯ ಅಂಬಡಬೆಟ್ಟು ಸೇತುವೆ ಶಿಥಿಲಾವಸ್ಥೆಗೆ ತಲುಪಿದ್ದು ಈ ಬಗ್ಗೆ ಊರವರ ಮನವಿಯಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರವರ ವಿಶೇಷ ಮುತುವರ್ಜಿಯಿಂದ ಕರ್ನಾಟಕ ಸರಕಾರದ ಲೋಕೋಪಯೋಗಿ ಇಲಾಖೆ ಸಚಿವರಾದ ಸತೀಶ್ ಜಾರಕಿಹೊಳಿ ಇವರು ಇಲಾಖೆಯ ವತಿಯಿಂದ ರೂ. 2.5ಕೋಟಿ ಅನುದಾನ ಬಿಡುಗಡೆಗೊಳಿಸಿರುತ್ತಾರೆ.

ಈ ಬಗ್ಗೆ ಕಳೆದ ಎರಡು ವರ್ಷಗಳಿಂದ ಸರಕಾರದ ಜೊತೆ ನಿರಂತರವಾಗಿ ಸಂಪರ್ಕ ಸಾದಿಸಿ ಲೋಕೋಪಯೋಗಿ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿ ಅನುದಾನ ಬಿಡುಗಡೆಗೊಳಿಸುವಲ್ಲಿ ಮಹತ್ತರ ಪಾತ್ರವಹಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರವರಿಗೆ ಹಾಗೂ ಕರ್ನಾಟಕ ಸರಕಾರಕ್ಕೆ ಅಭಿನಂದನೆ ಸಲ್ಲಿಸಿ ಊರವರು ಹಾಕಿರುವ ಬ್ಯಾನರ್ ಅನ್ನು ಯಾರೋ ಕಿಡಿಗೇಡಿಗಳು ನಿನ್ನೆ ರಾತ್ರಿ ಹರಿದು ಹಾಕಿ ವಿಕೃತಿ ಮೆರೆದಿರುತ್ತಾರೆ ಸಮಾಜದ ಶಾಂತಿ ಕದಡುವ ಉದ್ದೇಶದಿಂದ ಇಂತಹ ವಿಕೃತ ಮನಸ್ಸಿನ ದುಷ್ಟ ಶಕ್ತಿಗಳ ಈ ಕೃತ್ಯ ಖಂಡನಾರ್ಹ ಈ ಬಗ್ಗೆ ಊರವರ ಪರವಾಗಿ ಪೊಲೀಸ್ ಇಲಾಖೆಗೆ ದೂರು ದಾಖಲಿಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಲಾಗುವುದೆಂದು ಸೇತುವೆ ನಿರ್ಮಾಣಕ್ಕೆ ಶ್ರಮವಹಿಸಿದ ಸ್ಥಳೀಯರು ಅಭಿಪ್ರಾಯ ವ್ಯಕ್ತ ಪಡಿಸಿರುತ್ತಾರೆ.

Related posts

ಉಜಿರೆ : ಶ್ರೀ.ಧ.ಮಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ‘ವಿದ್ಯಾರ್ಥಿ ಸಂಸತ್ತು ಉದ್ಘಾಟನೆ’

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಪುರಸ್ಕಾರ

Suddi Udaya

ತುಳು ಕಲ್ಚರಲ್ ರಿಸರ್ಚ್ ಫೌಂಡೇಶನ್‌‌ ವತಿಯಿಂದ ಕರಂಬಾರು ಸ. ಹಿ. ಪ್ರಾ. ಶಾಲೆಯಲ್ಲಿ ‘ಶಾಲೆಡೊಂಜಿ ದಿನ’

Suddi Udaya

ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಆಶ್ರಯದಲ್ಲಿ ರಾಜಕೇಸರಿ ಸಂಘಟನೆಯ ಸಂಸ್ಥಾಪಕರಾದ ದೀಪಕ್ ಜಿ ಇವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕಿನ ವಿವಿಧ ಇಲಾಖೆಯ ಓವರಂ ಮ್ಯಾಚ್ ‘ರಾಜೇಶ್ವರಿ ರತ್ನ ಟ್ರೋಫಿ’ ಕ್ರಿಕೆಟ್ ಪಂದ್ಯಾಟ

Suddi Udaya

ಮಲೆಬೆಟ್ಟು ಶ್ರೀ ವನದುರ್ಗಾ ದೇವಸ್ಥಾನದ ಜಾತ್ರಾ ಮಹೋತ್ಸವ

Suddi Udaya

ಪಿಯುಸಿ ಫಲಿತಾಂಶ: ಕನ್ನಡದಲ್ಲಿ ಎಕ್ಸೆಲ್ ಕಾಲೇಜಿನ‌ 91 ವಿದ್ಯಾರ್ಥಿಗಳು 100ಕ್ಕೆ 100 ಅಂಕ ಗಳಿಕೆ

Suddi Udaya
error: Content is protected !!