22.6 C
ಪುತ್ತೂರು, ಬೆಳ್ತಂಗಡಿ
July 23, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಲ್ಮಂಜ ಗ್ರಾಮ ಪಂಚಾಯತ್‌ನಲ್ಲಿ ರೈತ ತರಬೇತಿ ಕಾರ್ಯಾಗಾರ

ಕಲ್ಮಂಜ: ಜಿಲ್ಲಾ ಕೃಷಿ ತರಬೇತಿ ಕೇಂದ್ರ ಬೆಳ್ತಂಗಡಿ ಹಾಗೂ ಸ್ಕಂದ ಸಂಜೀವಿನಿ ಒಕ್ಕೂಟ ಕಲ್ಮಂಜ ಇದರ ಸಹಯೋಗದೊಂದಿಗೆ ಫೆ.24ರಂದು ಜಿಲ್ಲಾ ಕೃಷಿ ಸಹಾಯಕ ನಿರ್ದೇಶಕ ರಮೇಶ್ ಅವರ ಉಪಸ್ಥಿತಿಯಲ್ಲಿ ಒಂದು ದಿನದ ರೈತ ತರಬೇತಿಯು ಕಲ್ಮಂಜ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಒಕ್ಕೂಟದ ಅಧ್ಯಕ್ಷೆ ಉಷಾ ಡಿಸೋಜ ಹಾಗೂ ಅತಿಥಿಗಳು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.

ಜಿಲ್ಲಾಕೃಷಿ ತರಬೇತಿ ಕೇಂದ್ರದ ಕೃಷಿ ಅಧಿಕಾರಿ ಗಣೇಶ್ ಮಾತನಾಡಿ ರೈತರು ತರಬೇತಿಯ ಪ್ರಯೋಜನವನ್ನು ಪಡೆದುಕೊಳ್ಳಬೇಕೆಂದು ತಿಳಿಸಿದರು. ಸಂಪನ್ಮೂಲ ವ್ಯಕ್ತಿ ಸುಲೈಮಾನ್ ಬೆಲಾಲ್ ಅಣಬೆ ಕೃಷಿ ತರಬೇತಿಯನ್ನು ಪ್ರಾತ್ಯಕ್ಷಿಕೆಯ ಮೂಲಕ ನಡೆಸಿ ಕೊಟ್ಟರು.

ಪ್ರಗತಿಪರ ರೈತ ಬಿಜು ಸರ್ ಮೊಟ್ಟೆ ಕೋಳಿ ಸಾಕಾಣಿಕೆಯ ಬಗ್ಗೆ ಮಾಹಿತಿ ಹಾಗೂ ತಮ್ಮ ಅನುಭವಗಳನ್ನು ವಿವರವಾಗಿ ತಿಳಿಸಿದರು. ಪಶುವೈದ್ಯಾಧಿಕಾರಿ ಯತೀಶ್ ಕುಮಾರ್ ಮೊಟ್ಟೆ ಕೋಳಿ ಸಾಕಾಣಿಕೆಯ ಬಗ್ಗೆ ಪ್ರೋಜೆಕ್ಟರ್ ಮೂಲಕ ಮಾಹಿತಿಯನ್ನು ನೀಡಿದರು.

ಸಭೆಯಲ್ಲಿ 60ಕ್ಕೂ ಹೆಚ್ಚು ಜನರು ಭಾಗವಹಿಸಿ ಪ್ರಯೋಜನ ಪಡೆದುಕೊಂಡರು.ಕಾರ್ಯಕ್ರಮದಲ್ಲಿ ಒಕ್ಕೂಟದ ಪದಾಧಿಕಾರಿಗಳು ಸಿಬ್ಬಂದಿಗಳು ಭಾಗವಹಿಸಿದ್ದರು.

ಕೃಷಿ ಸಖಿ ಪುಷ್ಪಲತಾ ಸ್ವಾಗತಿಸಿದರು. ಜಯಂತಿ ಪ್ರಾರ್ಥಿಸಿದರು.

Related posts

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಉಜಿರೆಯ ಬಿರ್ಕು ರವರಿಗೆ ಮೊಬೈಲ್ ಹಸ್ತಾಂತರ

Suddi Udaya

2 ಲಕ್ಷ ಮೌಲ್ಯ ದ ಚಿನ್ನದ ಬ್ರೇಸ್ ಲೆಟ್ ಮರಳಿಸಿ‌ ಪ್ರಾಮಾಣಿಕತೆ ಮೆರೆದ ಬದ್ಯಾರಿನ ಝೈನುದ್ದೀನ್

Suddi Udaya

ಪಿಯುಸಿ ಫಲಿತಾಂಶ; ನಯನಾಡು ಸುಶ್ಮಿತಾ ಆಶಾಲತಾ ರಾಜ್ಯಕ್ಕೆ ನಾಲ್ಕನೇ ರ‍್ಯಾಂಕ್

Suddi Udaya

ಕೊಕ್ಕಡ ಗ್ರಾ.ಪಂ. ನ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ರಾಜ್ಯ ಮಟ್ಟದಲ್ಲಿ ಕಪ್ಪು ಪಟ್ಟಿ ಧರಿಸಿ ಪಂಚಾಯತ್ ನೌಕರರ ಮುಂದುವರಿದ ಪ್ರತಿಭಟನೆ : ಗ್ರಾಮ ಪಂಚಾಯಿತಿ ನೌಕರರ ಸಮಸ್ಯೆಗಳ ಬಗ್ಗೆ ತಾರ್ಕಿಕ ಅಂತ್ಯ ನೀಡುವುದಾಗಿ ವಿಧಾನಸಭಾಧ್ಯಕ್ಷರ ಭರವಸೆ

Suddi Udaya

ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿಯ ಕುಟುಂಬಸ್ಥರಿಗೆ ಮೆಸ್ಕಾಂ ಇಲಾಖೆಯ ಪರಿಹಾರದ ಚೆಕ್ ನ್ನು ಶಾಸಕ ಹರೀಶ್ ಪೂಂಜರಿಂದ ಹಸ್ತಾಂತರ

Suddi Udaya
error: Content is protected !!