ಬೆಳ್ತಂಗಡಿ: ವಿವಿಧ ಕಾರಣಕ್ಕಾಗಿ ಹಾಸಿಗೆ ಹಿಡಿದಿರುವ ರೋಗಿಗಳನ್ನು ಭೇಟಿ ನೀಡಿ, ಅವರಿಗೆ ಆತ್ಮ ಸ್ಥೈರ್ಯ ಕೊಡುವ, ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿಯುವ ಕೆಲಸವನ್ನು ಬೆಳ್ತಂಗಡಿ ರೆಡ್ ಕ್ರಾಸ್ ಸೊಸೈಟಿಯ ತಂಡ ಹಲವಾರು ವರ್ಷಗಳಿಂದ ಸತತವಾಗಿ ನಡೆಸಿಕೊಂಡು ಬರುತ್ತಿದ್ದು, ಇಂದು ಕಳೆಂಜ ಗ್ರಾಮದ ರಾಮಣ್ಣ ಗೌಡರ ಮನೆಗೆ ಭೇಟಿ ನೀಡಿತು.
ಕಳೆಂಜ ಗ್ರಾಮದ ರಾಮಣ್ಣ ಗೌಡ ಸುಮಾರು 26 ವರ್ಷಗಳ ಹಿಂದೆ ಕೃಷಿ ಮರದಿಂದ ಬಿದ್ದು ಬೆನ್ನುಹುರಿಗೆ ಗಾಯವಾಗಿ ಎದ್ದು ನಡೆಯಲಾರದ ಸ್ಥಿತಯಲ್ಲಿದ್ದು, ಬೆಳ್ತಂಗಡಿ ರೆಡ್ ಕ್ರಾಸ್ ಘಟಕದ ಅಧ್ಯಕ್ಷರಾದ ಹರಿದಾಸ್ ಎಸ್.ಎಮ್ ರವರ ತಂಡ ಅವರನ್ನು ಭೇಟಿ ಮಾಡಿ ಸಾಂತ್ವಾನ ಹೇಳಿದರು.
ಈ ಸಂದರ್ಭದಲ್ಲಿ ರೆಡ್ ಕ್ರಾಸ್ ಸೊಸೈಟಿ ಬೆಳ್ತಂಗಡಿ ಘಟಕದ ಅಧ್ಯಕ್ಷ ಹರಿದಾಸ್ ಎಸ್.ಎಂ, ನಿರ್ದೇಶಕರಾದ ಸುಕನ್ಯಾ ಹೆಚ್, ಸುಜೀತ್ ರಾವ್ ಉಜಿರೆ ಉಪಸ್ಥಿತರಿದ್ದರು.











