25.5 C
ಪುತ್ತೂರು, ಬೆಳ್ತಂಗಡಿ
September 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಕ್ರಮ ಗೋ ಮಾಂಸ ಮಾರಾಟ ಪ್ರಕರಣ: ಆರೋಪಿಯ ಮನೆ ಆವರಣ ಜಪ್ತಿ

ಬೆಳ್ತಂಗಡಿ: ಅಕ್ರಮವಾಗಿ ಗೋಹತ್ಯೆ ನಡೆಸಿ ಮಾಂಸ ಮಾರಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ್ಪಿನಂಗಡಿ ಪೊಲೀಸರು ದಾಳಿ ನಡೆಸಿ 56 ಕೆಜಿ ಗೋಮಾಂಸವನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣದಲ್ಲಿ ಆರೋಪಿಯ ಮನೆ ಆವರಣವನ್ನು ಜಪ್ತಿ ಮಾಡಲಾಗಿದೆ.

ಫೆಬ್ರವರಿ 26, 2026ರ ರಾತ್ರಿ ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಹೊಸವಕ್ಲು ಪ್ರದೇಶದ ಮನೆಯೊಂದರಲ್ಲಿ ಅಕ್ರಮವಾಗಿ ಗೋಹತ್ಯೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯ ಪಿಎಸ್‌ಐ ಸುತೇಶ್ ಕೆ.ಪಿ. ಅವರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ದಾಳಿ ನಡೆಸಿದರು.

ಪೊಲೀಸರು ಸ್ಥಳಕ್ಕೆ ತಲುಪಿದಾಗ ಮನೆಯ ಆವರಣದಿಂದ ಇಬ್ಬರು ವ್ಯಕ್ತಿಗಳು ಓಡಿ ಪರಾರಿಯಾಗಿದ್ದಾರೆ. ಸ್ಥಳ ಪರಿಶೀಲನೆ ವೇಳೆ ಪ್ಯಾಕೆಟ್ ಮಾಡಿಟ್ಟಿದ್ದ ಗೋಮಾಂಸ ಪತ್ತೆಯಾಗಿದೆ. ಅಲ್ಲದೆ ಸಮೀಪದಲ್ಲಿದ್ದ ಆಟೋರಿಕ್ಷಾದಲ್ಲಿಯೂ ಗೋಮಾಂಸದ ಪ್ಯಾಕೆಟ್‌ಗಳು ದೊರೆತಿದ್ದು, ಒಟ್ಟು 56 ಕೆಜಿ ಮಾಂಸವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮುಂದಿನ ಕಾನೂನು ಕ್ರಮಕ್ಕಾಗಿ ಸ್ಥಳದಲ್ಲಿದ್ದ ಗೋಮಾಂಸ, ತೂಕದ ಯಂತ್ರ, ಆಟೋರಿಕ್ಷಾ, ಮೊಬೈಲ್ ಫೋನ್ ಸೇರಿದಂತೆ ಇತರೆ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ.

ಅಗತ್ಯ ಕಾನೂನು ಪ್ರಕ್ರಿಯೆಗಳನ್ನು ಅನುಸರಿಸಿ, ಆರೋಪಿಯಾಗಿರುವ ಹೆಚ್. ಅಬ್ದುಲ್ ರಹಿಮಾನ್ ಅವರ ಜಾನುವಾರು ವಧೆಗೆ ಬಳಸಲಾಗಿದ್ದ ಮನೆಯ ಆವರಣವನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Related posts

ನಾರಾವಿ ಗ್ರಾ.ಪಂ ನಲ್ಲಿ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ಮರೋಡಿ: ಉಚ್ಚೂರು ಮನೆತನದ ಹಿರಿಯರಾದ ಗೋಪು ಪೂಜಾರಿ ನಿಧನ

Suddi Udaya

ಪಿಯುಸಿ ಫಲಿತಾಂಶ: ಪುತ್ತೂರಿನ ವಿವೇಕಾನಂದ ಪ.ಪೂ. ಕಾಲೇಜಿನ ವಿಜ್ಞಾನ ವಿಭಾಗದ ಅಭಿರಾಮ್ ವಿ. ಭಟ್ ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ತಣ್ಣೀರುಪಂತ: ಪಾಲೇದುವಿನ ಡಾ. ಸ್ವಾತಿಕ್‌ರಿಗೆ ಬ್ಯಾಚುಲರ್ ಆಫ್ ಫಿಸಿಯೋಥೆರಪಿ ಪದವಿ

Suddi Udaya

ಅಪಘಾತದಲ್ಲಿ ಸಾವು; ನವೋದಯ ಗುಂಪಿನ ಸದಸ್ಯೆಗೆ 1 ಲಕ್ಷ ರೂ. ವಿಮೆ ಚೆಕ್ ಹಸ್ತಾಂತರ

Suddi Udaya
error: Content is protected !!