23.5 C
ಪುತ್ತೂರು, ಬೆಳ್ತಂಗಡಿ
June 8, 2026
ಕ್ರೀಡಾ ಸುದ್ದಿಬೆಳ್ತಂಗಡಿವರದಿ

ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟ – ಕರ್ನಾಟಕ ರಾಜ್ಯ ತಂಡಕ್ಕೆ ಲಾಸ್ಯ ಆಯ್ಕೆ

ಬೆಳ್ತಂಗಡಿ: ಒಡಿಶಾದ ಭುವನೇಶ್ವರ ನಲ್ಲಿ ರಾಷ್ಟ್ರಮಟ್ಟದ ವನಿತೆಯರ ವಾಲಿಬಾಲ್ ಪಂದ್ಯಾಟ ನಡೆಯಲಿದ್ದು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಲಾಸ್ಯ ಕರ್ನಾಟಕ ರಾಜ್ಯ ವನಿತೆಯರ ವಾಲಿಬಾಲ್ ತಂಡದಿಂದ ಪ್ರತಿನಿಧಿಸಲಿದ್ದಾಳೆ.

ಇವಳು ಉಜಿರೆಯ ಉದ್ಯಮಿ ಸಿದ್ಧಾಂತಕೀರ್ತಿರಾಜ ಮತ್ತು ಭಾಗ್ಯಶ್ರೀ ದಂಪತಿಯ ಸುಪುತ್ರಿ. ಇವಳು ಕಳೆದ ಐದು ವರ್ಷಗಳಿಂದ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರಮೇಶ್ ಇವರ ಮಾರ್ಗದರ್ಶನದಲ್ಲಿ ತರಬೇತಿ ಪಡೆಯುತ್ತಿದ್ದಾಳೆ.

ಇವರ ಈ ಸಾಧನೆಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಡಾ. ಸತೀಶ್ಚಂದ್ರ ಎಸ್, ಪ್ರಾಂಶುಪಾಲರಾದ ಪ್ರೊ ವಿಶ್ವನಾಥ ಪಿ, ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಶುಭ ಹಾರೈಸಿದ್ದಾರೆ.

Related posts

ಬೆಳ್ತಂಗಡಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಶೃಂಗೇರಿ ಶಾರದಾ ಮಠಕ್ಕೆ ಭೇಟಿ, ಪುಂಡಿ ಪಣವು ಸಮರ್ಪಣೆ

Suddi Udaya

ಕಕ್ಕಿಂಜೆಯಲ್ಲಿ ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸ್ಥಳಾಂತರಿತ ಶಾಖೆ ಉದ್ಘಾಟನೆ

Suddi Udaya

ಉಜಿರೆ: ಅನುಗ್ರಹ ಶಾಲಾ ಮಂತ್ರಿಮಂಡಲದ ಪ್ರಮಾಣ ವಚನ ಸ್ವೀಕಾರ ಸಮಾರಂಭ

Suddi Udaya

ಕಿರುತೆರೆ ನಿರ್ದೇಶಕ ಸುಭಾಷ್ ಅರ್ವರವರಿಗೆ ಉತ್ತಮ ನಿರ್ದೇಶಕ ಅನುಬಂಧ ಆವಾರ್ಡ್-2023: ಮಂಗಳ ಗೌರಿ, ರಂಗನಾಯಕಿ, ಗೀತಾ, ಕೆಂಡಸಂಪಿಗೆ ಧಾರಾವಾಹಿ ನಿರ್ದೇಶನ

Suddi Udaya

ಮಡಂತ್ಯಾರು ವಲಯದ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಮಹಾಸಭೆ

Suddi Udaya

“ಒಂದೇ ಭಾರತ ಒಂದೇ ತುರ್ತು ಕರೆ-112” ಸಹಾಯವಾಣಿ ಪ್ರಾರಂಭ

Suddi Udaya
error: Content is protected !!