23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಗೆ ಪೆನ್ನು ವಿತರಣೆ

ಬಳಂಜ: ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಗೆ ಮುಂಬೈ ನಲ್ಲಿ ಉದ್ಯೋಗದಲ್ಲಿರುವ ದಾನಿಗಳಾಗಿರುವ ಯೋಗೀಶ್ ಪೂಜಾರಿ ಕಾಪಿನಡ್ಕ ಇವರ ಸಹಕಾರದಿಂದ ಮಂಡಳಿಯ ನೇತೃತ್ವದಲ್ಲಿ ಹತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮಂಡಳಿಯ ವಿದ್ಯಾರ್ಥಿಗಳಿಗೆ ಹಾಗೂ ಇತರ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ಬರೆಯಲು ಅನುಕೂಲ ಆಗುವಂತೆ ಪ್ರತೀ ವರ್ಷದಂತೆ ಈ ವರ್ಷವೂ ಪೆನ್ನು ವಿತರಣೆಯನ್ನು ಫೆ.22 ರಂದು ಬಳಂಜ ಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ಮಾಡಲಾಯಿತು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಅಧ್ಯಕ್ಷರಾದ ಸಂತೋಷ್ ಕೋಟ್ಯಾನ್ ರವರು ಈ ಜಗತ್ತಿನಲ್ಲಿ ಹರಿತವಾದ ಖಡ್ಗ ಅಂದರೆ ಅದು ಪೆನ್ನು ಆಗಿದ್ದು, ಒಂದು ಪೆನ್ನಿನಿಂದ ಇಡೀ ಸಮಾಜವನ್ನು ಜಾಗೃತಿಯತ್ತ ಕೊಂಡೊಯ್ಯಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಸಂಸ್ಕಾರದ ಜೊತೆಗೆ ವಿದ್ಯೆಗೂ ಮಹತ್ವ ನೀಡುತ್ತಿರುವ ಮಂಡಳಿಯ ಕಾರ್ಯ ಶ್ಲಾಘನೀಯ ಎಂದು ಅಭಿಪ್ರಾಯಪಟ್ಟರು.

ಬಳಂಜ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಸದಾನಂದ ಸಾಲಿಯಾನ್ ಮಾತನಾಡಿ,ಪರಿಪೂರ್ಣ ವಿದ್ಯೆ ಪಡೆಯುವ ಎಲ್ಲಾ ವಿದ್ಯಾರ್ಥಿಗಳು ಸಹ ಉತ್ತಮ ಉದ್ಯೋಗವನ್ನು ಪಡೆಯಲು ಸಾಧ್ಯವಿದ್ದು,ಉತ್ತಮ ಉದ್ಯೋಗದಿಂದ ಕುಟುಂಬದ ಬಡತನ ನಿವಾರಣೆ ಆಗುತ್ತದೆ ಎಂದು ಶುಭವನ್ನು ಹಾರೈಸಿದರು.

ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯನ್ನು ಕಟ್ಟಿ ಬೆಳೆಸಿ ರಾಜ್ಯ ಮಟ್ಟದಲ್ಲಿ ಹೆಸರನ್ನು ತಂದು ಕೊಡುವಲ್ಲಿ ಶ್ರಮಿಸಿದ ಮಂಡಳಿಯ ಪ್ರಧಾನ ಸಂಚಾಲಕರಾದ ಹರೀಶ್ ವೈ ಚಂದ್ರಮ ಪ್ರಾಸ್ತಾವಿಕವಾಗಿ ಮಾತನಾಡಿ ನಮ್ಮ ಮಂಡಳಿಯ ಕೆಲವು ಬಡ ವಿದ್ಯಾರ್ಥಿ ಸದಸ್ಯರ ವಿದ್ಯಾಭ್ಯಾಸಕ್ಕಾಗಿ ದಾನಿಗಳ ನೆರವಿನಿಂದ ಶಾಲೆಯ ಹಣವನ್ನು ಸಹ ಕಟ್ಟಲಾಗಿದ್ದು ಎಲ್ಲರೂ ಉತ್ತಮ ವಿದ್ಯೆಯನ್ನು ಪಡೆಯಬೇಕೆಂದು ನನ್ನ ಮನದಾಸೆ ಎಂದರು.

ಶ್ರೀ ಕೃಷ್ಣ ಭಜನಾ ಮಂಡಳಿ ಸೂಲಬೆಟ್ಟು ಇದರ ಸಂಚಾಲಕರಾದ ಪ್ರಮೋದ್ ಪೂಜಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮಂಡಳಿಯ ಅಧ್ಯಕ್ಷೆ ಕು.ಪ್ರಸಿದ್ಧಿ ಶೆಟ್ಟಿ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು. ತರಬೇತುದಾರೆ ಕು.ಮಾನ್ಯ ಸ್ವಾಗತಿಸಿದರು. ಮನ್ವಿತ ಧನ್ಯವಾದ ಸಲ್ಲಿಸಿದರು.

Related posts

ಪುನೀತ್ ಕೆರೆಹಳ್ಳಿಯನ್ನು ಬಂಧಿಸಿ ಬೆಳ್ತಂಗಡಿ ಠಾಣೆಗೆ ಕರೆತಂದ ಪೊಲೀಸರು

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕೋತ್ಸವದ ಪ್ರಯುಕ್ತ ಕ್ರೀಡೋತ್ಸವ

Suddi Udaya

ಶರತ್ ಗೋರೆ ಅವರಿಗೆ ಗೌರವ ಡಾಕ್ಟರೇಟ್ ಪದವಿ

Suddi Udaya

ದೇಶ ಕಂಡ ಅತ್ಯುತ್ತಮ ಸಂದೀಯ ಪಟು, ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ ಅವರ ಅಗಲಿಕೆ ರಾಜಕೀಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ: ರಕ್ಷಿತ್ ಶಿವರಾಮ್

Suddi Udaya

ಎ.26: ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಚುನಾವಣೆ: 16 ನಿರ್ದೇಶಕ ಸ್ಥಾನಕ್ಕೆ 41 ಮಂದಿ ಅಭ್ಯರ್ಥಿಗಳ ನಡುವೆ ಸ್ಪರ್ಧೆ

Suddi Udaya

ತೆಂಕಕಾರಂದೂರು : ಗಿಂಡಾಡಿ ಎಂಬಲ್ಲಿ ಚಿರತೆ ಪ್ರತ್ಯಕ್ಷ

Suddi Udaya
error: Content is protected !!