September 6, 2026
ಕ್ರೀಡಾ ಸುದ್ದಿಬೆಳ್ತಂಗಡಿವರದಿ

ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟ – ಕರ್ನಾಟಕ ರಾಜ್ಯ ತಂಡಕ್ಕೆ ಲಾಸ್ಯ ಆಯ್ಕೆ

ಬೆಳ್ತಂಗಡಿ: ಒಡಿಶಾದ ಭುವನೇಶ್ವರ ನಲ್ಲಿ ರಾಷ್ಟ್ರಮಟ್ಟದ ವನಿತೆಯರ ವಾಲಿಬಾಲ್ ಪಂದ್ಯಾಟ ನಡೆಯಲಿದ್ದು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಲಾಸ್ಯ ಕರ್ನಾಟಕ ರಾಜ್ಯ ವನಿತೆಯರ ವಾಲಿಬಾಲ್ ತಂಡದಿಂದ ಪ್ರತಿನಿಧಿಸಲಿದ್ದಾಳೆ.

ಇವಳು ಉಜಿರೆಯ ಉದ್ಯಮಿ ಸಿದ್ಧಾಂತಕೀರ್ತಿರಾಜ ಮತ್ತು ಭಾಗ್ಯಶ್ರೀ ದಂಪತಿಯ ಸುಪುತ್ರಿ. ಇವಳು ಕಳೆದ ಐದು ವರ್ಷಗಳಿಂದ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರಮೇಶ್ ಇವರ ಮಾರ್ಗದರ್ಶನದಲ್ಲಿ ತರಬೇತಿ ಪಡೆಯುತ್ತಿದ್ದಾಳೆ.

ಇವರ ಈ ಸಾಧನೆಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಡಾ. ಸತೀಶ್ಚಂದ್ರ ಎಸ್, ಪ್ರಾಂಶುಪಾಲರಾದ ಪ್ರೊ ವಿಶ್ವನಾಥ ಪಿ, ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಶುಭ ಹಾರೈಸಿದ್ದಾರೆ.

Related posts

ನೆಲ್ಯಾಡಿ ಅಲ್ಫೋನ್ಸ ಚರ್ಚ್ ವತಿಯಿಂದ ಡೇವಿಡ್ ಜೈಮಿ ಕೊಕ್ಕಡ ರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ಬಂಟ ಕ್ರೀಡೋತ್ಸವ

Suddi Udaya

ಬೆಳ್ತಂಗಡಿ ವಕೀಲರ ಸಂಘಕ್ಕೆ ರಾಜ್ಯ ವಕೀಲರ ಪರಿಷತ್ತಿನ ನೂತನ ಸದಸ್ಯರಾಗಿ ಆಯ್ಕೆಯಾದ ನಾರಾಯಣ ಸ್ವಾಮಿ ಭೇಟಿ

Suddi Udaya

ಜಿಲ್ಲಾ ಮಹಿಳಾ ಕಾಂಗ್ರೆಸ್‌ನ ನೂತನ ಕಾರ್ಯದರ್ಶಿಯಾಗಿ ಶಿಲ್ಪಾ ಕಾಶಿಪಟ್ಣ ಆಯ್ಕೆ

Suddi Udaya

ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿನಿ ಆಶಿತಾ ಜೈನ್ ರವರಿಗೆ ರಾಷ್ಟ್ರಮಟ್ಟದ ಸಿಇಇ ಯಲ್ಲಿ 8ನೇ ರ್ಯಾಂಕ್ ಹಾಗೂ ರಾಜ್ಯದಲ್ಲಿ 2 ರ್ಯಾಂಕ್

Suddi Udaya

ಕಡಿರುದ್ಯಾವರದಲ್ಲಿ ಒಂಟಿ ಸಲಗದ ಹಾವಳಿ: ಅಪಾರ ಅಡಿಕೆ ಗಿಡ, ಬಾಳೆ ಗಿಡಗಳಿಗೆ ಹಾನಿ

Suddi Udaya
error: Content is protected !!