25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಕ್ರಮ ಗೋ ಮಾಂಸ ಮಾರಾಟ ಪ್ರಕರಣ: ಆರೋಪಿಯ ಮನೆ ಆವರಣ ಜಪ್ತಿ

ಬೆಳ್ತಂಗಡಿ: ಅಕ್ರಮವಾಗಿ ಗೋಹತ್ಯೆ ನಡೆಸಿ ಮಾಂಸ ಮಾರಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ್ಪಿನಂಗಡಿ ಪೊಲೀಸರು ದಾಳಿ ನಡೆಸಿ 56 ಕೆಜಿ ಗೋಮಾಂಸವನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣದಲ್ಲಿ ಆರೋಪಿಯ ಮನೆ ಆವರಣವನ್ನು ಜಪ್ತಿ ಮಾಡಲಾಗಿದೆ.

ಫೆಬ್ರವರಿ 26, 2026ರ ರಾತ್ರಿ ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಹೊಸವಕ್ಲು ಪ್ರದೇಶದ ಮನೆಯೊಂದರಲ್ಲಿ ಅಕ್ರಮವಾಗಿ ಗೋಹತ್ಯೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯ ಪಿಎಸ್‌ಐ ಸುತೇಶ್ ಕೆ.ಪಿ. ಅವರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ದಾಳಿ ನಡೆಸಿದರು.

ಪೊಲೀಸರು ಸ್ಥಳಕ್ಕೆ ತಲುಪಿದಾಗ ಮನೆಯ ಆವರಣದಿಂದ ಇಬ್ಬರು ವ್ಯಕ್ತಿಗಳು ಓಡಿ ಪರಾರಿಯಾಗಿದ್ದಾರೆ. ಸ್ಥಳ ಪರಿಶೀಲನೆ ವೇಳೆ ಪ್ಯಾಕೆಟ್ ಮಾಡಿಟ್ಟಿದ್ದ ಗೋಮಾಂಸ ಪತ್ತೆಯಾಗಿದೆ. ಅಲ್ಲದೆ ಸಮೀಪದಲ್ಲಿದ್ದ ಆಟೋರಿಕ್ಷಾದಲ್ಲಿಯೂ ಗೋಮಾಂಸದ ಪ್ಯಾಕೆಟ್‌ಗಳು ದೊರೆತಿದ್ದು, ಒಟ್ಟು 56 ಕೆಜಿ ಮಾಂಸವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮುಂದಿನ ಕಾನೂನು ಕ್ರಮಕ್ಕಾಗಿ ಸ್ಥಳದಲ್ಲಿದ್ದ ಗೋಮಾಂಸ, ತೂಕದ ಯಂತ್ರ, ಆಟೋರಿಕ್ಷಾ, ಮೊಬೈಲ್ ಫೋನ್ ಸೇರಿದಂತೆ ಇತರೆ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ.

ಅಗತ್ಯ ಕಾನೂನು ಪ್ರಕ್ರಿಯೆಗಳನ್ನು ಅನುಸರಿಸಿ, ಆರೋಪಿಯಾಗಿರುವ ಹೆಚ್. ಅಬ್ದುಲ್ ರಹಿಮಾನ್ ಅವರ ಜಾನುವಾರು ವಧೆಗೆ ಬಳಸಲಾಗಿದ್ದ ಮನೆಯ ಆವರಣವನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Related posts

ಪೋಲಿಸ್ ಇಲಾಖೆಯಲ್ಲಿ ಎ ಎಸ್ ಐ ಯಾಗಿ ಸೇವಾ ನಿವೃತ್ತಿ ಹೊಂದಿದ ಸ್ಯಾಮುವೆಲ್ ಎಂ.ಐ. ನೆಲ್ಯಾಡಿರವರಿಗೆ ಸನ್ಮಾನ

Suddi Udaya

ತಾಲೂಕಿನಲ್ಲಿ ಎಸ್ಸೆಸ್ಸೆಲ್ಸಿ ಪಬ್ಲೀಕ್ ಪರೀಕ್ಷೆ ಯಶಸ್ವಿ ಆರಂಭ: ಪರೀಕ್ಷೆ ಬರೆಯುತ್ತಿದ್ದಾರೆ 70 ಪ್ರೌಢಗಳ 4215 ವಿದ್ಯಾರ್ಥಿಗಳು

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ಪ್ರಕರಣ: ಸ್ಥಳ ಮಹಜರು ನಡೆಸಿ ಧರ್ಮಸ್ಥಳ ಠಾಣೆಗೆ ಬಂದ ಎಸ್.ಐ.ಟಿ ತಂಡ

Suddi Udaya

ಪಾರೆಂಕಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ಡಾ. ಪ್ರಕಾಶ್ ಎಸ್ ನೇಮಕ

Suddi Udaya

ಮೂಡುಕೋಡಿ ಮತದಾನ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಹೊಸ ವರ್ಷದ ನೆಪದಲ್ಲಿ ವಂಚನೆ ಸಾಧ್ಯತೆ ‘ಎಪಿಕೆ ಫೈಲ್’ ತೆರೆಯದಂತೆ ಸೂಚನೆ

Suddi Udaya
error: Content is protected !!