25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರಿಪಳ್ಳದಲ್ಲಿ ಬ್ಯಾನರ್ ಹರಿದು ವಿಕೃತಿ ಮೆರೆದ ಕಿಡಿಗೇಡಿಗಳು

ಗುರಿಪಳ್ಳ: ಉಜಿರೆ ಗುರಿಪಳ್ಳ ಇಂದಬೆಟ್ಟು ರಸ್ತೆಯ ಅಂಬಡಬೆಟ್ಟು ಸೇತುವೆ ಶಿಥಿಲಾವಸ್ಥೆಗೆ ತಲುಪಿದ್ದು ಈ ಬಗ್ಗೆ ಊರವರ ಮನವಿಯಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರವರ ವಿಶೇಷ ಮುತುವರ್ಜಿಯಿಂದ ಕರ್ನಾಟಕ ಸರಕಾರದ ಲೋಕೋಪಯೋಗಿ ಇಲಾಖೆ ಸಚಿವರಾದ ಸತೀಶ್ ಜಾರಕಿಹೊಳಿ ಇವರು ಇಲಾಖೆಯ ವತಿಯಿಂದ ರೂ. 2.5ಕೋಟಿ ಅನುದಾನ ಬಿಡುಗಡೆಗೊಳಿಸಿರುತ್ತಾರೆ.

ಈ ಬಗ್ಗೆ ಕಳೆದ ಎರಡು ವರ್ಷಗಳಿಂದ ಸರಕಾರದ ಜೊತೆ ನಿರಂತರವಾಗಿ ಸಂಪರ್ಕ ಸಾದಿಸಿ ಲೋಕೋಪಯೋಗಿ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿ ಅನುದಾನ ಬಿಡುಗಡೆಗೊಳಿಸುವಲ್ಲಿ ಮಹತ್ತರ ಪಾತ್ರವಹಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರವರಿಗೆ ಹಾಗೂ ಕರ್ನಾಟಕ ಸರಕಾರಕ್ಕೆ ಅಭಿನಂದನೆ ಸಲ್ಲಿಸಿ ಊರವರು ಹಾಕಿರುವ ಬ್ಯಾನರ್ ಅನ್ನು ಯಾರೋ ಕಿಡಿಗೇಡಿಗಳು ನಿನ್ನೆ ರಾತ್ರಿ ಹರಿದು ಹಾಕಿ ವಿಕೃತಿ ಮೆರೆದಿರುತ್ತಾರೆ ಸಮಾಜದ ಶಾಂತಿ ಕದಡುವ ಉದ್ದೇಶದಿಂದ ಇಂತಹ ವಿಕೃತ ಮನಸ್ಸಿನ ದುಷ್ಟ ಶಕ್ತಿಗಳ ಈ ಕೃತ್ಯ ಖಂಡನಾರ್ಹ ಈ ಬಗ್ಗೆ ಊರವರ ಪರವಾಗಿ ಪೊಲೀಸ್ ಇಲಾಖೆಗೆ ದೂರು ದಾಖಲಿಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಲಾಗುವುದೆಂದು ಸೇತುವೆ ನಿರ್ಮಾಣಕ್ಕೆ ಶ್ರಮವಹಿಸಿದ ಸ್ಥಳೀಯರು ಅಭಿಪ್ರಾಯ ವ್ಯಕ್ತ ಪಡಿಸಿರುತ್ತಾರೆ.

Related posts

ಇಳಂತಿಲ ಗ್ರಾಮ ಪಂಚಾಯತ್ ಅಧ್ಯಕ್ಷ ವಸಂತ ಶೆಟ್ಟಿ ಮತ್ತು ಸದಸ್ಯ ಸುಪ್ರೀತ್ ಪಾಡೆಂಕಿ ರವರುಗಳಿಗೆ ನುಡಿನಮನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ದ.ಕ. ಜಿಲ್ಲೆಯ ಸಿ.ಬಿ.ಎಸ್.ಇ ಅಂತರ ಶಾಲೆಗಳ ಐಕ್ಸ್ (AICS) ಸಾಂಸ್ಕೃತಿಕ ಸ್ಪರ್ಧೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರಾಗಿ ನಾರಾಯಣ ಪೂಜಾರಿ , ಕೆ.ಶ್ರೀಧರ್ ರಾವ್ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಮೊಗ್ರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ದತ್ತು ಸ್ವೀಕಾರ

Suddi Udaya

ಅಳದಂಗಡಿ:ನಿಸ್ವಾರ್ಥ ಸೇವೆಗೆ ಸ್ಪೂರ್ತಿಯ ಸೆಲೆಯಾದ ರವಿಕಟಪಾಡಿ: ಕಿರ್ತನ್ ಅವರ ವೈದ್ಯಕೀಯ ಚಿಕಿತ್ಸೆಗೆ ರೂ.10 ಸಾವಿರ ಹಸ್ತಾಂತರ

Suddi Udaya
error: Content is protected !!