24 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತಅಪರಾಧ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಪಟ್ಟಣ ಪಂಚಾಯತ್ ನೀರಿನ ನೌಕರನ ಮೇಲೆ ಹೆಜ್ಜೇನು ದಾಳಿ: ರಕ್ಷಣೆಗೆ ಬಂದ ಆಪತ್ಬಾಂಧವ ಇಸ್ಮಾಯಿಲ್ ಸಂಜಯನಗರ

ಬೆಳ್ತಂಗಡಿ: ಬೆಳ್ತಂಗಡಿ ಕೋರ್ಟ್ ಅವರಣದಲ್ಲಿರುವ ಪಂಚಾಯತ್ ನೀರಿನ ಟ್ಯಾಂಕ್ ಮೀಟರ್ ಸರಿಪಡಿಸುವ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ನೀರಿನ ನೌಕರ ರೋನಾಲ್ಡ್ ಸಂಜಯನಗರ ಮೇಲೆ ಹೆಜ್ಜೇನು ದಾಳಿ ನಡೆದಿದ್ದು, ತಕ್ಷಣ ಕಾರ್ಯಪ್ರವೃತರಾದ ಮುಳುಗು ತಜ್ಞ ಇಸ್ಮಾಯಿಲ್ ಸಂಜಯನಗರ ಅವರು ಕೂಡಲೇ ರಕ್ಷಣಾ ಕಾರ್ಯಕ್ಕೆ ದಾವಿಸಿ ಹೆಜ್ಜೇನು ಓಡಿಸಿ ನೌಕರರನ್ನು ನೀರಿನ ಟ್ಯಾಂಕಿನಿಂದ ಕೆಳಗಿಳಿಸಿ ಜೀವ ರಕ್ಷಿಸಿದ್ದಾರೆ.

ಗಂಭೀರ ಗಾಯಗೊಂಡಿರುವ ರೋನಾಲ್ಡ್ ಸಂಜಯನಗರ ಹೆಚ್ಚಿನ ಚಿಕಿತ್ಸೆಗಾಗಿ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

ಈ ರಕ್ಷಣಾ ಕಾರ್ಯದಲ್ಲಿ ಬೆಳ್ತಂಗಡಿ ಸಂಜಯನಗರ ನಿವಾಸಿಗಳಾದ ಅಕ್ಬರ್ ಬೆಳ್ತಂಗಡಿ, ರಶೀದ್ ಬೆಳ್ತಂಗಡಿ, ಬದ್ರು ಮಟ್ಲ, ಶಫೀರ್ ಸಂಜಯನಗರ, ಇರ್ಫಾನ್ ಬೆಳ್ತಂಗಡಿ, ಶರೀಫ್ ಸಂಜಯನಗರ ಹಾಗೂ ಪಟ್ಟಣ ಪಂಚಾಯತ್ ನೌಕರರಾದ ಫ್ರಾನ್ಸಿಸ್ ಬೆಳ್ತಂಗಡಿ ಪಾಲ್ಗೊಂಡಿದ್ದರು.

Related posts

ಕಲಬುರಗಿ ಬಿಜೆಪಿ ಬೃಹತ್‌ ಸಮಾವೇಶದಲ್ಲಿ ಶಾಸಕ ಹರೀಶ್ ಪೂಂಜರಿಂದ ಮತಯಾಚನೆ

Suddi Udaya

ರಾಜ-ಮಹಾರಾಜ ಜೋಡುಕರೆ ಕಂಬಳ: ಮುಳಿಯ ಜ್ಯುವೆಲ್ಸ್ ನಿಂದ ಆಭರಣಗಳ ಪ್ರದರ್ಶನ: ಮುಳಿಯ ಪ್ರಾಪರ್ಟೀಸ್‌ ಬಗ್ಗೆ ಮಾಹಿತಿ ಕೇಂದ್ರ

Suddi Udaya

ಪಣೆಜಾಲು ಶ್ರೀ ಸ್ಟಾರ್ ಯುವಕ ಮಂಡಲ ಮತ್ತು ಮಹಿಳಾ ಮಂಡಲದಿಂದ ಚಿಕಿತ್ಸಾ ನೆರವು

Suddi Udaya

ಎಸ್‌ಪಿಬಿ ಗಾಯನೋತ್ಸವದಲ್ಲಿ ಮಿತ್ತಬಾಗಿಲಿನ ವಿಜಯಲಕ್ಷ್ಮಿ ಶೆಟ್ಟಿ ಅವರಿಂದ ಗಾಯನ

Suddi Udaya

ನಾಳ: ಚಂದ್ರ ಮಂಡಲ ರಥಕ್ಕೆ ಕಲಶಾಭಿಷೇಕ ದೈವಗಳಿಗೆ ಪಲ್ಲಕಿ ಸಮರ್ಪಣೆ

Suddi Udaya

ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಬಗ್ಗೆ ಮಂಗಳೂರು ವಲಯ ಸಮಾಲೋಚನಾ ಸಭೆ

Suddi Udaya
error: Content is protected !!