ಬೆಳ್ತಂಗಡಿ: ಒಡಿಶಾದ ಭುವನೇಶ್ವರ ನಲ್ಲಿ ರಾಷ್ಟ್ರಮಟ್ಟದ ವನಿತೆಯರ ವಾಲಿಬಾಲ್ ಪಂದ್ಯಾಟ ನಡೆಯಲಿದ್ದು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಲಾಸ್ಯ ಕರ್ನಾಟಕ ರಾಜ್ಯ ವನಿತೆಯರ ವಾಲಿಬಾಲ್ ತಂಡದಿಂದ ಪ್ರತಿನಿಧಿಸಲಿದ್ದಾಳೆ.
ಇವಳು ಉಜಿರೆಯ ಉದ್ಯಮಿ ಸಿದ್ಧಾಂತಕೀರ್ತಿರಾಜ ಮತ್ತು ಭಾಗ್ಯಶ್ರೀ ದಂಪತಿಯ ಸುಪುತ್ರಿ. ಇವಳು ಕಳೆದ ಐದು ವರ್ಷಗಳಿಂದ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರಮೇಶ್ ಇವರ ಮಾರ್ಗದರ್ಶನದಲ್ಲಿ ತರಬೇತಿ ಪಡೆಯುತ್ತಿದ್ದಾಳೆ.
ಇವರ ಈ ಸಾಧನೆಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಡಾ. ಸತೀಶ್ಚಂದ್ರ ಎಸ್, ಪ್ರಾಂಶುಪಾಲರಾದ ಪ್ರೊ ವಿಶ್ವನಾಥ ಪಿ, ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಶುಭ ಹಾರೈಸಿದ್ದಾರೆ.











