July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರುಡ್ ಸೆಟ್ ಸಂಸ್ಥೆಯಲ್ಲಿ ರೆಫ್ರಿಜರೇಷನ್ ಮತ್ತು ಏರ್‌ ಕಂಡೀಷನಿಂಗ್ ತರಬೇತಿ ಸಮಾರೋಪ

ಉಜಿರೆ: ರುಡ್ ಸೆಟ್ ಸಂಸ್ಥೆಯ ಆವರಣದಲ್ಲಿ ರೆಫ್ರಿಜರೇಷನ್ ಮತ್ತು ಏರ್‌ ಕಂಡೀಷನಿಂಗ್ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭವು ಇತ್ತೀಚೆಗೆ ನಡೆಯಿತು.

ಮುಖ್ಯ ಅತಿಥಿಗಳಾಗಿ ಬೆಂಗಳೂರು ಭಾರತೀಯ ರಿಸರ್ವ್ ಬ್ಯಾಂಕ್ ನಿವೃತ್ತ ಸಹಾಯಕ ಪ್ರಧಾನ ವ್ಯವಸ್ಥಾಪಕ ವೈ.ವಿ. ಗೂಂಡೂರಾವ್ ಅವರು ಉದ್ಯಮದಲ್ಲಿ ಯಶಸ್ಸು ಗಳಿಸಲು ನೈತಿಕತೆ, ಶಿಸ್ತು ಹಾಗೂ ಪ್ರಾಮಾಣಿಕತೆ ಮುಖ್ಯವಾದ ಅಂಶಗಳು ಎಂದು ಹೇಳಿದರು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಾರುಕಟ್ಟೆಯ ಬೇಡಿಕೆಗೆ ಅನುಗುಣವಾಗಿ ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸಿಕೊಳ್ಳಬೇಕು. ತಾಂತ್ರಿಕ ಕ್ಷೇತ್ರದಲ್ಲಿ ಬದಲಾವಣೆ ವೇಗವಾಗಿ ನಡೆಯುತ್ತಿರುವುದರಿಂದ ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವುದು ಅಗತ್ಯ ಎಂದು ಅವರು ಸಲಹೆ ನೀಡಿದರು. ಬಳಿಕ ತರಬೇತಿಗಾರರಿಗೆ ಪ್ರಮಾಣಪತ್ರಗಳನ್ನು ವಿತರಿಸಿ ಭವಿಷ್ಯದಲ್ಲಿ ಸ್ವ ಉದ್ಯೋಗದ ಮೂಲಕ ಯಶಸ್ಸು ಸಾಧಿಸಲಿ ಎಂದು ಶುಭ ಹಾರೈಸಿದರು.

ರುಡ್ ಸೆಟ್ ಸಂಸ್ಥೆಯ ನಿರ್ದೇಶಕ ಅಜಯ್ ಅತಿಥಿಗಳನ್ನು ಸ್ವಾಗತಿಸಿ, ತರಬೇತಿ ಕಾರ್ಯಕ್ರಮದ ಉದ್ದೇಶ, ಅವಧಿ ಹಾಗೂ ನೀಡಲಾದ ಪ್ರಾಯೋಗಿಕ ತರಬೇತಿಯ ವಿವರವನ್ನು ನೀಡಿದರು. ಈ ತರಬೇತಿ ಯುವಕರಿಗೆ ತಾಂತ್ರಿಕ ಜ್ಞಾನ ಮಾತ್ರವಲ್ಲದೆ ಉದ್ಯಮಶೀಲತೆ ಮನೋಭಾವವನ್ನೂ ಬೆಳೆಸುವಲ್ಲಿ ಸಹಕಾರಿ ಎಂದು ತಿಳಿಸಿದರು.
ಹಿರಿಯ ಉಪನ್ಯಾಸಕ ಅಬ್ರಹಾಂ ಜೇಮ್ಸ್ ಪಿ.ವಿ. ಕಾರ್ಯಕ್ರಮ ನಿರ್ವಹಿಸಿ ಸಮಾರಂಭವನ್ನು ಸುಗಮವಾಗಿ ನಡೆಸಿಕೊಟ್ಟರು. ಹಿರಿಯ ಉಪನ್ಯಾಸಕ ಕೆ. ಕರುಣಾಕರ ಜೈನ್ ಧನ್ಯವಾದವಿತ್ತರು. ಅತಿಥಿ ಉಪನ್ಯಾಸಕ ರಾಕೇಶ್ ಉಪಸ್ಥಿತರಿದ್ದರು.
ಪ್ರಜ್ವಲ್ , ಸೂರಜ್ ಕಿಣಿ ತಮ್ಮ ತರಬೇತಿಯ ಅನುಭವ ಹಂಚಿಕೊಂಡು, ತರಬೇತಿಯ ಮೂಲಕ ಪಡೆದ ಪ್ರಾಯೋಗಿಕ ಜ್ಞಾನ ಮತ್ತು ಆತ್ಮವಿಶ್ವಾಸದ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದರು. ಈ ತರಬೇತಿ ಅವರ ಭವಿಷ್ಯದ ಬದುಕಿಗೆ ದಿಕ್ಕು ತೋರಿಸುವ ಮಹತ್ವದ ಹಂತವಾಗಿದೆ ಎಂದು ಹೇಳಿದರು.

Related posts

ನಾವೂರು: ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

Suddi Udaya

ವಿಧಾನ ಪರಿಷತ್ ಚುನಾವಣೆ : ಮದುಮಗನಿಂದ ಕೊಕ್ಕಡ ಪಂಚಾಯತ್ ನಲ್ಲಿ ಮತ ಚಲಾವಣೆ

Suddi Udaya

ಸಹಾಯಕ ಸರ್ಕಾರಿ ಅಭಿಯೋಜಕರಾಗಿ ಉಜಿರೆಯ ರಂಜಿತ್ ನಾಯ್ಕ್ ಎನ್. ಆರ್ ನೇಮಕ

Suddi Udaya

ನಿಡ್ಲೆ ಸರಕಾರಿ ಪ್ರೌಢ ಶಾಲೆಯ ಕಂಪ್ಯೂಟರ್ ಶಿಕ್ಷಕಿ ಪ್ರಭಾ ಟಿ. ತಲೇಕಿ ನಿಧನ: ಪ್ರಭಾ ಅಪೇಕ್ಷೆಯಂತೆ ಮಣಿಪಾಲ ಮೆಡಿಕಲ್ ಕಾಲೇಜಿಗೆ ಮೃತದೇಹ ದಾನ

Suddi Udaya

ರೂ. 35 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಪಟ್ಟಣ ಪಂಚಾಯತ್ ಕಛೇರಿ ವಿಸ್ತ್ರತ ಕಟ್ಟಡದ ಸಭಾಂಗಣ ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ

Suddi Udaya

ಜ.17,18: ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಪ್ರವರ್ಧಿತ ಆರ್ಥಿಕತೆಯಲ್ಲಿ ಗ್ರಾಮೀಣ ಉದ್ಯಮಶೀಲತೆಯ ಪಾತ್ರ’ ಕುರಿತು ಅಂತರರಾಷ್ಟ್ರೀಯ ವಿಚಾರ ಸಂಕಿರಣ ‘

Suddi Udaya
error: Content is protected !!