22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಆಚರಿಸಲಾಯಿತು.

ಮುಖ್ಯ ಅತಿಥಿ ಇಸ್ರೋದಲ್ಲಿ ಹಿರಿಯ ವಿಜ್ಞಾನಿಯಾಗಿ ಕಾರ್ಯನಿರ್ವಹಿಸಿರುವ ಪಿ.ವಾಸುದೇವರಾವ್ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ, ಮಾತನಾಡಿ ವಿದ್ಯಾರ್ಥಿಗಳಿಗೆ ವಿಜ್ಞಾನ ದಿನಾಚರಣೆಯ ಕುರಿತು ಮಾಹಿತಿ ನೀಡಿದರು. ವಿಜ್ಞಾನದ ಅಗತ್ಯ, ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವದ ಅಗತ್ಯ, ರಾಕೆಟ್‌ಗಳ ಕಾರ್ಯವೈಖರಿ, ಬಳಿಕ ಇಸ್ರೋ ಎಂದರೇನು ಅದರ ಕಾರ್ಯವೈಖರಿಗಳ ಬಗ್ಗೆ ಮಾಹಿತಿಯನ್ನು ವಿವಿಧ ಉದಾಹರಣೆಗಳ ಮೂಲಕ ವಿವರಿಸಿದರು. ಅವರು ವಿಜ್ಞಾನಕ್ಕೆ ನೀಡಿದ ಸೇವೆಯನ್ನು ಮನಗಂಡು ಸನ್ಮಾನಿಸಲಾಯಿತು.

ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಪ್ರಯುಕ್ತ ವಿದ್ಯಾರ್ಥಿಗಳಿಗೆ ಹಲವಾರು ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ವಿಜೇತರಾದವರಿಗೆ ಬಹುಮಾನವನ್ನು ಸಹ ನೀಡಲಾಯಿತು. ಗ್ರಂಥಾಲಯದಲ್ಲಿ ವಿಜ್ಞಾನ ಪುಸ್ತಕಗಳ ಪ್ರದರ್ಶನ ಮಾಡಲಾಯಿತು..

ವಿದ್ಯಾರ್ಥಿನಿ ಆರಾಧ್ಯ ಪಿ ಜೋಷಿ ಕಾರ್ಯಕ್ರಮ ನಿರೂಪಿಸಿ, ಶಾಲಾ ಮುಖ್ಯೋಪಾಧ್ಯಾಯಿನಿ ಪರಿಮಳ ಎಂ.ವಿ ಸ್ವಾಗತಿಸಿ , ವಿದ್ಯಾರ್ಥಿನಿ ವೈಭವಿ ಅತಿಥಿಗಳ ಪರಿಚಯ ಮಾಡಿದರು. ಶಿಕ್ಷಕಿ ಅನುಷಾ ಸ್ಪರ್ಧೆಯಲ್ಲಿ ವಿಜೇತರಾದವರ ಪಟ್ಟಿಯನ್ನು ಓದಿದರು. ವಿದ್ಯಾರ್ಥಿನಿ ಸಮೀಕ್ಷಾ ವಂದಿಸಿದರು. ಶಾಲಾ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಸಹಕರಿಸಿದರು.

Related posts

ಬೆಳ್ತಂಗಡಿ ತಾಲೂಕಿನ ಪರಿಶಿಷ್ಟ ಜಾತಿ ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆ: ಹರೀಶ್ ಪೂಂಜ

Suddi Udaya

ಮಾ.29-ಎ.6: ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ – ಪತ್ರಿಕಾಗೋಷ್ಠಿ

Suddi Udaya

ಮಡಂತ್ಯಾರು: ಹೆದ್ದಾರಿಯ ರಸ್ತೆ ಕಾಮಗಾರಿ ಕಳಪೆ: ಸಾರ್ವಜನಿಕರ ಆಕ್ರೋಶ

Suddi Udaya

ಮಡಂತ್ಯಾರು ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಯಲ್ಲಿ ಔಷಧೀಯ ಸಸ್ಯಗಳ ಮಾಹಿತಿ ಕಾರ್ಯಕ್ರಮ

Suddi Udaya

ಪಾರೆಂಕಿ :ಶ್ರೀ ರಾಮನಗರಹಾರಬೆ ಶ್ರೀ ದುಗಲಾಯ ಮತ್ತು ಗುಳಿಗದೈವಗಳ ನೇಮೋತ್ಸವ

Suddi Udaya
error: Content is protected !!