July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೊಳ್ಳಜ್ಜ ದೈವದ ಮೂಲಸ್ಥಾನದಲ್ಲಿ ಸಾರ್ವಜನಿಕರಿಂದ ಅಗೇಲು ಸೇವೆ: ಶ್ರದ್ಧಾ ಭಕ್ತಿಯಿಂದ ಸಹಸ್ರಾರು ಭಕ್ತರಿಂದ ಬೊಳ್ಳಜ್ಜನಿಗೆ ಅಗೇಲು ಸಮರ್ಪಣೆ

ಬಳಂಜ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ನೇತೃತ್ವದಲ್ಲಿ ಕಾರಣೀಕ ಕ್ಷೇತ್ರ ಬೊಳ್ಳಜ್ಜ ದೈವದ ಮೂಲಸ್ಥಾನ ಬೊಳ್ಳಾಜೆಯಲ್ಲಿ ಬೊಳ್ಳಜ್ಜನಿಗೆ ಸಾರ್ವಜನಿಕ ಅಗೇಲು ಸೇವೆಯು ಫೆ 22 ರಂದು ಅತ್ಯಂತ ಶ್ರದ್ದಾ ಭಕ್ತಿಯಿಂದ ನಡೆಯಿತು.

ಅನಾದಿ ಕಾಲದಿಂದಲೂ ಭಕ್ತರು ಬೊಳ್ಳಜ್ಜ ದೈವದ ಮೂಲಸ್ಥಾನದಲ್ಲಿ ಬಂದು ಅನಾರೋಗ್ಯ, ಸಂಕಷ್ಟಗಳಿಂದ ಮುಕ್ತಿ ಪಡೆಯಲು,ಮಕ್ಕಳ ಶೈಕ್ಷಣಿಕ ಸಾಧನೆ, ಬೋರುವೆಲ್, ವಿವಾಹ, ಸಂತಾನ ಭಾಗ್ಯ ಮತ್ತು ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥನೆ ಸಲ್ಲಿಸುತ್ತಿದ್ದು, ಭಕ್ತರ ಇಷ್ಟಾರ್ಥಗಳು ಈಡೇರುತ್ತಿರುವುದರಿಂದ ವರ್ಷದಿಂದ ವರ್ಷಕ್ಕೆ ಇಲ್ಲಿ ಭಕ್ತರಿಂದ ಅಗೇಲು ಹೆಚ್ಚುತ್ತಿದೆ.

ಇದೇ ಸಂದರ್ಭದಲ್ಲಿ ದೀಪ ಪ್ರಜ್ವಲನೆಯನ್ನು ಬೆಂಗಳೂರು ಉದ್ಯಮಿ ಮಹೇಶ್ ಸುವರ್ಣ ಬಳಂಜ ಅವರು ನೆರವೇರಿಸಿದರು. ಬಳಿಕ ಮಾತನಾಡಿದ ಅವರು ಬೊಳ್ಳಜ್ಜನ ದೈವದ ಕಾರಣೀಕ ಇಲ್ಲಿ ಸೇರಿರುವ ಭಕ್ತಸಮೂಹವನ್ನು ನೋಡಿದಾಗ ತಿಳಿಯುತ್ತದೆ. ಈ ಭಾಗದ ಹೆಚ್ಚಿನ ಮನೆಯಲ್ಲಿ ಬೊಳ್ಳಜ್ಜನ ಆರಾಧನೆ ನಡೆಯುತ್ತಿದೆ. ಅದರಲ್ಲೂ ವಿಶೇಷವಾಗಿ ವಾರ್ಷಿಕ ಸಾರ್ವಜನಿಕ ಅಗೇಲು ಸೇವೆ ಭಕ್ತಿ ಭಾವದಿಂದ ಕೂಡಿದೆ ಎಂದರು.

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಮಾತನಾಡಿ ನಮ್ಮ ಹಿರಿಯರು ಭಕ್ತಿಯಿಂದ ಆರಾಧಿಸಿಕೊಂಡು ಬರುತ್ತಿದ್ದ ಬೊಳ್ಳಜ್ಜ ದೈವದ ಶಕ್ತಿ ನಂಬಿದವರಿಗೆ ಗೊತ್ತಿದೆ. ಹಾಗಾಗಿ ಪ್ರತಿವರ್ಷ ವ್ಯವಸ್ಥಿತವಾಗಿ ಸಾರ್ವಜನಿಕ ಅಗೇಲು ಸೇವೆಯನ್ನು ನೂರಾರು ಭಕ್ತರು ನೀಡುತ್ತಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಹಿರಿಯರಾದ ಹೆಚ್. ಧರ್ಣಪ್ಪ ಪೂಜಾರಿ, ಅಳದಂಗಡಿ ಸಿ.ಎ ಬ್ಯಾಂಕ್ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ, ಕಂಚಿನಡ್ಕ ಕ್ಷೇತ್ರದ ಅಧ್ಯಕ್ಷ ವಿನಯ್ ಶೆಟ್ಟಿ, ದೈವಪಾತ್ರಿ ವಸಂತ ಪೂಜಾರಿ,ಬಳಂಜ ಗ್ರಾ.ಪಂ ಮಾಜಿ ಅಧ್ಯಕ್ಷೆ ಶೋಭಾ ಕುಲಾಲ್ ಸೇರಿದಂತೆ ವಿವಿಧ ಕ್ಷೇತ್ರದ ಗಣ್ಯರು ಪಾಲ್ಗೊಂಡಿದ್ದರು. ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ಜರುಗಿತು.

