25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಾರ್ಯ: ಅಕ್ರಮ ಗೋ ಮಾಂಸ ಮಾರಾಟ: ಪ್ರಕರಣ ದಾಖಲು

ಬೆಳ್ತಂಗಡಿ: ಬಾರ್ಯ ಗ್ರಾಮದ ಹೊಸವಕ್ಲು ಪ್ರದೇಶದಲ್ಲಿ ಅಕ್ರಮವಾಗಿ ಗೋಹತ್ಯೆ ನಡೆಸಿ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫೆಬ್ರವರಿ 26ರಂದು ರಾತ್ರಿ 7.30 ಗಂಟೆ ಸುಮಾರಿಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯ ಪಿಎಸ್‌ಐ ಸುತೇಶ್ ಕೆ.ಪಿ. ಅವರು ಸಿಬ್ಬಂದಿಯವರೊಂದಿಗೆ ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಹೊಸವಕ್ಲು ಪ್ರದೇಶದ ಮನೆಯಲ್ಲಿ ಅಕ್ರಮವಾಗಿ ಗೋಹತ್ಯೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಲಭಿಸಿತು. ತಕ್ಷಣ ಪಿಸಿ 1966, ಪಿಸಿ 449 ಹಾಗೂ ಚಾಲಕ ಎಪಿಸಿ 102ರೊಂದಿಗೆ ಇಲಾಖಾ ಜೀಪಿನಲ್ಲಿ ರಾತ್ರಿ 8.20 ಗಂಟೆಗೆ ಸ್ಥಳಕ್ಕೆ ತೆರಳಿದರು.

ಪೊಲೀಸರ ಜೀಪ್ ಶಬ್ದ ಕೇಳಿ ಮನೆಯೊಂದರ ಶೆಡ್ ಬಳಿಯಿಂದ ಇಬ್ಬರು ವ್ಯಕ್ತಿಗಳು ಓಡಿ ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ. ಬಳಿಕ ಪಂಚರ ಸಮಕ್ಷಮದಲ್ಲಿ ಶೆಡ್ ಪರಿಶೀಲನೆ ನಡೆಸಿದಾಗ, ನೆಲದ ಮೇಲೆ ಬಿಳಿ ಪ್ಲಾಸ್ಟಿಕ್ ಟರ್ಬಲ್ ಮೇಲೆ ತಲಾ 1ಕೆ.ಜಿ. ತೂಕದ 30 ಪ್ಯಾಕೆಟ್‌ಗಳು, ಮರದ ಬುಟ್ಟಿಯಲ್ಲಿ 20 ಪ್ಯಾಕೆಟ್‌ಗಳು ಹಾಗೂ ಆಟೋ ರಿಕ್ಷಾದಲ್ಲಿ ತಲಾ 2 ಕೆ.ಜಿ. ತೂಕದ ಪ್ಯಾಕೆಟ್‌ಗಳು ಪತ್ತೆಯಾಗಿವೆ. ಒಟ್ಟು ಮಾಂಸದ ಅಂದಾಜು ಮೌಲ್ಯ ರೂ.11,200 ಎಂದು ಅಂದಾಜಿಸಲಾಗಿದೆ. ಇದಲ್ಲದೆ ತೂಕದ ಯಂತ್ರ (ಅಂದಾಜು ರೂ.2,000), ಕೆಂಪು ಹಿಡಿಯ ಚಾಕು (ರೂ.100), ವಿವೋ ಮೊಬೈಲ್ ಫೋನ್ (ರೂ.10,000), ಕೆಎ-70-ಎ-1421 ನೋಂದಣಿ ಸಂಖ್ಯೆಯ ಕಪ್ಪು ಬಣ್ಣದ ಆಟೋ ರಿಕ್ಷಾ (ಅಂದಾಜು ರೂ. 1,50,000) ಹಾಗೂ ಮರದ ಬುಟ್ಟಿ (ರೂ.100) ವಶಪಡಿಸಿಕೊಳ್ಳಲಾಗಿದೆ.

ಈ ಸಂಬಂಧ ಹೆಚ್. ಅಬ್ದುಲ್ ರಹಿಮಾನ್, ಅವರ ಪತ್ನಿ ರಹಮತ್ ಕೆ. ಹಾಗೂ ಇನ್ನೊಬ್ಬ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Related posts

ಚಿನ್ನದ ಕರಿಮಣಿ ಸರ ಕಳೆದುಹೋಗಿದೆ: ಸಿಕ್ಕಿದ್ದಲ್ಲಿ ಹಿಂತಿರುಗಿಸುವಂತೆ ಮನವಿ

Suddi Udaya

ಉಜಿರೆ ಅನುಗ್ರಹ ಎಲ್.ಕೆ.ಜಿ ವಿದ್ಯಾರ್ಥಿಗಳಿಂದ ಸೃಜನಾತ್ಮಕ ಚಟುವಟಿಕೆ

Suddi Udaya

ಲೋಕಸಭಾ ಚುನಾವಣೆ : ನಾಳೆ ಚುನಾವಣಾ ಆಯೋಗದಿಂದ ವೇಳಾಪಟ್ಟಿ ಪ್ರಕಟ

Suddi Udaya

ಅನುದಾನ ಅನ್ಯಾಯ ಪ್ರತಿಭಟಿಸಿ ಕರ್ನಾಟಕ ಕಾಂಗ್ರೆಸ್‌ನಿಂದ ಇಂದು ದಿಲ್ಲಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಎಂಎಲ್ಸಿ ಹರೀಶ್ ಕುಮಾರ್ ಭಾಗಿ

Suddi Udaya

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ – ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ಹದಿಹರೆಯದ ವಿಷಯದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಅದೂರುಪೇರಾಲ್ ಸ.ಹಿ.ಪ್ರಾ. ಶಾಲೆಯ ಎಸ್. ಡಿ. ಎಂ. ಸಿ ಅಧ್ಯಕ್ಷರಾಗಿ ವಿನಯ ಕೆ.

Suddi Udaya
error: Content is protected !!