September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಕಕ್ಕರೆಬೆಟ್ಟು ಮನೆ ಕೆಡವಿ, ಸೊತ್ತುಗಳನ್ನು ಹೊರಗೆ ಎಸೆದ ಪ್ರಕರಣ: ಆರೋಪಿ ವಿರುದ್ಧ ಕೇಸು ದಾಖಲು

ಉಜಿರೆ: ಉಜಿರೆ ಗ್ರಾಮದ ಕಕ್ಕರೆಬೆಟ್ಟು ನಿವಾಸಿ ರಾಜೀವಿ ಎಂಬವರು ಉಜಿರೆ ಗ್ರಾಮದ ಕಕ್ಕರೆಬೆಟ್ಟು ಎಂಬಲ್ಲಿ ಅವರ ಸ್ವಾಧೀನದಲ್ಲಿರುವ ಸರ್ವೆ ನಂ: 406/1 ರಲ್ಲಿ ಮನೆ ನಿರ್ಮಿಸುತ್ತಿದ್ದು ಫೆ.27 ರಂದು 11 ಗಂಟೆಗೆ ರಾಜೀವಿ ಹಾಗೂ ಅವರ ಗಂಡ ಕೆಲಸಕ್ಕೆ ಹೋಗಿದ್ದ ಸಮಯದಲ್ಲಿ ಆರೋಪಿ ರಫೀಕ್ ಎಂಬಾತ ಮನೆಗೆ ಅಕ್ರಮ ಪ್ರವೇಶ ಮಾಡಿ ಮನೆ ಹಾಗೂ ಮನೆಯಲ್ಲಿದ್ದ ಟಿ, ಪಿ, ಪ್ರಿಡ್ಜ್, ಗ್ಯಾಸ್ ಸಿಲಿಂಡರ್, ಪಿಠೋಪಕರಣಗಳನ್ನು, ಮತ್ತು ಬಟ್ಟೆ ಬರೆ, ದಿನಸಿ ಸಾಮಾನು ಇತ್ಯಾದಿ ವಸ್ತುಗಳನ್ನು ಬೀಸಾಡಿದ್ದು ಈ ಕೃತ್ಯದ ವಿಡಿಯೋ ಮಾಡುತ್ತಿದ್ದ ಪಿರ್ಯಾದಿದಾರರ ಮಗಳಿಗೆ ” ನೀನು ಏನಾದರೂ ದೂರನ್ನು ನೀಡಿದರೆ ನಿನ್ನನ್ನು ಹಾಗೂ ನಿನ್ನ ಮನೆಯವರನ್ನು ಜೀವಸಹಿತ ಬೀಡುವುದಿಲ್ಲ,” ಎಂದು ಜೀವ ಬೆದರಿಕೆ ಹಾಕಿರುವುದಾಗಿ ಆರೋಪಿಸಲಾಗಿದೆ.ಈ ಕೃತ್ಯದಿಂದ ರಾಜೀವಿ ಅವರಿಗೆ ಸುಮಾರು ರೂ.10,00,000 ದಷ್ಟು ನಷ್ಟವುಂಟಾಗಿದೆ ಎಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು.

ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಆರೋಪಿಯ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ 329(4), 324(5), 351(2), 352 ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Related posts

ಬಳಂಜ ಶಾಲಾ ಎಲ್ ಕೆ ಜಿ ಮಕ್ಕಳಿಗೆ ಸಮವಸ್ತ್ರ ವಿತರಣೆ

Suddi Udaya

ವಾಲಿಬಾಲ್ ಪಂದ್ಯಾಟ: ಬಂದಾರು ಸ.ಉ.ಹಿ.ಪ್ರಾ. ಶಾಲಾ ಬಾಲಕಿಯರ ತಂಡ ದ್ವಿತೀಯ

Suddi Udaya

ರೆಖ್ಯ : ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟು ಕರಕಲಾದ ಮನೆ

Suddi Udaya

ಕೃಷಿ ಪರಿಕರ ಮಾರಾಟಗಾರರಿಗೆ ಕೃಷಿ ವಿಸ್ತರಣಾ ಸೇವೆಯಲ್ಲಿ ಡಿಪ್ಲೋಮಾ: ನಾಲ್ಕು ಮತ್ತು ಐದನೇ ತಂಡದ ಪ್ರಮಾಣ ಪತ್ರ ವಿತರಣಾ ಸಮಾರಂಭ

Suddi Udaya

ಜೆಸಿಐ ವಲಯ-15ರ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ಸಮ್ಮೇಳನದಲ್ಲಿ ಸಂತೋಷ್ ಪಿ ಕೋಟ್ಯಾನ್ ಬಳಂಜ ರವರಿಗೆ ಪ್ರತಿಷ್ಠಿತ “ಸಾಧನಾಶ್ರೀ ಪುರಸ್ಕಾರ”

Suddi Udaya

ಅಭಿವೃದ್ಧಿ ಅಧಿಕಾರಿಗಳಾದ ಸಫಾನ, ಸುಮ ವರ್ಗಾವಣೆ: ಧರ್ಮಸ್ಥಳ ಪಿಡಿಓ ಆಗಿ ನಾಗೇಶ್, ಸುಲ್ಕೇರಿಗೆ ಗೌರಿಶಂಕರ್, ಪಟ್ರಮೆಗೆ ಹೊನ್ನಮ್ಮ, ಮೇಲಂತಬೆಟ್ಟುಗೆ ಜಗದೀಶ್ ನೇಮಕ

Suddi Udaya
error: Content is protected !!