September 6, 2026
Uncategorized

ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ಸೇವಾ ನಿವೃತ್ತಿ: ಗೇರುಕಟ್ಟೆ ಸ.ಪ್ರೌ. ಶಾಲೆ ವತಿಯಿಂದ ಗೌರವಾರ್ಪಣೆ

ಬೆಳ್ತಂಗಡಿ: ಸೇವಾ ನಿವೃತ್ತಿ ಹೊಂದುತ್ತಿರುವ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿಯವರಿಗೆ ಗೇರುಕಟ್ಟೆ ಸ.ಪ್ರೌ. ಶಾಲೆ ವತಿಯಿಂದ ಫೆ.28ರಂದು ಗೌರವಾರ್ಪಣೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಂಸ್ಥೆಯ ಉಪಪ್ರಾಂಶುಪಾಲರಾದ ಈಶ್ವರಿಯವರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಸರಳತೆ, ಕರ್ತವ್ಯ- ನಿಷ್ಠೆ ಎಲ್ಲರಿಗೂ ಮಾದರಿಯಾಗಿದೆ. ತಮ್ಮ ಸುದೀರ್ಘ ಸೇವಾವಧಿಯಲ್ಲಿ ಶಿಕ್ಷಣ ಕ್ಷೇತ್ರದ ಸುಧಾರಣೆಗೆ ಅವರು ನೀಡಿದ ಕೊಡುಗೆ ಅಪಾರವಾದದ್ದು, ಶಾಲೆಗಳ ಶೈಕ್ಷಣಿಕ ಪ್ರಗತಿ ಮತ್ತು ಶಿಕ್ಷಕರ ವೃತ್ತಿಪರ ಬೆಳವಣಿಗೆಗೆ ಅವರು ಸದಾ ಮಾರ್ಗದರ್ಶನ ನೀಡುತ್ತಿದ್ದರು ಎಂದು ಬಣ್ಣಿಸಿದರು.

ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಯವರಿಗೆ ಸಂಸ್ಥೆಯ ವತಿಯಿಂದ ಶಾಲು ಹೊದಿಸಿ, ಸ್ಮರಣಿಕೆ ನೀಡಿ, ಫಲಪುಷ್ಪದೊಂದಿಗೆ ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಅವರು ಶಾಲೆಯ ಪ್ರೀತಿ ಮತ್ತು ಗೌರವಕ್ಕೆ ಮನ ತುಂಬಿ ಕೃತಜ್ಞತೆ ಸಲ್ಲಿಸಿದರು. ಶಿಕ್ಷಣ ಮತ್ತು ಸರಿಯಾದ ಜ್ಞಾನ ನಮ್ಮ ಬದುಕನ್ನು ಕಟ್ಟುವುದು. ವಿದ್ಯಾರ್ಥಿಗಳಲ್ಲಿ ಗುರಿ ಸ್ಪಷ್ಟವಾಗಿರಲಿ ಮತ್ತು ಅದನ್ನು ನಿಷ್ಠೆಯಿಂದ ಸಾಧಿಸುವ ಪ್ರಯತ್ನ ಮಾಡಿ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತನ್ನು ಹೇಳಿದರು.

ಸಮಾರಂಭದಲ್ಲಿ ಶಾಲೆಯ ಸಹಶಿಕ್ಷಕರು, ಎಸ್‌ಡಿಎಂಸಿ ಕಾರ್ಯಾಧ್ಯಕ್ಷ ಗೋಪಾಲ ಗೌಡ ಹಾಗೂ ಸಮಿತಿಯ ಸದಸ್ಯರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಆಂಗ್ಲ ಭಾಷಾ ಶಿಕ್ಷಕ ದಿನೇಶ್ ನಿರೂಪಿಸಿ, ವಂದಿಸಿದರು.

Related posts

ಬಜೆಟ್ 2047 ರ ವಿಕಸಿತ ಭಾರತ ಸಾಧನೆಗೆ ಭದ್ರ ಬುನಾದಿ : ಪ್ರತಾಪ್ ಸಿಂಹ ನಾಯಕ್

Suddi Udaya

ರಾಜ್ಯಮಟ್ಟದ ಕರಾಟೆ ಸ್ಪರ್ಧೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ದುರ್ಗಾದೇವಿ) ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಬಳಂಜ: ರಾಜ್ಯ ಮಡಿವಾಳರ ಸಂಘದ ವತಿಯಿಂದ ಸನ್ಮಾನ ಹಾಗೂ ವಿದ್ಯಾರ್ಥಿ ವೇತನ ವಿತರಣೆ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಗದ್ದೆಯಲ್ಲಿ ನೇಜಿ ನಾಟಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಮರದ ಗೆಲ್ಲು ಬಿದ್ದು ಮಹಿಳೆ ಸಾವು

Suddi Udaya
error: Content is protected !!