ಕೃಷ್ಣಪ್ಪ ಪೂಜಾರಿಯವರಿಗೆ ಗೌರವಾರ್ಪಣೆ:
ಕಳೆದ ಹಲವು ವರ್ಷಗಳಿಂದ ಬೊಳ್ಳಜ್ಜ ದೈವದ ಮೂಲಸ್ಥಾನದಲ್ಲಿ ಸೇವೆ ನೀಡುತ್ತಿರುವ ಬಳಂಜ ಶಾಂತಿಗುರಿ ನಿವಾಸಿ ಹಿರಿಯರಾದ ಕೃಷ್ಣಪ್ಪ ಪೂಜಾರಿಯವರನ್ನು ಭಕ್ತಾದಿಗಳ ಪರವಾಗಿ ಶಾಲು, ಹಾರ ಹಾಕಿ, ಫಲಪುಷ್ಪ, ಸ್ಮರಣಿಕೆ ನೀಡಿ ಗೌರವಿಸಲಾಯಿತು


ಹೂವಿನಿಂದ ಶೃಂಗಾರಗೊಂಡ ಮೂಲಸ್ಥಾನ:
ತುಳುನಾಡಿನ ಆಚಾರ- ವಿಚಾರ ಅತ್ಯಂತ ಶ್ರೀಮಂತವಾಗಿದ್ದು, ದೈವರಾಧನೆಗೆ ವಿಶೇಷ ಸ್ಥಾನಮಾನ ನೀಡಲಾಗಿದೆ. ಬೊಳ್ಳಜ್ಜನ ಮೇಲೆ ಅಪಾರ ಭಕ್ತಿಯಿಂದ ಭಕ್ತರು ಮಲ್ಲಿಗೆ-ಹೂ, ಕೋಳಿ-ಚಕ್ಕುಲಿ, ಶೇಂದಿ, ಬೊಂಡ ನೀಡುತ್ತಿದ್ದಾರೆ. ಮೂಲಸ್ಥಾನವನ್ನು ಹೂವಿನಿಂದ ಶೃಂಗಾರಗೊಳಿಸಲಾಗಿತ್ತು. ಪ್ರತಿ ಅಗೇಲು ಸೇವೆ ನೀಡಿದವರಿಗೆ ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥನೆ ಸಲ್ಲಿಸಿ ಅಗೇಲು ಪ್ರಸಾದ ನೀಡಲಾಯಿತು.

Related posts

ಗುರಿಪಳ್ಳ ಇಂದಬೆಟ್ಟುವಿಗೆ ಪರ್ಯಾಯ ರಸ್ತೆಯ ಮೂಲಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಮನವಿ

Suddi Udaya

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ವತಿಯಿಂದ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿ ಸಮಾರೋಪ

Suddi Udaya

ಎ.15: ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಹಾಗೂ ಶ್ರೀ ದೇವಿ ಮಹಿಳಾ ಕೇಂದ್ರದ 25 ನೇ ವರ್ಷದ ಬೆಳ್ಳಿಹಬ್ಬ ಸಂಭ್ರಮ: ಏಕಾಹ ಭಜನಾ ಕಾರ್ಯಕ್ರಮ ಮತ್ತು 45 ಭಜನಾ ತಂಡಗಳಿಂದ ಭಜನಾ ಕಮ್ಮಟೋತ್ಸವ, ಸಾಧಕರಿಗೆ ಸನ್ಮಾನ

Suddi Udaya

ಕಳೆಂಜ ರಾಜೇಶ್ ಎಂ.ಕೆ ರವರ ಪೋಕ್ಸೋ ಪ್ರಕರಣ: ಅಪ್ರಾಪ್ತ ವಯಸ್ಕಳ ಮೂಲಕ ಸುಳ್ಳು ಪ್ರಕರಣ ದಾಖಲಿಸಿ ಕಾನೂನು ವ್ಯವಸ್ಥೆಯ ದುರ್ಬಳಕೆ ಮಾಡಿದ ಬಗ್ಗೆ ಮಂಗಳೂರು ವರಿಷ್ಠಾಧಿಕಾರಿ ಹಾಗೂ ಜಿಲ್ಲಾಧಿಕಾರಿಗೆ ಕಳೆಂಜ ಗ್ರಾಮಸ್ಥರಿಂದ ಮನವಿ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮಕರ ಸಂಕ್ರಾಂತಿಯ ಪ್ರಯುಕ್ತ ಭಜನಾ ಕಾರ್ಯಕ್ರಮ

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ : ಉಜಿರೆ ಎಸ್ ಡಿ ಎಂ ಅನುದಾನಿತ ಸೆಕೆಂಡರಿ ಶಾಲೆ ಶೇ.99.34 ಫಲಿತಾಂಶ

Suddi Udaya
error: Content is protected !!