22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಾರ್ಯ: ಅಕ್ರಮ ಗೋ ಮಾಂಸ ಮಾರಾಟ: ಪ್ರಕರಣ ದಾಖಲು

ಬೆಳ್ತಂಗಡಿ: ಬಾರ್ಯ ಗ್ರಾಮದ ಹೊಸವಕ್ಲು ಪ್ರದೇಶದಲ್ಲಿ ಅಕ್ರಮವಾಗಿ ಗೋಹತ್ಯೆ ನಡೆಸಿ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫೆಬ್ರವರಿ 26ರಂದು ರಾತ್ರಿ 7.30 ಗಂಟೆ ಸುಮಾರಿಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯ ಪಿಎಸ್‌ಐ ಸುತೇಶ್ ಕೆ.ಪಿ. ಅವರು ಸಿಬ್ಬಂದಿಯವರೊಂದಿಗೆ ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಹೊಸವಕ್ಲು ಪ್ರದೇಶದ ಮನೆಯಲ್ಲಿ ಅಕ್ರಮವಾಗಿ ಗೋಹತ್ಯೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಲಭಿಸಿತು. ತಕ್ಷಣ ಪಿಸಿ 1966, ಪಿಸಿ 449 ಹಾಗೂ ಚಾಲಕ ಎಪಿಸಿ 102ರೊಂದಿಗೆ ಇಲಾಖಾ ಜೀಪಿನಲ್ಲಿ ರಾತ್ರಿ 8.20 ಗಂಟೆಗೆ ಸ್ಥಳಕ್ಕೆ ತೆರಳಿದರು.

ಪೊಲೀಸರ ಜೀಪ್ ಶಬ್ದ ಕೇಳಿ ಮನೆಯೊಂದರ ಶೆಡ್ ಬಳಿಯಿಂದ ಇಬ್ಬರು ವ್ಯಕ್ತಿಗಳು ಓಡಿ ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ. ಬಳಿಕ ಪಂಚರ ಸಮಕ್ಷಮದಲ್ಲಿ ಶೆಡ್ ಪರಿಶೀಲನೆ ನಡೆಸಿದಾಗ, ನೆಲದ ಮೇಲೆ ಬಿಳಿ ಪ್ಲಾಸ್ಟಿಕ್ ಟರ್ಬಲ್ ಮೇಲೆ ತಲಾ 1ಕೆ.ಜಿ. ತೂಕದ 30 ಪ್ಯಾಕೆಟ್‌ಗಳು, ಮರದ ಬುಟ್ಟಿಯಲ್ಲಿ 20 ಪ್ಯಾಕೆಟ್‌ಗಳು ಹಾಗೂ ಆಟೋ ರಿಕ್ಷಾದಲ್ಲಿ ತಲಾ 2 ಕೆ.ಜಿ. ತೂಕದ ಪ್ಯಾಕೆಟ್‌ಗಳು ಪತ್ತೆಯಾಗಿವೆ. ಒಟ್ಟು ಮಾಂಸದ ಅಂದಾಜು ಮೌಲ್ಯ ರೂ.11,200 ಎಂದು ಅಂದಾಜಿಸಲಾಗಿದೆ. ಇದಲ್ಲದೆ ತೂಕದ ಯಂತ್ರ (ಅಂದಾಜು ರೂ.2,000), ಕೆಂಪು ಹಿಡಿಯ ಚಾಕು (ರೂ.100), ವಿವೋ ಮೊಬೈಲ್ ಫೋನ್ (ರೂ.10,000), ಕೆಎ-70-ಎ-1421 ನೋಂದಣಿ ಸಂಖ್ಯೆಯ ಕಪ್ಪು ಬಣ್ಣದ ಆಟೋ ರಿಕ್ಷಾ (ಅಂದಾಜು ರೂ. 1,50,000) ಹಾಗೂ ಮರದ ಬುಟ್ಟಿ (ರೂ.100) ವಶಪಡಿಸಿಕೊಳ್ಳಲಾಗಿದೆ.

ಈ ಸಂಬಂಧ ಹೆಚ್. ಅಬ್ದುಲ್ ರಹಿಮಾನ್, ಅವರ ಪತ್ನಿ ರಹಮತ್ ಕೆ. ಹಾಗೂ ಇನ್ನೊಬ್ಬ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Related posts

ಶಿಬಾಜೆ ಶ್ರೀ ರಾಜರಾಜೇಶ್ವರಿ ಭಜನಾ ಮಂದಿರ ಭಜನೋತ್ಸವ: ಶೌರ್ಯ ವಿಪತ್ತು ತಂಡದಿಂದ ಶ್ರಮದಾನ

Suddi Udaya

ತಾಲೂಕಿನಲ್ಲಿ ಮಾಜಿ ಸೈನಿಕರ ಸಂಘ ಬೆಳ್ತಂಗಡಿ ಇದಕ್ಕೆ ಪರ್ಯಾಯವಾದ ಯಾವುದೇ ಮಾಜಿ ಸೈನಿಕರ ಸಂಘವಿರುವುದಿಲ್ಲ: ಪತ್ರಿಕಾಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಮಹಮ್ಮದ್ ರಫೀ ಸ್ವಷ್ಟನೆ

Suddi Udaya

ಶ್ರೀ ಕೃಷ್ಣ ಕುಂಬಾರರ ಗೆಳೆಯರ ಬಳಗ ಚಾರ್ಮಾಡಿ ವಲಯದಿಂದ ಪುರುಷರ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಪಂದ್ಯಾಟ ಮತ್ತು ನೃತ್ಯ ಸ್ಪರ್ಧೆ

Suddi Udaya

ಕಕ್ಯಪದವು ಎಲ್.ಸಿ.ಆರ್ ಪ.ಪೂ. ಕಾಲೇಜು: ವಾಣಿಜ್ಯ ವಿಭಾಗದಲ್ಲಿ 100% ಫಲಿತಾಂಶ

Suddi Udaya

ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ವತಿಯಿಂದ ನೂತನ ಬಿಷಪ್‌ರಿಗೆ ಸನ್ಮಾನ

Suddi Udaya

ಸುಲ್ಕೇರಿಮೊಗ್ರು : ಸಾನ್ವಿಯ 10ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ; ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya
error: Content is protected !!