23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಾರ್ಯ: ಅಕ್ರಮ ಗೋ ಮಾಂಸ ಮಾರಾಟ: ಪ್ರಕರಣ ದಾಖಲು

ಬೆಳ್ತಂಗಡಿ: ಬಾರ್ಯ ಗ್ರಾಮದ ಹೊಸವಕ್ಲು ಪ್ರದೇಶದಲ್ಲಿ ಅಕ್ರಮವಾಗಿ ಗೋಹತ್ಯೆ ನಡೆಸಿ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫೆಬ್ರವರಿ 26ರಂದು ರಾತ್ರಿ 7.30 ಗಂಟೆ ಸುಮಾರಿಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯ ಪಿಎಸ್‌ಐ ಸುತೇಶ್ ಕೆ.ಪಿ. ಅವರು ಸಿಬ್ಬಂದಿಯವರೊಂದಿಗೆ ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಹೊಸವಕ್ಲು ಪ್ರದೇಶದ ಮನೆಯಲ್ಲಿ ಅಕ್ರಮವಾಗಿ ಗೋಹತ್ಯೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಲಭಿಸಿತು. ತಕ್ಷಣ ಪಿಸಿ 1966, ಪಿಸಿ 449 ಹಾಗೂ ಚಾಲಕ ಎಪಿಸಿ 102ರೊಂದಿಗೆ ಇಲಾಖಾ ಜೀಪಿನಲ್ಲಿ ರಾತ್ರಿ 8.20 ಗಂಟೆಗೆ ಸ್ಥಳಕ್ಕೆ ತೆರಳಿದರು.

ಪೊಲೀಸರ ಜೀಪ್ ಶಬ್ದ ಕೇಳಿ ಮನೆಯೊಂದರ ಶೆಡ್ ಬಳಿಯಿಂದ ಇಬ್ಬರು ವ್ಯಕ್ತಿಗಳು ಓಡಿ ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ. ಬಳಿಕ ಪಂಚರ ಸಮಕ್ಷಮದಲ್ಲಿ ಶೆಡ್ ಪರಿಶೀಲನೆ ನಡೆಸಿದಾಗ, ನೆಲದ ಮೇಲೆ ಬಿಳಿ ಪ್ಲಾಸ್ಟಿಕ್ ಟರ್ಬಲ್ ಮೇಲೆ ತಲಾ 1ಕೆ.ಜಿ. ತೂಕದ 30 ಪ್ಯಾಕೆಟ್‌ಗಳು, ಮರದ ಬುಟ್ಟಿಯಲ್ಲಿ 20 ಪ್ಯಾಕೆಟ್‌ಗಳು ಹಾಗೂ ಆಟೋ ರಿಕ್ಷಾದಲ್ಲಿ ತಲಾ 2 ಕೆ.ಜಿ. ತೂಕದ ಪ್ಯಾಕೆಟ್‌ಗಳು ಪತ್ತೆಯಾಗಿವೆ. ಒಟ್ಟು ಮಾಂಸದ ಅಂದಾಜು ಮೌಲ್ಯ ರೂ.11,200 ಎಂದು ಅಂದಾಜಿಸಲಾಗಿದೆ. ಇದಲ್ಲದೆ ತೂಕದ ಯಂತ್ರ (ಅಂದಾಜು ರೂ.2,000), ಕೆಂಪು ಹಿಡಿಯ ಚಾಕು (ರೂ.100), ವಿವೋ ಮೊಬೈಲ್ ಫೋನ್ (ರೂ.10,000), ಕೆಎ-70-ಎ-1421 ನೋಂದಣಿ ಸಂಖ್ಯೆಯ ಕಪ್ಪು ಬಣ್ಣದ ಆಟೋ ರಿಕ್ಷಾ (ಅಂದಾಜು ರೂ. 1,50,000) ಹಾಗೂ ಮರದ ಬುಟ್ಟಿ (ರೂ.100) ವಶಪಡಿಸಿಕೊಳ್ಳಲಾಗಿದೆ.

ಈ ಸಂಬಂಧ ಹೆಚ್. ಅಬ್ದುಲ್ ರಹಿಮಾನ್, ಅವರ ಪತ್ನಿ ರಹಮತ್ ಕೆ. ಹಾಗೂ ಇನ್ನೊಬ್ಬ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Related posts

ಉಜಿರೆ : ಪ್ರಗತಿ ಮಹಿಳಾ ಮಂಡಲ ನೇತೃತ್ವದಲ್ಲಿ ಚಿಲಿಪಿಲಿ 2024 ಬೇಸಿಗೆ ಶಿಬಿರದ ಸಮಾರೋಪ

Suddi Udaya

ಸುಲ್ಕೇರಿ ಅಂಗನವಾಡಿಯ ಹಳೆ ವಿದ್ಯಾರ್ಥಿನಿಯ ಪೋಷಕರಿಂದ ಸಾವಯವ ತರಕಾರಿ ಗಿಡಗಳ ಹಸ್ತಾಂತರ

Suddi Udaya

ಬೆಳ್ತಂಗಡಿಯಲ್ಲಿ ಅಭಿವೃದ್ಧಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನೂತನ ಶಾಖೆ ಶುಭಾರಂಭ

Suddi Udaya

ವೇಣೂರು: ಚಂದಯ್ಯ ದೇವಾಡಿಗ ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ದೇಶಭಕ್ತಿಗೀತೆ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಗುರುವಾಯನಕೆರೆ ಮಯೂರ ಆರ್ಕೇಡ್‌ನಲ್ಲಿ ಬಾಲಕೃಷ್ಣ ಶೆಟ್ಟಿ ಮಾಲಕತ್ವದ “ನೇಸರ” ಸ್ಟುಡಿಯೋ & ವೀಡಿಯೋ ಶುಭಾರಂಭ

Suddi Udaya
error: Content is protected !!