September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಕಕ್ಕರೆಬೆಟ್ಟು ಮನೆ ಕೆಡವಿ, ಸೊತ್ತುಗಳನ್ನು ಹೊರಗೆ ಎಸೆದ ಪ್ರಕರಣ: ಆರೋಪಿ ವಿರುದ್ಧ ಕೇಸು ದಾಖಲು

ಉಜಿರೆ: ಉಜಿರೆ ಗ್ರಾಮದ ಕಕ್ಕರೆಬೆಟ್ಟು ನಿವಾಸಿ ರಾಜೀವಿ ಎಂಬವರು ಉಜಿರೆ ಗ್ರಾಮದ ಕಕ್ಕರೆಬೆಟ್ಟು ಎಂಬಲ್ಲಿ ಅವರ ಸ್ವಾಧೀನದಲ್ಲಿರುವ ಸರ್ವೆ ನಂ: 406/1 ರಲ್ಲಿ ಮನೆ ನಿರ್ಮಿಸುತ್ತಿದ್ದು ಫೆ.27 ರಂದು 11 ಗಂಟೆಗೆ ರಾಜೀವಿ ಹಾಗೂ ಅವರ ಗಂಡ ಕೆಲಸಕ್ಕೆ ಹೋಗಿದ್ದ ಸಮಯದಲ್ಲಿ ಆರೋಪಿ ರಫೀಕ್ ಎಂಬಾತ ಮನೆಗೆ ಅಕ್ರಮ ಪ್ರವೇಶ ಮಾಡಿ ಮನೆ ಹಾಗೂ ಮನೆಯಲ್ಲಿದ್ದ ಟಿ, ಪಿ, ಪ್ರಿಡ್ಜ್, ಗ್ಯಾಸ್ ಸಿಲಿಂಡರ್, ಪಿಠೋಪಕರಣಗಳನ್ನು, ಮತ್ತು ಬಟ್ಟೆ ಬರೆ, ದಿನಸಿ ಸಾಮಾನು ಇತ್ಯಾದಿ ವಸ್ತುಗಳನ್ನು ಬೀಸಾಡಿದ್ದು ಈ ಕೃತ್ಯದ ವಿಡಿಯೋ ಮಾಡುತ್ತಿದ್ದ ಪಿರ್ಯಾದಿದಾರರ ಮಗಳಿಗೆ ” ನೀನು ಏನಾದರೂ ದೂರನ್ನು ನೀಡಿದರೆ ನಿನ್ನನ್ನು ಹಾಗೂ ನಿನ್ನ ಮನೆಯವರನ್ನು ಜೀವಸಹಿತ ಬೀಡುವುದಿಲ್ಲ,” ಎಂದು ಜೀವ ಬೆದರಿಕೆ ಹಾಕಿರುವುದಾಗಿ ಆರೋಪಿಸಲಾಗಿದೆ.ಈ ಕೃತ್ಯದಿಂದ ರಾಜೀವಿ ಅವರಿಗೆ ಸುಮಾರು ರೂ.10,00,000 ದಷ್ಟು ನಷ್ಟವುಂಟಾಗಿದೆ ಎಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು.

ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಆರೋಪಿಯ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ 329(4), 324(5), 351(2), 352 ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Related posts

ಬೆಳ್ತಂಗಡಿ ಬಸದಿಯಲ್ಲಿ ಮಹಾವೀರ ಜಯಂತಿ ಆಚರಣೆ

Suddi Udaya

ಉಜಿರೆ ಶ್ರೀ ಸಾಯಿ ಕ್ರಿಕೆಟರ್ಸ್ ಸಹಯೋಗದೊಂದಿಗೆ ಲೀಗ್ ಮಾದರಿಯ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ

Suddi Udaya

ಗುರುವಾಯನಕೆರೆ ಕೆರೆ ಬಳಿ ಸೃಷ್ಟಿಯಾದ ಇನ್ನೊಂದು ಕೆರೆ, ರಾಜ್ಯ ಹೆದ್ದಾರಿಯಲ್ಲಿ ಮರಣ ಗುಂಡಿಗಳು, ವಾಹನ ಚಾಲಕರಿಗೆ ಹಾಗೂ ಪಾದಚಾರಿಗಳಿಗೆ ತೀವ್ರ ಸಂಕಷ್ಟ,

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ವಿಗ್ನೇಶ್ ರವರಿಗೆ ಚಿಕಿತ್ಸಾ ನೆರವು

Suddi Udaya

ಕಕ್ಕಿಂಜೆ ಸೈಂಟ್‌ ಜೋಸೆಫ್‌ ಆಸ್ಪತ್ರೆಯ ಸೀಲ್ ಕಳವು

Suddi Udaya

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಸಾನಿಧ್ಯ ಕ್ರಿಸ್ಮಸ್ ಸಂಭ್ರಮ

Suddi Udaya
error: Content is protected !!