September 6, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಲ್ಮಂಜ ಗ್ರಾಮ ಪಂಚಾಯತ್‌ನಲ್ಲಿ ರೈತ ತರಬೇತಿ ಕಾರ್ಯಾಗಾರ

ಕಲ್ಮಂಜ: ಜಿಲ್ಲಾ ಕೃಷಿ ತರಬೇತಿ ಕೇಂದ್ರ ಬೆಳ್ತಂಗಡಿ ಹಾಗೂ ಸ್ಕಂದ ಸಂಜೀವಿನಿ ಒಕ್ಕೂಟ ಕಲ್ಮಂಜ ಇದರ ಸಹಯೋಗದೊಂದಿಗೆ ಫೆ.24ರಂದು ಜಿಲ್ಲಾ ಕೃಷಿ ಸಹಾಯಕ ನಿರ್ದೇಶಕ ರಮೇಶ್ ಅವರ ಉಪಸ್ಥಿತಿಯಲ್ಲಿ ಒಂದು ದಿನದ ರೈತ ತರಬೇತಿಯು ಕಲ್ಮಂಜ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಒಕ್ಕೂಟದ ಅಧ್ಯಕ್ಷೆ ಉಷಾ ಡಿಸೋಜ ಹಾಗೂ ಅತಿಥಿಗಳು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.

ಜಿಲ್ಲಾಕೃಷಿ ತರಬೇತಿ ಕೇಂದ್ರದ ಕೃಷಿ ಅಧಿಕಾರಿ ಗಣೇಶ್ ಮಾತನಾಡಿ ರೈತರು ತರಬೇತಿಯ ಪ್ರಯೋಜನವನ್ನು ಪಡೆದುಕೊಳ್ಳಬೇಕೆಂದು ತಿಳಿಸಿದರು. ಸಂಪನ್ಮೂಲ ವ್ಯಕ್ತಿ ಸುಲೈಮಾನ್ ಬೆಲಾಲ್ ಅಣಬೆ ಕೃಷಿ ತರಬೇತಿಯನ್ನು ಪ್ರಾತ್ಯಕ್ಷಿಕೆಯ ಮೂಲಕ ನಡೆಸಿ ಕೊಟ್ಟರು.

ಪ್ರಗತಿಪರ ರೈತ ಬಿಜು ಸರ್ ಮೊಟ್ಟೆ ಕೋಳಿ ಸಾಕಾಣಿಕೆಯ ಬಗ್ಗೆ ಮಾಹಿತಿ ಹಾಗೂ ತಮ್ಮ ಅನುಭವಗಳನ್ನು ವಿವರವಾಗಿ ತಿಳಿಸಿದರು. ಪಶುವೈದ್ಯಾಧಿಕಾರಿ ಯತೀಶ್ ಕುಮಾರ್ ಮೊಟ್ಟೆ ಕೋಳಿ ಸಾಕಾಣಿಕೆಯ ಬಗ್ಗೆ ಪ್ರೋಜೆಕ್ಟರ್ ಮೂಲಕ ಮಾಹಿತಿಯನ್ನು ನೀಡಿದರು.

ಸಭೆಯಲ್ಲಿ 60ಕ್ಕೂ ಹೆಚ್ಚು ಜನರು ಭಾಗವಹಿಸಿ ಪ್ರಯೋಜನ ಪಡೆದುಕೊಂಡರು.ಕಾರ್ಯಕ್ರಮದಲ್ಲಿ ಒಕ್ಕೂಟದ ಪದಾಧಿಕಾರಿಗಳು ಸಿಬ್ಬಂದಿಗಳು ಭಾಗವಹಿಸಿದ್ದರು.

ಕೃಷಿ ಸಖಿ ಪುಷ್ಪಲತಾ ಸ್ವಾಗತಿಸಿದರು. ಜಯಂತಿ ಪ್ರಾರ್ಥಿಸಿದರು.

Related posts

ಪೆರ್ಮುಡ ಶ್ರೀ ಜಗದೀಶ್ವರ ಭಜನಾ ಮಂಡಳಿ ಕುಣಿತ ಭಜನಾ ಉದ್ಘಾಟನಾ ಕಾರ್ಯಕ್ರಮ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ನೆರಿಯ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ಶಿಶಿಲದಲ್ಲಿ 28ನೇ ವರ್ಷದ ಮೊಸರು ಕುಡಿಕೆ ಉತ್ಸವ, ಪ್ರತಿಭಾ ಪುರಸ್ಕಾರ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ವೈಭವ; ಬೆಳ್ಳಿಯ ಕಲಶ ಸಮರ್ಪಣೆ

Suddi Udaya

ಉಜಿರೆಯ ಮುಹಮ್ಮದ್ ನಿಶ್ವಾನ್ ರವರಿಗೆ ಎನ್ ಎಸ್ ಎಸ್ ಅತ್ಯುತ್ತಮ ಸ್ವಯಂಸೇವಕ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ‘ಮೈ ನೆಕ್ಸ್ಟ್ ಸ್ಟೆಪ್’ ಕಾರ್ಯಕ್ರಮ

Suddi Udaya
error: Content is protected !!