23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಕ್ರಮ ಗೋ ಮಾಂಸ ಮಾರಾಟ ಪ್ರಕರಣ: ಆರೋಪಿಯ ಮನೆ ಆವರಣ ಜಪ್ತಿ

ಬೆಳ್ತಂಗಡಿ: ಅಕ್ರಮವಾಗಿ ಗೋಹತ್ಯೆ ನಡೆಸಿ ಮಾಂಸ ಮಾರಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ್ಪಿನಂಗಡಿ ಪೊಲೀಸರು ದಾಳಿ ನಡೆಸಿ 56 ಕೆಜಿ ಗೋಮಾಂಸವನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣದಲ್ಲಿ ಆರೋಪಿಯ ಮನೆ ಆವರಣವನ್ನು ಜಪ್ತಿ ಮಾಡಲಾಗಿದೆ.

ಫೆಬ್ರವರಿ 26, 2026ರ ರಾತ್ರಿ ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಹೊಸವಕ್ಲು ಪ್ರದೇಶದ ಮನೆಯೊಂದರಲ್ಲಿ ಅಕ್ರಮವಾಗಿ ಗೋಹತ್ಯೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯ ಪಿಎಸ್‌ಐ ಸುತೇಶ್ ಕೆ.ಪಿ. ಅವರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ದಾಳಿ ನಡೆಸಿದರು.

ಪೊಲೀಸರು ಸ್ಥಳಕ್ಕೆ ತಲುಪಿದಾಗ ಮನೆಯ ಆವರಣದಿಂದ ಇಬ್ಬರು ವ್ಯಕ್ತಿಗಳು ಓಡಿ ಪರಾರಿಯಾಗಿದ್ದಾರೆ. ಸ್ಥಳ ಪರಿಶೀಲನೆ ವೇಳೆ ಪ್ಯಾಕೆಟ್ ಮಾಡಿಟ್ಟಿದ್ದ ಗೋಮಾಂಸ ಪತ್ತೆಯಾಗಿದೆ. ಅಲ್ಲದೆ ಸಮೀಪದಲ್ಲಿದ್ದ ಆಟೋರಿಕ್ಷಾದಲ್ಲಿಯೂ ಗೋಮಾಂಸದ ಪ್ಯಾಕೆಟ್‌ಗಳು ದೊರೆತಿದ್ದು, ಒಟ್ಟು 56 ಕೆಜಿ ಮಾಂಸವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮುಂದಿನ ಕಾನೂನು ಕ್ರಮಕ್ಕಾಗಿ ಸ್ಥಳದಲ್ಲಿದ್ದ ಗೋಮಾಂಸ, ತೂಕದ ಯಂತ್ರ, ಆಟೋರಿಕ್ಷಾ, ಮೊಬೈಲ್ ಫೋನ್ ಸೇರಿದಂತೆ ಇತರೆ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ.

ಅಗತ್ಯ ಕಾನೂನು ಪ್ರಕ್ರಿಯೆಗಳನ್ನು ಅನುಸರಿಸಿ, ಆರೋಪಿಯಾಗಿರುವ ಹೆಚ್. ಅಬ್ದುಲ್ ರಹಿಮಾನ್ ಅವರ ಜಾನುವಾರು ವಧೆಗೆ ಬಳಸಲಾಗಿದ್ದ ಮನೆಯ ಆವರಣವನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Related posts

ಮಾಚಾರು: ಬದನಾಜೆ ಶಾಲೆ ಹಿರಿಯ ವಿದ್ಯಾರ್ಥಿ ಸಂಘದ ಪುನಾರಚನೆ

Suddi Udaya

ಮುಹಿಯುದ್ದೀನ್ ಜುಮಾ ಮಸ್ಜಿದ್ ಹಳೆಪೇಟೆ ಉಜಿರೆ ಇದರ ನೂತನ ಅಧ್ಯಕ್ಷರಾಗಿ ಸಾಮಾಜಿಕ,ಶೈಕ್ಷಣಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಯುವ ಉದ್ಯಮಿ ಯು.ಹೆಚ್ ಅಬೂಬಕ್ಕರ್ ಆಯ್ಕೆ

Suddi Udaya

ಓಡಿಲ್ನಾಳ: ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿಯ ವಿಶೇಷ ಪೂಜೆ

Suddi Udaya

ಅ.18 ರಂದು ನಡೆಯಲಿರುವ ರಾಜ್ಯಸಭಾ ಸದಸ್ಯ ಡಾ. ನಾಸಿರ್ ಹುಸೈನ್, ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ಸಲೀಮ್ ಅಹಮ್ಮದ್ ರವರಿಗೆ ಅಭಿನಂದನಾ ಸಮಾರಂಭ ಹಾಗೂ ಅಲ್ಪಸಂಖ್ಯಾತರ ಸಮಾವೇಶ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ಹಾಗೂ ಸಚಿವರುಗಳಿಗೆ ಆಹ್ವಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ರೋಟರಿ ಕ್ಲಬ್ ಮಡಂತ್ಯಾರು ವತಿಯಿಂದ ಪರಿಸರ ಜಾಗೃತಿ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರಾಗಿರುವ ಡಾ| ರಿತೇಶ್ ಕೊಯ್ಯೂರು ವೈದ್ಯಕೀಯ ಸ್ನಾತಕೋತ್ತರ ಪದವಿಗೆ ಪ್ರವೇಶ

Suddi Udaya
error: Content is protected !!