September 6, 2026
ಧಾರ್ಮಿಕಪ್ರಮುಖ ಸುದ್ದಿ

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂಭ್ರಮ- ಸಾವಿರಾರು ಭಕ್ತರಿಂದ ಹರಿದು ಬಂದ ಹಸಿರುವಾಣಿ ಹೊರೆಕಾಣಿಕೆ,ಭಜನಾ ಕಮ್ಮಟದ ಉದ್ಘಾಟನೆ- ಆಕರ್ಷಕ ಕಲಾತಂಡ,ಭಜನೆ,ವಿವಿಧ ವೇಷ ಭೂಷಣಗಳಿಂದ ಶೋಭಾಯಾತ್ರೆ

ನಾರಾವಿ: ಇತಿಹಾಸ ಪ್ರಸಿದ್ಧ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಹಸಿರುವಾಣಿ ಹೊರೆಕಾಣಿಕೆಯ ಭವ್ಯಶೋಭಾಯಾತ್ರೆಯ ಮೂಲಕ ಮಾ.1ರಂದು ಚಾಲನೆ ನೀಡಲಾಯಿತು.

ಹಸಿರುವಾಣಿ ಹೊರಕಾಣಿಕೆಯ ವೈಭವದ ಶೋಭಾಯಾತ್ರೆಗೆ ಅಳದಂಗಡಿ‌ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲರು ಚಾಲನೆ ನೀಡಿದರು.

ಅರಸಿಕಟ್ಟೆ ಬಳಿಯಿಂದ ಸಾಗಿದ ಮೆರವಣಿಗೆಯಲ್ಲಿ ಸುಮಾರು 90ಕ್ಕೂ ಹೆಚ್ಚು ವಾಹನದಲ್ಲಿ ಹಸಿರುವಾಣಿಯನ್ನು ತರಲಾಗಿತ್ತು. ಆಕರ್ಷಕ ಕಲಾತಂಡ,ಭಜನೆ,ವಿವಿಧ ವೇಷ ಭೂಷಣಗಳಿಂದ ಶೋಭಾಯಾತ್ರೆಯು ವೈಭವದಿಂದ ಸಾಗಿತು.

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ರಕ್ಷಿತ್ ಶಿವರಾಂ, ಆಡಳಿತ ಮೊಕ್ತೇಸರ ರವೀಂದ್ರ ಪೂಜಾರಿ ಬಾಂದೋಟ್ಟು, ಎಕ್ಸೆಲ್ ಶಿಕ್ದಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಪೆರಾಡಿ ಸಿಎ ಬ್ಯಾಂಕ್ ಅಧ್ಯಕ್ಷ ಸತೀಶ್ ಕೆ ಕಾಶಿಪಟ್ಣ, ನಾರಾವಿ ಸಿಎ ಬ್ಯಾಂಕ್ ಅಧ್ಯಕ್ಷ ಸುಧಾಕರ ಭಂಢಾರಿ, ಉಜಿರೆ ಹಳ್ಳಿಮನೆ ಮಾಲಕ ಪ್ರವೀಣ್ ಫರ್ನಾಂಡೀಸ್, ಪ್ರಧಾನ ಆರ್ಚಕ ಕೃಷ್ಣ ತಂತ್ರಿ ,ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷರಾದ ಮಹಾವೀರ್ ಜೈನ್, ಜಗದೀಶ್ ಅಂಚನ್, ಎನ್.ಶ್ರೀನಿವಾಸ್ ಕಿಣಿ, ಪ್ರಧಾನ ಕಾರ್ಯದರ್ಶಿ ವಿನಯ್ ಹೆಗ್ಡೆ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಜಗದೀಶ್ ಹೆಗ್ಡೆ, ಎನ್ ದಿವಾಕರ ಭಂಢಾರಿ, ಲಕ್ಷ್ಮಣ ಬಂಗೇರ, ಶಂಕರ್, ಯಶೋಧ, ರಶ್ಮಿ ಹಾಗೂ ಸಮಿತಿಯ ಪದಾಧಿಕಾರಿಗಳು,ಸಂಚಾಲಕರು, ಊರವರು,ಭಕ್ತರು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನಾರಾವಿ ಸೂರ್ಯನಾರಾಯಣ ದೇವಸ್ಥಾನಕ್ಕೆ ದೇಣಿಗೆ ಹಸ್ತಾಂತರ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬಿ.ವೈ. ರಾಘವೇಂದ್ರ ಭೇಟಿ

Suddi Udaya

ಕೊಕ್ಕಡ : ಮಾಯಿಲಕೋಟೆ ದೇವಸ್ಥಾನದಲ್ಲಿ ಕಳ್ಳತನ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಅ.7: ವಾಣಿ ಶಿಕ್ಷಣ ಸಂಸ್ಥೆಯಲ್ಲಿ ವಾಣಿ ವಿದ್ಯಾ ಸಮ್ಮಾನ್, ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಭಗವಾನ್ ೧00೮ ಶ್ರೀ ಚಂದ್ರನಾಥ ಸ್ವಾಮಿ ಜಿನಮಂದಿರ ದಲ್ಲಿ ಅಷ್ಟಾಹಿನಿಕ ಪರ್ವ ಪೂಜಾ ಕಾರ್ಯಕ್ರಮ

Suddi Udaya

Suddi Udaya
error: Content is protected !!