July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಕಕ್ಕರೆಬೆಟ್ಟು ಮನೆ ಕೆಡವಿ, ಸೊತ್ತುಗಳನ್ನು ಹೊರಗೆ ಎಸೆದ ಪ್ರಕರಣ: ಆರೋಪಿ ವಿರುದ್ಧ ಕೇಸು ದಾಖಲು

ಉಜಿರೆ: ಉಜಿರೆ ಗ್ರಾಮದ ಕಕ್ಕರೆಬೆಟ್ಟು ನಿವಾಸಿ ರಾಜೀವಿ ಎಂಬವರು ಉಜಿರೆ ಗ್ರಾಮದ ಕಕ್ಕರೆಬೆಟ್ಟು ಎಂಬಲ್ಲಿ ಅವರ ಸ್ವಾಧೀನದಲ್ಲಿರುವ ಸರ್ವೆ ನಂ: 406/1 ರಲ್ಲಿ ಮನೆ ನಿರ್ಮಿಸುತ್ತಿದ್ದು ಫೆ.27 ರಂದು 11 ಗಂಟೆಗೆ ರಾಜೀವಿ ಹಾಗೂ ಅವರ ಗಂಡ ಕೆಲಸಕ್ಕೆ ಹೋಗಿದ್ದ ಸಮಯದಲ್ಲಿ ಆರೋಪಿ ರಫೀಕ್ ಎಂಬಾತ ಮನೆಗೆ ಅಕ್ರಮ ಪ್ರವೇಶ ಮಾಡಿ ಮನೆ ಹಾಗೂ ಮನೆಯಲ್ಲಿದ್ದ ಟಿ, ಪಿ, ಪ್ರಿಡ್ಜ್, ಗ್ಯಾಸ್ ಸಿಲಿಂಡರ್, ಪಿಠೋಪಕರಣಗಳನ್ನು, ಮತ್ತು ಬಟ್ಟೆ ಬರೆ, ದಿನಸಿ ಸಾಮಾನು ಇತ್ಯಾದಿ ವಸ್ತುಗಳನ್ನು ಬೀಸಾಡಿದ್ದು ಈ ಕೃತ್ಯದ ವಿಡಿಯೋ ಮಾಡುತ್ತಿದ್ದ ಪಿರ್ಯಾದಿದಾರರ ಮಗಳಿಗೆ ” ನೀನು ಏನಾದರೂ ದೂರನ್ನು ನೀಡಿದರೆ ನಿನ್ನನ್ನು ಹಾಗೂ ನಿನ್ನ ಮನೆಯವರನ್ನು ಜೀವಸಹಿತ ಬೀಡುವುದಿಲ್ಲ,” ಎಂದು ಜೀವ ಬೆದರಿಕೆ ಹಾಕಿರುವುದಾಗಿ ಆರೋಪಿಸಲಾಗಿದೆ.ಈ ಕೃತ್ಯದಿಂದ ರಾಜೀವಿ ಅವರಿಗೆ ಸುಮಾರು ರೂ.10,00,000 ದಷ್ಟು ನಷ್ಟವುಂಟಾಗಿದೆ ಎಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು.

ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಆರೋಪಿಯ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ 329(4), 324(5), 351(2), 352 ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Related posts

ಕನ್ಯಾಡಿ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಬೆಳಾಲು ಎಸ್.ಡಿ.ಎಮ್ ಪ್ರೌಢಶಾಲೆ ದೈಹಿಕ ಶಿಕ್ಷಣ ಶಿಕ್ಷಕ ಕೃಷ್ಣಾನಂದ ರಾವ್ ರವರಿಗೆ ರಾಜ್ಯಮಟ್ಟದ ಉತ್ತಮ ಶಿಕ್ಷಕ ರತ್ನ ಪ್ರಶಸ್ತಿ

Suddi Udaya

ಸವಣಾಲು ಅ.ಹಿ.ಪ್ರಾ. ಶಾಲೆಗೆ ಮೇಲಂತಬೆಟ್ಟು ಗ್ರಾ.ಪಂ. ವತಿಯಿಂದ ಪುಸ್ತಕ ಹಾಗೂ ಪೀಠೋಪಕರಣಗಳ ಉದ್ಘಾಟನೆ

Suddi Udaya

ಕುದುರೆಮುಖ: ಟ್ರೆಕ್ಕಿಂಗ್ ಗೈಡ್ ತರಬೇತಿ

Suddi Udaya

ಅಭಿವೃದ್ಧಿ ಅಧಿಕಾರಿಗಳಾದ ಸಫಾನ, ಸುಮ ವರ್ಗಾವಣೆ: ಧರ್ಮಸ್ಥಳ ಪಿಡಿಓ ಆಗಿ ನಾಗೇಶ್, ಸುಲ್ಕೇರಿಗೆ ಗೌರಿಶಂಕರ್, ಪಟ್ರಮೆಗೆ ಹೊನ್ನಮ್ಮ, ಮೇಲಂತಬೆಟ್ಟುಗೆ ಜಗದೀಶ್ ನೇಮಕ

Suddi Udaya

ಆರಂಬೋಡಿ: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಪರ ಬಿರ್ವೆರ್ ಕುಡ್ಲದ ಸ್ಥಾಪಕ ,ಯುವ ನಾಯಕ ಉದಯ್ ಪೂಜಾರಿ ಬಳ್ಳಾಲ್ ಬಾಗ್ ಮತಪ್ರಚಾರ

Suddi Udaya
error: Content is protected !!