24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರಿಪಳ್ಳದಲ್ಲಿ ಬ್ಯಾನರ್ ಹರಿದು ವಿಕೃತಿ ಮೆರೆದ ಕಿಡಿಗೇಡಿಗಳು

ಗುರಿಪಳ್ಳ: ಉಜಿರೆ ಗುರಿಪಳ್ಳ ಇಂದಬೆಟ್ಟು ರಸ್ತೆಯ ಅಂಬಡಬೆಟ್ಟು ಸೇತುವೆ ಶಿಥಿಲಾವಸ್ಥೆಗೆ ತಲುಪಿದ್ದು ಈ ಬಗ್ಗೆ ಊರವರ ಮನವಿಯಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರವರ ವಿಶೇಷ ಮುತುವರ್ಜಿಯಿಂದ ಕರ್ನಾಟಕ ಸರಕಾರದ ಲೋಕೋಪಯೋಗಿ ಇಲಾಖೆ ಸಚಿವರಾದ ಸತೀಶ್ ಜಾರಕಿಹೊಳಿ ಇವರು ಇಲಾಖೆಯ ವತಿಯಿಂದ ರೂ. 2.5ಕೋಟಿ ಅನುದಾನ ಬಿಡುಗಡೆಗೊಳಿಸಿರುತ್ತಾರೆ.

ಈ ಬಗ್ಗೆ ಕಳೆದ ಎರಡು ವರ್ಷಗಳಿಂದ ಸರಕಾರದ ಜೊತೆ ನಿರಂತರವಾಗಿ ಸಂಪರ್ಕ ಸಾದಿಸಿ ಲೋಕೋಪಯೋಗಿ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿ ಅನುದಾನ ಬಿಡುಗಡೆಗೊಳಿಸುವಲ್ಲಿ ಮಹತ್ತರ ಪಾತ್ರವಹಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರವರಿಗೆ ಹಾಗೂ ಕರ್ನಾಟಕ ಸರಕಾರಕ್ಕೆ ಅಭಿನಂದನೆ ಸಲ್ಲಿಸಿ ಊರವರು ಹಾಕಿರುವ ಬ್ಯಾನರ್ ಅನ್ನು ಯಾರೋ ಕಿಡಿಗೇಡಿಗಳು ನಿನ್ನೆ ರಾತ್ರಿ ಹರಿದು ಹಾಕಿ ವಿಕೃತಿ ಮೆರೆದಿರುತ್ತಾರೆ ಸಮಾಜದ ಶಾಂತಿ ಕದಡುವ ಉದ್ದೇಶದಿಂದ ಇಂತಹ ವಿಕೃತ ಮನಸ್ಸಿನ ದುಷ್ಟ ಶಕ್ತಿಗಳ ಈ ಕೃತ್ಯ ಖಂಡನಾರ್ಹ ಈ ಬಗ್ಗೆ ಊರವರ ಪರವಾಗಿ ಪೊಲೀಸ್ ಇಲಾಖೆಗೆ ದೂರು ದಾಖಲಿಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಲಾಗುವುದೆಂದು ಸೇತುವೆ ನಿರ್ಮಾಣಕ್ಕೆ ಶ್ರಮವಹಿಸಿದ ಸ್ಥಳೀಯರು ಅಭಿಪ್ರಾಯ ವ್ಯಕ್ತ ಪಡಿಸಿರುತ್ತಾರೆ.

Related posts

ಲಾಯಿಲ ಪ್ರಸನ್ನ ಫಾರ್ಮಸಿ ಕಾಲೇಜಿನಲ್ಲಿ”ಪ್ರಚಲಿತ ಉತ್ತಮ ಉತ್ಪಾದನಾ ಅಭ್ಯಾಸಗಳು” ನಿಯಂತ್ರಣ ವ್ಯವಹಾರಗಳ ಕುರಿತಾದ ವಿಚಾರಗೋಷ್ಠಿ

Suddi Udaya

ಬೆಳ್ತಂಗಡಿ ಬಸದಿಯಲ್ಲಿ ಮಹಾವೀರ ಜಯಂತಿ ಆಚರಣೆ

Suddi Udaya

ನಾಲ್ಕೂರು ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಕರುಣಾಕರ ಹೆಗ್ಡೆ ಆಯ್ಕೆ

Suddi Udaya

ಕಲ್ಮಂಜ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಮದ್ದಡ್ಕದಲ್ಲಿ ಗಾಂಜಾ ಮಾರಾಟ: ಆರೋಪಿ ಬಂಧನ: 90 ಗ್ರಾಂ ಗಾಂಜಾ ವಶ

Suddi Udaya

ಉಪ್ಪಿನಂಗಡಿ – ಮಡಂತ್ಯಾರು ಮಾರ್ಗದಲ್ಲಿ ರಾಜ್ಯ ಸಾರಿಗೆ ಸಂಸ್ಥೆ ಬಸ್ ಬಿಡುವಂತೆ ಆಗ್ರಹಿಸಿ ಅಧಿಕಾರಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಎಸ್‌ಡಿಪಿಐ ನಿಯೋಗ

Suddi Udaya
error: Content is protected !!