37.9 C
ಪುತ್ತೂರು, ಬೆಳ್ತಂಗಡಿ
March 6, 2026
ಧಾರ್ಮಿಕಪ್ರಮುಖ ಸುದ್ದಿ

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂಭ್ರಮ- ಸಾವಿರಾರು ಭಕ್ತರಿಂದ ಹರಿದು ಬಂದ ಹಸಿರುವಾಣಿ ಹೊರೆಕಾಣಿಕೆ,ಭಜನಾ ಕಮ್ಮಟದ ಉದ್ಘಾಟನೆ- ಆಕರ್ಷಕ ಕಲಾತಂಡ,ಭಜನೆ,ವಿವಿಧ ವೇಷ ಭೂಷಣಗಳಿಂದ ಶೋಭಾಯಾತ್ರೆ

ನಾರಾವಿ: ಇತಿಹಾಸ ಪ್ರಸಿದ್ಧ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಹಸಿರುವಾಣಿ ಹೊರೆಕಾಣಿಕೆಯ ಭವ್ಯಶೋಭಾಯಾತ್ರೆಯ ಮೂಲಕ ಮಾ.1ರಂದು ಚಾಲನೆ ನೀಡಲಾಯಿತು.

ಹಸಿರುವಾಣಿ ಹೊರಕಾಣಿಕೆಯ ವೈಭವದ ಶೋಭಾಯಾತ್ರೆಗೆ ಅಳದಂಗಡಿ‌ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲರು ಚಾಲನೆ ನೀಡಿದರು.

ಅರಸಿಕಟ್ಟೆ ಬಳಿಯಿಂದ ಸಾಗಿದ ಮೆರವಣಿಗೆಯಲ್ಲಿ ಸುಮಾರು 90ಕ್ಕೂ ಹೆಚ್ಚು ವಾಹನದಲ್ಲಿ ಹಸಿರುವಾಣಿಯನ್ನು ತರಲಾಗಿತ್ತು. ಆಕರ್ಷಕ ಕಲಾತಂಡ,ಭಜನೆ,ವಿವಿಧ ವೇಷ ಭೂಷಣಗಳಿಂದ ಶೋಭಾಯಾತ್ರೆಯು ವೈಭವದಿಂದ ಸಾಗಿತು.

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ರಕ್ಷಿತ್ ಶಿವರಾಂ, ಆಡಳಿತ ಮೊಕ್ತೇಸರ ರವೀಂದ್ರ ಪೂಜಾರಿ ಬಾಂದೋಟ್ಟು, ಎಕ್ಸೆಲ್ ಶಿಕ್ದಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಪೆರಾಡಿ ಸಿಎ ಬ್ಯಾಂಕ್ ಅಧ್ಯಕ್ಷ ಸತೀಶ್ ಕೆ ಕಾಶಿಪಟ್ಣ, ನಾರಾವಿ ಸಿಎ ಬ್ಯಾಂಕ್ ಅಧ್ಯಕ್ಷ ಸುಧಾಕರ ಭಂಢಾರಿ, ಉಜಿರೆ ಹಳ್ಳಿಮನೆ ಮಾಲಕ ಪ್ರವೀಣ್ ಫರ್ನಾಂಡೀಸ್, ಪ್ರಧಾನ ಆರ್ಚಕ ಕೃಷ್ಣ ತಂತ್ರಿ ,ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷರಾದ ಮಹಾವೀರ್ ಜೈನ್, ಜಗದೀಶ್ ಅಂಚನ್, ಎನ್.ಶ್ರೀನಿವಾಸ್ ಕಿಣಿ, ಪ್ರಧಾನ ಕಾರ್ಯದರ್ಶಿ ವಿನಯ್ ಹೆಗ್ಡೆ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಜಗದೀಶ್ ಹೆಗ್ಡೆ, ಎನ್ ದಿವಾಕರ ಭಂಢಾರಿ, ಲಕ್ಷ್ಮಣ ಬಂಗೇರ, ಶಂಕರ್, ಯಶೋಧ, ರಶ್ಮಿ ಹಾಗೂ ಸಮಿತಿಯ ಪದಾಧಿಕಾರಿಗಳು,ಸಂಚಾಲಕರು, ಊರವರು,ಭಕ್ತರು ಉಪಸ್ಥಿತರಿದ್ದರು.

Related posts

ಟಿಪ್ಪರ್ ಬಾಡಿಗೆ ವಿಚಾರದಲ್ಲಿ ಕೊಲೆ ಯತ್ನ ಆರೋಪ : ಇಬ್ಬರ ವಿರುದ್ಧ ಪ್ರತಿದೂರು ದಾಖಲು

Suddi Udaya

ಅ. 25: ಬರೆಂಗಾಯದಲ್ಲಿ ಉಚಿತ ಆರೋಗ್ಯ ಶಿಬಿರ ಮತ್ತು ಬೃಹತ್ ರಕ್ತದಾನ ಶಿಬಿರ

Suddi Udaya

ಮರೋಡಿ: ಗಾಳಿ ಮಳೆಗೆ ಮನೆ ಮೇಲೆ ಬಿದ್ದ ಬೃಹತ್‌ ಗಾತ್ರದ ಮರ, ಪ್ರಾಣಪಾಯದಿಂದ ಪಾರಾದ ಮನೆಯವರು: ಮನೆ ಸಂಪೂರ್ಣ ಹಾನಿ, ಲಕ್ಷಾಂತರ ರೂ. ನಷ್ಟ

Suddi Udaya

ಬಳಂಜ:ಬೊಳ್ಳಾಜೆ ನಿವಾಸಿ ಜಿನ್ನಪ್ಪ ನಿಧನ

Suddi Udaya

ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ಜಿಲ್ಲಾ ಉಪಾಧ್ಯಕ್ಷರಾಗಿ ಯು.ಕೆ ಮುಹಮ್ಮದ್ ಹನೀಫ್ ನೇಮಕ

Suddi Udaya

ಮುಂಡೂರು: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ, ನೂತನ ಯುವಕ ಮಂಡಲಕ್ಕೆ ಚಾಲನೆ, ಬಡ ಕುಟುಂಬಕ್ಕೆ ಆಹಾರ ಕಿಟ್ ವಿತರಣೆ

Suddi Udaya
error: Content is protected !!