September 6, 2026
ಧಾರ್ಮಿಕಪ್ರಮುಖ ಸುದ್ದಿ

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂಭ್ರಮ- ಸಾವಿರಾರು ಭಕ್ತರಿಂದ ಹರಿದು ಬಂದ ಹಸಿರುವಾಣಿ ಹೊರೆಕಾಣಿಕೆ,ಭಜನಾ ಕಮ್ಮಟದ ಉದ್ಘಾಟನೆ- ಆಕರ್ಷಕ ಕಲಾತಂಡ,ಭಜನೆ,ವಿವಿಧ ವೇಷ ಭೂಷಣಗಳಿಂದ ಶೋಭಾಯಾತ್ರೆ

ನಾರಾವಿ: ಇತಿಹಾಸ ಪ್ರಸಿದ್ಧ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಹಸಿರುವಾಣಿ ಹೊರೆಕಾಣಿಕೆಯ ಭವ್ಯಶೋಭಾಯಾತ್ರೆಯ ಮೂಲಕ ಮಾ.1ರಂದು ಚಾಲನೆ ನೀಡಲಾಯಿತು.

ಹಸಿರುವಾಣಿ ಹೊರಕಾಣಿಕೆಯ ವೈಭವದ ಶೋಭಾಯಾತ್ರೆಗೆ ಅಳದಂಗಡಿ‌ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲರು ಚಾಲನೆ ನೀಡಿದರು.

ಅರಸಿಕಟ್ಟೆ ಬಳಿಯಿಂದ ಸಾಗಿದ ಮೆರವಣಿಗೆಯಲ್ಲಿ ಸುಮಾರು 90ಕ್ಕೂ ಹೆಚ್ಚು ವಾಹನದಲ್ಲಿ ಹಸಿರುವಾಣಿಯನ್ನು ತರಲಾಗಿತ್ತು. ಆಕರ್ಷಕ ಕಲಾತಂಡ,ಭಜನೆ,ವಿವಿಧ ವೇಷ ಭೂಷಣಗಳಿಂದ ಶೋಭಾಯಾತ್ರೆಯು ವೈಭವದಿಂದ ಸಾಗಿತು.

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ರಕ್ಷಿತ್ ಶಿವರಾಂ, ಆಡಳಿತ ಮೊಕ್ತೇಸರ ರವೀಂದ್ರ ಪೂಜಾರಿ ಬಾಂದೋಟ್ಟು, ಎಕ್ಸೆಲ್ ಶಿಕ್ದಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಪೆರಾಡಿ ಸಿಎ ಬ್ಯಾಂಕ್ ಅಧ್ಯಕ್ಷ ಸತೀಶ್ ಕೆ ಕಾಶಿಪಟ್ಣ, ನಾರಾವಿ ಸಿಎ ಬ್ಯಾಂಕ್ ಅಧ್ಯಕ್ಷ ಸುಧಾಕರ ಭಂಢಾರಿ, ಉಜಿರೆ ಹಳ್ಳಿಮನೆ ಮಾಲಕ ಪ್ರವೀಣ್ ಫರ್ನಾಂಡೀಸ್, ಪ್ರಧಾನ ಆರ್ಚಕ ಕೃಷ್ಣ ತಂತ್ರಿ ,ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷರಾದ ಮಹಾವೀರ್ ಜೈನ್, ಜಗದೀಶ್ ಅಂಚನ್, ಎನ್.ಶ್ರೀನಿವಾಸ್ ಕಿಣಿ, ಪ್ರಧಾನ ಕಾರ್ಯದರ್ಶಿ ವಿನಯ್ ಹೆಗ್ಡೆ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಜಗದೀಶ್ ಹೆಗ್ಡೆ, ಎನ್ ದಿವಾಕರ ಭಂಢಾರಿ, ಲಕ್ಷ್ಮಣ ಬಂಗೇರ, ಶಂಕರ್, ಯಶೋಧ, ರಶ್ಮಿ ಹಾಗೂ ಸಮಿತಿಯ ಪದಾಧಿಕಾರಿಗಳು,ಸಂಚಾಲಕರು, ಊರವರು,ಭಕ್ತರು ಉಪಸ್ಥಿತರಿದ್ದರು.

Related posts

ಕೊಕ್ಕಡ ಬದ್ರಿಯಾ ಜುಮಾ ಮಸೀದಿಯಲ್ಲಿ ಈದ್ ಮಿಲಾದ್ ಕಾರ್ಯಕ್ರಮ

Suddi Udaya

ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಹಿನ್ನೆಲೆ, ಪೆಟ್ರೋಲ್-ಡೀಸೆಲ್ ಮಿತವಾಗಿ ಬಳಸಿ: ಪ್ರಧಾನಿ ನರೇಂದ್ರ ಮೋದಿ ಸಲಹೆ

Suddi Udaya

ನೆರಿಯ: ಜೈ ಆಂಜನೇಯ ಗಂಡಿಬಾಗಿಲು ಇದರ ಆಶ್ರಯದಲ್ಲಿ 60 ಕೆ.ಜಿ. ವಿಭಾಗದ ಪುರುಷರ ಮುಕ್ತ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ-ವಸಂತ ಟ್ರೋಫಿ 2024

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಉಡುಪಿ, ದ.ಕ ಸಾಧನೆಗೆ ಕ್ಯಾಪ್ಟನ್ ಬ್ರಿಜೇಶ್ ಚೌಟ ಶ್ಲಾಘನೆ

Suddi Udaya

ಲಾಯಿಲ: ಕುಂಟಿನಿ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕಾ ಅಭಿಯಾನ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ–2 ಫಲಿತಾಂಶ: ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ಯಾನ ಪೊನ್ನಮ್ಮ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ

Suddi Udaya
error: Content is protected !!