22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನಕ್ಕೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ

ಬೆಳ್ತಂಗಡಿ: ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮಾರ್ಗದರ್ಶನದೊಂದಿಗೆ ವಿವಿಧ ವೈದಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯುತ್ತಿದ್ದು ಮಾ.1 ರಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.

ಈ ವೇಳೆ ದೇವಳದ ವತಿಯಿಂದ ಶಾಲು ಹೊದಿಸಿ ಶಾಸಕರನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ವಿಠ್ಠಲ ಶೆಟ್ಟಿ ಕೊಲ್ಲೊಟ್ಟು, ಅನುವಂಶೀಯ ಆಡಳಿತ ಮೊಕ್ತೇಸರಾದ ಚಿದಾನಂದ ರಾವ್ ಕೊಲ್ಲಾಜೆ, ಆಡಳಿತ ಮಂಡಳಿ ಅಧ್ಯಕ್ಷ ಸದಾನಂದ ಮೇಲಾಂಟ ಮೊಗರೋಡಿ, ಕೋಶಾಧಿಕಾರಿ ರಕ್ಷಿತ್ ಪಣೆಕ್ಕರ, ಪ್ರಚಾರ ಸಮಿತಿ ಸಂಚಾಲಕ ಪ್ರದೀಪ್ ಶೆಟ್ಟಿ ಮಲೆಂಗಲ್ಲು ಮತ್ತಿತರರು ಉಪಸ್ಥಿತರಿದ್ದರು.

Related posts

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಈದುಲ್ ಅದಾ ಸಾಮೂಹಿಕ ಪ್ರಾರ್ಥನೆ

Suddi Udaya

ಶಿರ್ಲಾಲು: ಬದ್ಯಾರು ಶ್ರೀ ಲೋಕನಾಥೇಶ್ವರ ದೇವಸ್ಥಾನದ ಕಲಾಮಂಟಪಕ್ಕೆ ಶಿಲಾನ್ಯಾಸ

Suddi Udaya

ಧರ್ಮಸ್ಥಳ :ವಿಶೇ‍ಷ ಚೇತನರ ಸಮನ್ವಯ ಗ್ರಾಮ ಸಭೆ: 90 ಫಲಾನುಭವಿಗಳಿಗೆ ರೂ.6.30 ಲಕ್ಷ ಆರ್ಥಿಕ ಪ್ರೋತ್ಸಾಹ ನಿಧಿ ಹಸ್ತಾಂತರ

Suddi Udaya

ಇಂದಬೆಟ್ಟುವಿನಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ ಆಚರಣೆ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ‘ಸ್ಫಟಿಕ’ ವಿದ್ಯಾರ್ಥಿ ಸಂಘ ಉದ್ಘಾಟನಾ ಸಮಾರಂಭ

Suddi Udaya

ಜ.3 -4: ನಲಿಕೆ ಸಮಾಜ ಬಾಂಧವರ 5 ಓವರ್‌ಗಳ 7 ಜನರ ಹೊನಲು ಬೆಳಕಿನ ಸೂಪರ್ ಸಿಕ್ಸ್ ಅಂಡರ್ ಆರ್ಮ್ ಕ್ರಿಕೆಟ್‌ ಪಂದ್ಯಾಟ : ಮಾರಿಗುಡಿ ಫ್ರೆಂಡ್ಸ್ ಟ್ರೋಫಿ – 2026

Suddi Udaya
error: Content is protected !!