23.7 C
ಪುತ್ತೂರು, ಬೆಳ್ತಂಗಡಿ
April 24, 2026
ಧಾರ್ಮಿಕಪ್ರಮುಖ ಸುದ್ದಿ

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂಭ್ರಮ- ಸಾವಿರಾರು ಭಕ್ತರಿಂದ ಹರಿದು ಬಂದ ಹಸಿರುವಾಣಿ ಹೊರೆಕಾಣಿಕೆ,ಭಜನಾ ಕಮ್ಮಟದ ಉದ್ಘಾಟನೆ- ಆಕರ್ಷಕ ಕಲಾತಂಡ,ಭಜನೆ,ವಿವಿಧ ವೇಷ ಭೂಷಣಗಳಿಂದ ಶೋಭಾಯಾತ್ರೆ

ನಾರಾವಿ: ಇತಿಹಾಸ ಪ್ರಸಿದ್ಧ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಹಸಿರುವಾಣಿ ಹೊರೆಕಾಣಿಕೆಯ ಭವ್ಯಶೋಭಾಯಾತ್ರೆಯ ಮೂಲಕ ಮಾ.1ರಂದು ಚಾಲನೆ ನೀಡಲಾಯಿತು.

ಹಸಿರುವಾಣಿ ಹೊರಕಾಣಿಕೆಯ ವೈಭವದ ಶೋಭಾಯಾತ್ರೆಗೆ ಅಳದಂಗಡಿ‌ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲರು ಚಾಲನೆ ನೀಡಿದರು.

ಅರಸಿಕಟ್ಟೆ ಬಳಿಯಿಂದ ಸಾಗಿದ ಮೆರವಣಿಗೆಯಲ್ಲಿ ಸುಮಾರು 90ಕ್ಕೂ ಹೆಚ್ಚು ವಾಹನದಲ್ಲಿ ಹಸಿರುವಾಣಿಯನ್ನು ತರಲಾಗಿತ್ತು. ಆಕರ್ಷಕ ಕಲಾತಂಡ,ಭಜನೆ,ವಿವಿಧ ವೇಷ ಭೂಷಣಗಳಿಂದ ಶೋಭಾಯಾತ್ರೆಯು ವೈಭವದಿಂದ ಸಾಗಿತು.

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ರಕ್ಷಿತ್ ಶಿವರಾಂ, ಆಡಳಿತ ಮೊಕ್ತೇಸರ ರವೀಂದ್ರ ಪೂಜಾರಿ ಬಾಂದೋಟ್ಟು, ಎಕ್ಸೆಲ್ ಶಿಕ್ದಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಪೆರಾಡಿ ಸಿಎ ಬ್ಯಾಂಕ್ ಅಧ್ಯಕ್ಷ ಸತೀಶ್ ಕೆ ಕಾಶಿಪಟ್ಣ, ನಾರಾವಿ ಸಿಎ ಬ್ಯಾಂಕ್ ಅಧ್ಯಕ್ಷ ಸುಧಾಕರ ಭಂಢಾರಿ, ಉಜಿರೆ ಹಳ್ಳಿಮನೆ ಮಾಲಕ ಪ್ರವೀಣ್ ಫರ್ನಾಂಡೀಸ್, ಪ್ರಧಾನ ಆರ್ಚಕ ಕೃಷ್ಣ ತಂತ್ರಿ ,ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷರಾದ ಮಹಾವೀರ್ ಜೈನ್, ಜಗದೀಶ್ ಅಂಚನ್, ಎನ್.ಶ್ರೀನಿವಾಸ್ ಕಿಣಿ, ಪ್ರಧಾನ ಕಾರ್ಯದರ್ಶಿ ವಿನಯ್ ಹೆಗ್ಡೆ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಜಗದೀಶ್ ಹೆಗ್ಡೆ, ಎನ್ ದಿವಾಕರ ಭಂಢಾರಿ, ಲಕ್ಷ್ಮಣ ಬಂಗೇರ, ಶಂಕರ್, ಯಶೋಧ, ರಶ್ಮಿ ಹಾಗೂ ಸಮಿತಿಯ ಪದಾಧಿಕಾರಿಗಳು,ಸಂಚಾಲಕರು, ಊರವರು,ಭಕ್ತರು ಉಪಸ್ಥಿತರಿದ್ದರು.

Related posts

ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಯಕರ್ತ: ಕೊಲ್ಲಿ ದೇವಸ್ಥಾನದ ಮಾಜಿ ಮೊಕ್ತೇಸರ, ಯಕ್ಷಗಾನ ಅರ್ಥದಾರಿ ಮಂಜುನಾಥ ಕಾಮತ್ ನಿಧನ

Suddi Udaya

ತೋಟತ್ತಾಡಿ: ಮರದಿಂದ ಬಿದ್ದು ವ್ಯಕ್ತಿ ಸಾವು

Suddi Udaya

ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಬೆಳ್ತಂಗಡಿಗೆ ಭೇಟಿ: ಸಾವ೯ಜನಿಕ ಅಹವಾಲು ಸ್ವೀಕಾರ

Suddi Udaya

ವಿಕಲಚೇತನರ ಇಲಾಖೆ ರಾಜ್ಯ ಆಯುಕ್ತೆ ಲತಾ ಕುಮಾರಿ (ಐ.ಎ.ಎಸ್) ಧರ್ಮಸ್ಥಳ ಭೇಟಿ

Suddi Udaya

ಕಲ್ಮಂಜ: ಆಕಸ್ಮಿಕವಾಗಿ ನೀರಿಗೆ ಬಿದ್ದು ಕೃಷಿಕ ಸಾವು

Suddi Udaya

ಗುರುವಾಯನಕೆರೆ ರತ್ನಗಿರಿ ಸನ್ಯಾಸಿ ಗುಳಿಗ ದೈವದ ಸನ್ನಿಧಿಯಲ್ಲಿ ಕಳಶ ತಂಬಿಲ ಪರ್ವ

Suddi Udaya
error: Content is protected !!